PBKS vs LSG: ರಿಷಬ್ ಪಂತ್ ಪಡೆಗೆ ತವರಿನಲ್ಲೇ ಮುಖಭಂಗ; ಪಂಜಾಬ್ ಕಿಂಗ್ಸ್ಗೆ ಭರ್ಜರಿ ಗೆಲುವು
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ರಿಷಬ್ ಪಂತ್ ಪಡೆಗೆ ತವರಿನಲ್ಲೇ ಮುಖಭಂಗವಾಗಿದ್ದು ಪಂಜಾಬ್ ಕಿಂಗ್ಸ್ ಎರಡನೇ ಪಂದ್ಯವನ್ನೂ ಗೆದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪಂಜಾಬ್ ಕಿಂಗ್ಸ್ ಬಿಗಿ ಬೌಲಿಂಗ್ ದಾಳಿಯೆದುರು ರನ್ ಗಳಿಸಲು ಪರದಾಡಿತು. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದರೂ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.

ಮಿಚೆಲ್ ಮಾರ್ಷ್ ಮೊದಲನೇ ಎಸೆತದಲ್ಲೇ ಔಟಾಗಿದ್ದು ತಂಡಕ್ಕೆ ದೊಡ್ಡ ಆಘಾತವಾಯಿತು. ಏಡೆನ್ ಮಾರ್ಕ್ರಮ್ 18 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರೆ, ನಿಕೋಲಸ್ ಪೂರನ್ 30 ಎಸೆತಗಳಲ್ಲಿ 44 ರನ್ ಗಳಿಸಿದರು. ನಾಯಕ ರಿಷಬ್ ಪಂತ್ ಮೂರನೇ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದರು. 5 ಎಸೆತಗಳಲ್ಲಿ ಕೇವಲ 2 ರನ್ ಗಳಿಸಿ ಔಟಾದರು.
ಆಯುಷ್ ಬದೋನಿ 41 ರನ್ ಗಳಿಸಿದರೆ, ಡೇವಿಡ್ ಮಿಲ್ಲರ್ 19 ರನ್ ಗಳಿಸಿದರು. ಅಬ್ದುಲ್ ಸಮದ್ 12 ಎಸೆತಗಳಲ್ಲಿ 27 ರನ್ ಗಳಿಸುವ ಮೂಲಕ ಕೊನೆಯಲ್ಲಿ ತಂಡದ ಸ್ಕೋರ್ 170 ರ ಗಡಿದಾಟಲು ಕಾರಣವಾದರು. ಪಂಜಾಬ್ ಕಿಂಗ್ಸ್ನ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದು ಮಿಂಚಿದರು. ಲೋಕಿ ಫರ್ಗ್ಯುಸನ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕೊ ಯಾನ್ಸೆನ್ ಹಾಗೂ ಯುಜ್ವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದರು.
ಶ್ರೇಯಸ್, ಪ್ರಭ್ಸಿಮ್ರನ್, ವಧೇರಾ ಅಬ್ಬರ
172 ರನ್ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಆರಂಭದಲ್ಲಿ ಪ್ರಿಯಾಂಶ್ ಆರ್ಯ (8 ರನ್) ಅವರ ವಿಕೆಟ್ ಕಳೆದುಕೊಂಡಿತು. ಆದರೆ ಬಳಿಕ ಜೊತೆಯಾದ ಪ್ರಭ್ಸಿಮ್ರನ್ ಸಿಂಗ್ ಮತ್ತು ನಾಯಕ ಶ್ರೇಯಸ್ ಅಯ್ಯರ್ ಎರಡನೇ ವಿಕೆಟ್ಗೆ 84 ರನ್ ಕಲೆಹಾಕುವ ಮೂಲಕ ತಂಡದ ಗೆಲುವನ್ನು ಸುಲಭವಾಗಿಸಿದರು. ಪ್ರಭ್ಸಿಮ್ರನ್ ಸಿಂಗ್ 34 ಎಸೆತಗಳಲ್ಲಿ 9 ಬೌಂಡರಿ 3 ಭರ್ಜರಿ ಸಿಕ್ಸರ್ ಸಹಿತ 69 ರನ್ ಗಳಿಸಿದರು. ನಾಯಕ ಶ್ರೇಯಸ್ ಅಯ್ಯರ್ 30 ಎಸೆತಗಳಲ್ಲಿ 3 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 52 ರನ್ ಗಳಿಸಿದರು. ನೇಹಲ್ ವಧೇರಾ 25 ಎಸೆತಗಳಲ್ಲಿ 3 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 43 ರನ್ ಗಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications