RCB: ಆರ್ಸಿಬಿ ಬೆಸ್ಟ್ ಫಿನಿಶರ್ ಹೆಸರು ರಿವೀಲ್ ಮಾಡಿದ ನಾಯಕ ರಜತ್ ಪಾಟಿದಾರ್
RCB IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು. ಪಂದ್ಯದ ಬಳಿಕ ಮಾತನಾಡಿದ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಅವರ ಫಿನಿಶಿಂಗ್ ಕೌಶಲವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಮತ್ತೊಂದೆಡೆ, ಸಿಎಸ್ಕೆ ತಂಡ ಸೋಲಿನ ಹಾದಿ ಹಿಡಿದಿದೆ. ಈ ಸೀಸನ್ನಲ್ಲಿ ಸತತ ಮೂರನೇ ಸೋಲು ಅನುಭವಿಸಿರುವ ಚೆನ್ನೈ, 2024ರ ಸೀಸನ್ನಿಂದ ಈವರೆಗೆ ಆರ್ಸಿಬಿ ವಿರುದ್ಧ ಸತತ ನಾಲ್ಕನೇ ಸೋಲನ್ನು ಕಂಡಿದೆ. ಗಾಯದಿಂದ ದಿಗ್ಗಜ ಆಟಗಾರ ಎಂ.ಎಸ್.ಧೋನಿ ಹೊರಗುಳಿದಿದ್ದು, ಋತುರಾಜ್ ಗಾಯಕ್ವಾಡ್ ನಾಯಕತ್ದ ತಂಡಕ್ಕೆ ಜಯ ಒಲಿದಂತೆ ಕಾಣುತ್ತಿಲ್ಲ.

ಸೀಸನ್ ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್ ಜೊತೆ ಬೃಹತ್ ಮೊತ್ತದ ಆಟಗಾರರ ಅದಲು-ಬದಲು ಪ್ರಕ್ರಿಯೆ ನಡೆಸಿ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಬಳಿಕ ಯುವ ಆಟಗಾರರ ಮೇಲೆ ಹೆಚ್ಚಿನ ಹೂಡಿಕೆ ಮಾಡಿದ್ದರೂ ಸಹ ಏನು ಪ್ರಯೋಜನ ಆಗದಂತಾಗಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಮೋಘ ಗೆಲುವು ಸಾಧಿಸಿದೆ. ಈ ಗೆಲುವಿನ ನಂತರ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಅವರು ತಂಡದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಇದು ಸದ್ಯ ಇಂಟರ್ನೆಟ್ನಲ್ಲಿ ಸಖತ್ ಸದ್ದು ಮಾಡುತ್ತಿದೆ.
ಟಿಮ್ ಡೇವಿಡ್ ಅಬ್ಬರದ ಬ್ಯಾಟಿಂಗ್
ಪಂದ್ಯದ ಕೊನೆಯ ಹಂತದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಆರ್ಸಿಬಿಗೆ ಗೆಲುವು ತಂದುಕೊಟ್ಟರು. ಇವರ ಫಿನಿಶಿಂಗ್ ಕೌಶಲಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪಾಟಿದಾರ್, "ನಾನು ಕಂಡ ಅತ್ಯುತ್ತಮ ಫಿನಿಶರ್ಗಳಲ್ಲಿ ಇವರು ಒಬ್ಬರು" ಎಂದು ಕೊಂಡಾಡಿದ್ದಾರೆ.
ಸಂಜು ಸ್ಯಾಮ್ಸನ್ ಬಂದರೂ ತಪ್ಪದ ಸೋಲು
ರಾಜಸ್ಥಾನ್ ರಾಯಲ್ಸ್ನಿಂದ ಬೃಹತ್ ಮೊತ್ತಕ್ಕೆ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದರೂ, ಚೆನ್ನೈ ತಂಡಕ್ಕೆ ಇನ್ನೂ ಗೆಲುವಿನ ಲಯ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಯುವ ಆಟಗಾರರ ಮೇಲೆ ಹೂಡಿಕೆ ಮಾಡಿದ್ದರೂ ಎಂ.ಎಸ್.ಧೋನಿ ಅನುಪಸ್ಥಿತಿಯಲ್ಲಿ ತಂಡದ ಪ್ರದರ್ಶನ ಮಂಕಾಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.
ಆರ್ಸಿಬಿ ನಾಯಕ ರಜತ್ ಪಾಟಿದಾರ್ ಹೇಳಿದ್ದೇನು?
"ತಂಡದ ಪ್ರದರ್ಶನ ತುಂಬಾ ತೃಪ್ತಿ ನೀಡಿದೆ. ಆರಂಭದಲ್ಲಿ ಪಿಚ್ ಸ್ವಲ್ಪ ನಿಧಾನವಾಗಿತ್ತು, ಆದರೆ ಫಿಲ್ ಸಾಲ್ಟ್ ಮತ್ತು ವಿರಾಟ್ ಭಾಯ್ ಅದ್ಭುತವಾಗಿ ಇನ್ನಿಂಗ್ಸ್ ಕಟ್ಟಿಕೊಟ್ಟರು. ಆ ನಂತರ ಬ್ಯಾಟರ್ಗಳು ಸಿಡಿಸಿದ ಸಿಕ್ಸರ್ಗಳನ್ನು ನೋಡುವುದೇ ಒಂದು ಸಂಭ್ರಮವಾಗಿತ್ತು," ಎಂದು ರಜತ್ ಪಾಟಿದಾರ್ ಸಂಸತ ಹಂಚಿಕೊಂಡಿದ್ದಾರೆ.
-
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
RCB Playing 11 Prediction: ಸಿಎಸ್ಕೆ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಚಿನ್ನಸ್ವಾಮಿಯಲ್ಲಿ ರಾರಾಜಿಸಿದ ಕರ್ನಾಟಕ ಕ್ರಿಕೆಟ್ ದಿಗ್ಗಜರ ಹೆಸರು; ಕನ್ನಡ ಮಣ್ಣಿನ ಮಕ್ಕಳಿಗೆ ಕೆಎಸ್ಸಿಎ ವಿಶೇಷ ಗೌರವ -
ಗ್ರೌಂಡ್ನಲ್ಲಿ ಪಂತ್ ಅಬ್ಬರ, ಗ್ಯಾಲರಿಯಲ್ಲಿ ತಿರುಪತಿ ತಿಮ್ಮಪ್ಪನಿಗೆ ಗೋಯೆಂಕಾ ಪ್ರಾರ್ಥನೆ; ವೈರಲ್ -
RCB Vs CSK: ಆರ್ಸಿಬಿ ನೀಡಿದ ಗುರಿ ಮುಟ್ಟಲಾಗದೇ ಶರಣಾದ ಸಿಎಸ್ಕೆ -
ಚಿನ್ನಸ್ವಾಮಿಯಲ್ಲಿ ರನ್ ಮಳೆ ಹರಿಸಿ ಸಿಎಸ್ಕೆಗೆ ರೆಡ್ ಅಲರ್ಟ್ ನೀಡಿದ ಆರ್ಸಿಬಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
IPL ವಿಐಪಿ ಟಿಕೆಟ್ ದುರ್ಬಳಕೆ ಆಗಿಲ್ಲ: ಶಾಸಕರ ಕುಟುಂಬಸ್ಥರು ಪಂದ್ಯ ನೋಡಿದರೆ ತಪ್ಪೇನು; ಪರಮೇಶ್ವರ್ ಪ್ರಶ್ನೆ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊಬೈಲ್ ಕಳ್ಳತನ: ಜಾರ್ಖಂಡ್ ಮೂಲದ ಕಳ್ಳರ ಜಾಲ ಬೇಧಿಸಿದ ಬೆಂಗಳೂರು ಪೊಲೀಸರು










Click it and Unblock the Notifications