Virat Kohli: ಕಿಂಗ್ ಕೊಹ್ಲಿ ಕಾಲಿಗೆ ಬಿದ್ದ ರಾಯಚೂರಿನ ಯುವಕ ಹೇಳಿದ್ದೇನು..? ಆ ಕ್ಷಣ ಏನಾಯ್ತು..?
ಬೆಂಗಳೂರು, ಏಪ್ರಿಲ್ 02: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಪಂಬಾಬ್ ಕಿಂಗ್ಸ್ ನಡುವೆ ಐಪಿಎಲ್ ಪಂದ್ಯ ನಡೆಯುವ ವೇಳೆ ಅಭಿಮಾನಿಯೊಬ್ಬ ಮೈದಾನದೊಳಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದ ಘಟನೆ ನಡೆದಿತ್ತು.
ವಿರಾಟ್ ಕೊಹ್ಲಿಯ ಹುಚ್ಚು ಅಭಿಮಾನಿಯಾಗಿರುವ ರಾಯಚೂರು ಮೂಲದ ಯುವಕ, ಬಿಗಿ ಭದ್ರತೆಯನ್ನು ಭೇಧಿಸಿ ವಿರಾಟ್ ಕೊಹ್ಲಿ ಬಳಿಗೆ ತೆರಳಿ ಆಶೀರ್ವಾದ ಪಡೆದಿದ್ದಾನೆ. ಈತ ಮೂಲತಃ ರಾಯಚೂರು ನಗರದ ಎಲ್ಬಿಎಸ್ ನಗರದವನಾಗಿದ್ದು, ಯುವಕನ ಹೆಸರು ಚಿನ್ನಾ. ಈ ಘಟನೆಯ ಬಗ್ಗೆ ಹಾಗೂ ಆ ಕ್ಷಣದಲ್ಲಿ ಏನಾಯಿತು ಎನ್ನುವುದರ ಬಗ್ಗೆ ಸ್ವತಃ ಯುವಕನೇ ಮಾತನಾಡಿದ್ದಾನೆ. ಖಾಸಗಿ ಮಾಧ್ಯಮವೊಂದರ ಜೊತೆ ಚಿನ್ನಾ ಮಾತನಾಡಿದ್ದಾನೆ.

"ಮೊದಲಿನಿಂದಲೂ ವಿರಾಟ್ ಕೊಹ್ಲಿ ಸರ್ ಅವರನ್ನು ಭೇಟಿಯಾಗಬೇಕು ಎನ್ನುವ ಕನಸಿತ್ತು. ಆ ಕನಸು ಈಗ ನನಸಾಗಿದೆ. ಈ ಜನ್ಮಕ್ಕೆ ಇಷ್ಟೇ ಸಾಕು. ಅವರ ಪಾದಗಳನ್ನು ಮುಟ್ಟಿರುವುದು ನನಗೆ ದೇವರೇ ವರ ಕೊಟ್ಟಂತೆ ಆಯ್ತು. ನನ್ನ ಬಾಸ್ ಮುಂದೆ ಕಂಡಾಗ ನನಗೆ ಭದ್ರತಾ ಸಿಬ್ಬಂದಿ ಯಾರೂ ಕಾಣಲಿಲ್ಲ. ಅವರನೆಲ್ಲಾ ದಾಟಿ ಹೋದೆ ನಾನು. ಆಗಿದ್ದಾಗಲೀ ಅಂತಾ ಭೇಟಿ ಮಾಡಲು ಹೋದೆ."
"ವಿರಾಟ್ ಕೊಹ್ಲಿ ನನ್ನ ಸ್ಪೂರ್ತಿ. ಅವರ ಆಶೀರ್ವಾದ ನನಗೆ ಸಿಕ್ಕಿದೆ. ಹೀಗಾಗಿ ನನಗೆ ಬಹಳ ಖುಷಿ ಇದೆ. ಈ ವೇಳೆ ನಾನು ನಿಮ್ಮ ಬಿಗ್ ಫ್ಯಾನ್ ಸರ್ ಎಂದೆ, ಕೊಹ್ಲಿ ಥ್ಯಾಂಕ್ಸ್ ಎಂದರು. ಅಲ್ಲದೇ ಭದ್ರತಾ ಸಿಬ್ಬಂದಿ ಬಳಿಕ ಹೊಡೆಯಬೇಡಿ ಸುಮ್ಮನೆ ಕರೆದುಕೊಂಢು ಹೋಗಿ ಎಂದು ಹೇಳಿದರು. ಭಯದಲ್ಲೇ ಕೊಹ್ಲಿಯನ್ನ ಹಗ್ ಮಾಡಿದೆ. ಭೇಟಿಯಾದ ಎರಡು ದಿನದಿಂದ ನಾನು ಕೊಹ್ಲಿ ಗುಂಗಲ್ಲೇ ಇದ್ದೆ" ಅಂತಾ ಚಿನ್ನಾ ಕಿಂಗ್ ವಿರಾಟ್ ಕೊಯ್ಲಿ ಭೇಟಿಯಾದ ಕ್ಷಣವನ್ನು ಹಂಚಿಕೊಂಡಿದ್ದಾರೆ.
ಆ ದಿನ ನಡೆದಿದ್ದೇನು..?
ಮಾರ್ಚ್ 25 ರಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಆರ್ಸಿಬಿ ಮತ್ತು ಪಂಬಾಬ್ ಕಿಂಗ್ಸ್ ಪಂದ್ಯ ನಡೆದಿತ್ತು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿಯ ಅಭಿಮಾನಿ ಚಿನ್ನಾ ಗ್ರಿಲ್ ಹಾರಿ ಮೈದಾನಕ್ಕೆ ನುಗ್ಗಿ ಹೈಡ್ರಾಮಾ ಸೃಷ್ಟಿಸಿದ್ದ. ಈ ಬಗ್ಗೆ ಪೊಲೀಸ್ ಪ್ರಕರಣ ಕೂಡ ದಾಖಲಾಗಿತ್ತು.

ಮೈದಾನದಲ್ಲಿ ಕೊಹ್ಲಿಯ ಕಾಲಿಗೆ ಬಿದ್ದ ಅಭಿಮಾನಿಯನ್ನು ಭದ್ರತಾ ಸಿಬ್ಬಂದಿ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದರು. ಬಳಿಕ ಆತನಿಗೆ ಹೊಡೆದಿದ್ದಾರೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications