RCB vs PBKS: ಟಿಮ್ ಡೇವಿಡ್ ಹೋರಾಟ ವ್ಯರ್ಥ: ಆರ್ಸಿಬಿಗೆ ತವರಿನಲ್ಲಿ ಮುಂದುವರಿದ ಸೋಲು
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಸೋಲಿನ ಸರಣಿ ಮುಂದುವರೆದಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 5 ವಿಕೆಟ್ಗಳ ಗೆಲುವು ಸಾಧಿಸಿದೆ. ತವರಿನಲ್ಲಿ ಸತತ ಮೂರನೇ ಸೋಲು ಕಂಡ ಆರ್ ಸಿಬಿಗೆ ಪ್ಲೇಆಫ್ ಹಾದಿ ಕಠಿಣವಾಗುತ್ತಾ ಎನ್ನುವ ಆತಂಕ ಶುರುವಾಗಿದೆ.
ಮಳೆಯಿಂದ ತಡವಾಗಿ ಆರಂಭವಾಗಿದ್ದರಿಂದ ಪಂದ್ಯವನ್ನು 14 ಓವರ್ ಗಳಿಗೆ ಸೀಮಿತಗೊಳಿಸಲಾಯಿತು. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಪಂಜಾಬ್ ಕಿಂಗ್ಸ್ ಬೌಲಿಂಗ್ ದಾಳಿಗೆ ಸಿಕ್ಕಿದ ಆರ್ ಸಿಬಿ 14 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಗಳಿಸಿತು. ತವರಿನ ಅಂಗಳದಲ್ಲಿ ಆರ್ ಸಿಬಿ ಬ್ಯಾಟಿಂಗ್ ವೈಫಲ್ಯ ಮತ್ತೆ ಮುಂದುವರೆಯಿತು.

ಟಿಮ್ ಡೇವಿಡ್ ಮಾತ್ರ ಆರ್ ಸಿಬಿಗೆ ಆಪತ್ಭಾಂಧವನಾದರು. ರಜತ್ ಪಟಿದಾರ್ ಮತ್ತು ಟಿಮ್ ಡೇವಿಡ್ ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ಮೊತ್ತ ಗಳಿಸಲಿಲ್ಲ. ಫಿಲ್ ಸಾಲ್ಟ್ 4 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಾಯಕ ರಜತ್ ಪಟಿದಾರ್ 23 ರನ್ ಗಳಿಸಿದರೂ ದೊಡ್ಡ ಸವಾಲಿನ ಮೊತ್ತ ಕಲೆಹಾಕಲು ಇದು ಸಾಕಾಗಲಿಲ್ಲ. ಲಿವಿಂಗ್ಸ್ಟೋನ್ 4 ರನ್ ಗಳಿಸಿ ಔಟಾದರೆ, ಜಿತೇಶ್ ಶರ್ಮಾ 2 ರನ್, ಕೃನಾಲ್ ಪಾಂಡ್ಯ ಕೇವಲ 1 ರನ್ ಗಳಿಸಿದರು. ಇಂಪ್ಯಾಕ್ಟ್ ಪ್ಲೇಯರ್ ಆಗಿ ಮೊದಲ ಬಾರಿ ಆಡುವ ಅವಕಾಶ ಪಡೆದ ಕನ್ನಡಿಗ ಮನೋಜ್ ಭಾಂಡಗೆ ಕೇವಲ 1 ರನ್ ಗಳಿಸಿದರು.
ಟಿಮ್ ಡೇವಿಡ್ ಮಾತ್ರ ಆರ್ ಸಿಬಿಗೆ ಆಪದ್ಭಾಂಧವರಾದರು. ಏಕಾಂಗಿ ಹೋರಾಟ ನೀಡಿದ ಅವರು 26 ಎಸೆತಗಳಲ್ಲಿ 5 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 50 ರನ್ ಗಳಿಸಿದರು. ಭುವನೇಶ್ವರ್ ಕುಮಾರ್ 8 ರನ್ ಗಳಿಸಿ ಔಟಾದರು. ಅರ್ಷದೀಪ್ ಸಿಂಗ್, ಮಾರ್ಕೋ ಯಾನ್ಸೆನ್, ಯುಜ್ವೇಂದ್ರ ಚಹಾಲ್, ಹಪ್ರೀತ್ ಬ್ರಾರ್ ತಲಾ ಎರಡು ವಿಕೆಟ್ ಪಡೆದರೆ, ಕ್ಸೇವಿಯರ್ ಬಾರ್ಲೆಟ್ ಒಂದು ವಿಕೆಟ್ ಪಡೆದರು.
ನೇಹಲ್ ವಧೇರಾ ಜವಾಬ್ದಾರಿಯುತ ಆಟ
ಈ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಸಾಧಾರಣ ಆರಂಭ ಪಡೆಯಿತು. ಪ್ರಿಯಾಂಶ್ ಆರ್ಯ 16 ರನ್ ಗಳಿಸಿದರೆ, ಪ್ರಭ್ಸಿಮ್ರನ್ ಸಿಂಗ್ 13 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ ಕೇವಲ 7 ರನ್ ಗಳಿಸಿ ಔಟಾದರೆ, ಜೋಶ್ ಇಂಗ್ಲಿಸ್ 14 ರನ್ ಗಳಿಸಿದರು. 53 ರನ್ ಗಳಿಸಿ 4 ವಿಕೆಟ್ ಕಳೆದುಕೊಂಡಿದ್ದ ಪಂಜಾಬ್ ಕಿಂಗ್ಸ್ ಆತಂಕಗೊಂಡರೂ ನೇಹಲ್ ವಧೇರಾ ತಂಡಕ್ಕೆ ಆಸರೆಯಾದರು. 19 ಎಸೆತಗಳಲ್ಲಿ 3 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 33 ರನ್ ಗಳಿಸುವ ಮೂಲಕ ಪಂಜಾಬ್ಗೆ ಸುಲಭ ಗೆಲುವು ತಂದುಕೊಟ್ಟರು. ಜೋಶ್ ಹೇಜಲ್ವುಡ್ 3 ಓವರ್ ಗಳಲ್ಲಿ ಕೇವಲ 13 ರನ್ ನೀಡಿ 3 ವಿಕೆಟ್ ಪಡೆದರೂ ಆರ್ ಸಿಬಿ ತಂಡಕ್ಕೆ ಗೆಲುವು ತಂದುಕೊಡಲು ಆಗಲಿಲ್ಲ.
-
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಸುಮ್ನೆ ಬಾಲ್ ಕೊಡೋ ಮಾರಾಯ.. ನಾ ಕೊಡಕಿಲ್ಲ ಏನ್ ಮಾಡ್ತೀರಾ? ಟಿಮ್ ಡೇವಿಡ್-ಅಂಪೈರ್ ಫನ್ನಿ ವಿಡಿಯೋ ಭಾರೀ ವೈರಲ್ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications