India vs Afghanistan: ತಾಳ್ಮೆ ಕಳೆದುಕೊಂಡ ಕೋಚ್ ರಾಹುಲ್ ದ್ರಾವಿಡ್
ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಗುರುವಾರ ಭಾರತ ಅಫ್ಘಾನಿಸ್ತಾನದ ವಿರುದ್ಧ ಸೆಣೆಸಲು ಸಜ್ಜಾಗಿದೆ. ಪಂದ್ಯಕ್ಕೂ ಮುನ್ನ ತಂಡದ ಕೋಚ್ ರಾಹುಲ್ ದ್ರಾವಿಡ್ ಮಾಧ್ಯಮದವರ ಜೊತೆ ಮಾತನಾಡುವಾಗ ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ.
ಅಫ್ಘಾನಿಸ್ತಾನ ವಿರುದ್ಧದ ಟಿ 20 ವಿಶ್ವಕಪ್ 2024 ಪಂದ್ಯದ ಮೊದಲು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದಾಗ ಕೆಲವು ಕಹಿ ನೆನಪುಗಳನ್ನು ನೆನಪಿಸಿಕೊಂಡರು.

ವರದಿಗಾರರು ಅನವಶ್ಯಕವಾಗಿ ಪ್ರಶ್ನೆ ಕೇಳಿದ್ದು ರಾಹುಲ್ ದ್ರಾವಿಡ್ ಅವರ ಕೋಪಕ್ಕೆ ಕಾರಣವಾಯಿತು. ವೆಸ್ಟ್ ಇಂಡೀಸ್ನ ಬಾರ್ಬಡೋಸ್ನಲ್ಲಿ ಅವರು ಆಟಗಾರರಾಗಿ ಉತ್ತಮ ಪ್ರದರ್ಶನ ನೀಡಿಲ್ಲ, ವರದಿಗಾರರು ಬಾರ್ಬಡೋಸ್ನಲ್ಲಿ ನಿಮ್ಮ ಅಂಕಿ ಅಂಶಗಳನ್ನು ನೆನಪಿಸುತ್ತಿದ್ದಂತೆ ದ್ರಾವಿಡ್ ಕೋಪ ಮಾಡಿಕೊಂಡರು, ತಾಳ್ಮೆಯನ್ನು ಕಳೆದುಕೊಂಡರು.
ವರದಿಗಾರ ಕೇಳಿದ್ದೇನು?
ವರದಿಗಾರನಿಗೆ ಖಡಕ್ ಆಗಿ ಉತ್ತರ ಕೊಟ್ಟ ಅವರು, ನಾನು ಅದೆಲ್ಲವನ್ನು ಮರೆತಿದ್ದೇನೆ. ಈಗ ತರಬೇತುದಾರನಾಗಿ ಮಾತ್ರ ಕೆಲಸ ಮಾಡುತ್ತಿದ್ದೇನೆ, ಆಟಗಾರನಾಗಿ ಹಿಂದೆ ಹೇಗೆ ಪ್ರದರ್ಶನ ನೀಡಿದ್ದರ ಬಗ್ಗೆ ಯೋಚನೆ ಮಾಡುವುದಿಲ್ಲ ಎಂದು ಹೇಳಿದರು.
ವರದಿಗಾರ, ನೀವು ಆಟಗಾರನಾಗಿ ಇಲ್ಲಿ ಆಡಿದ್ದೀರಿ. 1997ರಲ್ಲಿ ಟೆಸ್ಟ್ನ ಅತ್ಯುತ್ತಮ ನೆನಪುಗಳಲ್ಲವೇ? ಎಂದು ಕೇಳಿದರು. ಅದಕ್ಕೆ ರಾಹುಲ್ ದ್ರಾವಿಡ್, ತುಂಬಾ ಧನ್ಯವಾದಗಳು ಗೆಳೆಯ, ನಾನು ಇಲ್ಲಿ ಇತರೆ ಕೆಲವು ಉತ್ತಮ ನೆನಪುಗಳನ್ನು ಹೊಂದಿದ್ದೇನೆ ಎಂದರು.
1997ರಲ್ಲಿ ಭಾರತ ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ದ್ರಾವಿಡ್ ಬಾರ್ಬಡೋಸ್ನಲ್ಲಿ ಆಡಿದ್ದರು. ಬ್ರಿಡ್ಜ್ಟೌನ್ನಲ್ಲಿ ನಡೆದ ಟೆಸ್ಟ್ನಲ್ಲಿ ಭಾರತ ತಂಡ 38 ರನ್ಗಳಿಂದ ಸೋಲನುಭವಿಸಿತ್ತು. ದ್ರಾವಿಡ್ 78 ಮತ್ತು 2 ರನ್ ಗಳಿಸಿದರು. ಈಗ ಭಾರತ ತಂಡದ ಕೋಚ್, ಲೆಜೆಂಡರಿ ಕ್ರಿಕೆಟಿಗ ಕೇವಲ ಈಗ ಮಾಡಬೇಕಿರುವ ಕೆಲಸದ ಬಗ್ಗೆ ಯೋಚಿಸುತ್ತಿದ್ದಾರೆಯೇ ಹೊರತು 25 ವರ್ಷಗಳ ಹಿಂದೆ ನಡೆದದ್ದಲ್ಲ ಎಂದು ಹೇಳಿದರು.
"ನಾನು ಇನ್ನು ಮುಂದೆ ಆಟಗಾರನಾಗಿ ನನ್ನ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ. ನಾಳೆಯತ್ತ ಗಮನಹರಿಸಿ ಮತ್ತು ನಾಳೆ ಉತ್ತಮ ಫಲಿತಾಂಶವನ್ನು ಪಡೆಯಲು ಪ್ರಯತ್ನಿಸಿ" ಎಂದು ಹೇಳಿದರು.
ಭಾರತ ಅಫ್ಘಾನಿಸ್ತಾನ ಪಂದ್ಯ
ಲೀಗ್ ಹಂತದಲ್ಲಿ ಅಜೇಯವಾಗಿ ಉಳಿದು ಸೂಪರ್ 8 ಹಂತಕ್ಕೆ ಪ್ರವೇಶಿಸಿದ ಭಾರತ, ಇಂದು ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಬಾರ್ಬಡೋಸ್ನ ಕೆನ್ಸಿಂಗ್ಟ್ನ ಓವಲ್ನಲ್ಲಿ ರೋಹಿತ್ ಶರ್ಮಾ ಪಡೆ ಅಫ್ಘಾನಿಸ್ತಾವನ್ನು ಎದುರಿಸಲಿದೆ.
ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಯುಎಸ್ಎನಲ್ಲಿ ಆಡಿರುವ ಭಾರತಲಕ್ಕೆ ಈಗ ವೆಸ್ಟ್ ಇಂಡೀಸ್ನ ಪಿಚ್ಗಳಿಗೆ ಹೊಂದಿಕೊಳ್ಳುವುದು ಸವಾಲಾಗಿದೆ. ಅಫ್ಘಾನಿಸ್ತಾನ ಅತ್ಯುತ್ತಮ ಸ್ಪಿನ್ ದಾಳಿಯನ್ನು ಹೊಂದಿದ ತಂಡವಾಗಿದ್ದು, ಭಾರತ ಅವರನ್ನು ಹೇಗೆ ಎದುರಿಸಲಿದೆ ಎನ್ನುವುದು ಕುತೂಹಲಕಾರಿಯಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications