Ranji Trophy: ಕರ್ನಾಟಕ ತಂಡಕ್ಕೆ ಇನ್ನಿಂಗ್ಸ್ ಮುನ್ನಡೆ: ತಮಿಳುನಾಡು ಗೆಲುವಿಗೆ ಬೃಹತ್ ಗುರಿ
ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತಮಿಳುನಾಡು ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಬಿಗಿ ಹಿಡಿತ ಸಾಧಿಸಿದೆ. ತಮಿಳುನಾಡು ತಂಡದ ಗೆಲುವಿಗೆ ಇನ್ನೂ 319 ರನ್ ಗಳಿಸಬೇಕಿದ್ದು, ಕರ್ನಾಟಕ ಗೆಲುವಿನ ವಿಶ್ವಾಸದಲ್ಲಿದೆ.
ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಮೊದಲ ಇನ್ನಿಂಗ್ಸ್ನಲ್ಲಿ 366 ರನ್ ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ನಲ್ಲಿ ತಮಿಳುನಾಡು 151 ರನ್ಗಳಿಗೆ ಆಲೌಟ್ ಆಗಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ಕರ್ನಾಟಕ 215 ರನ್ಗಳ ಬೃಹತ್ ಮುನ್ನಡೆ ಪಡೆದುಕೊಂಡಿತ್ತು. ವಿಜಯ್ ಕುಮಾರ್ ವೈಶಾಖ್ 4 ವಿಕೆಟ್ ಪಡೆದು ಮಿಂಚಿದ್ದರು. ಶಶಿ ಕುಮಾರ್ 3 ವಿಕೆಟ್ ಪಡೆದರೆ, ಹಾರ್ದಿಕ್ ರಾಜ್ 2 ವಿಕೆಟ್ ಮತ್ತು ವಿಧ್ವತ್ ಕಾವೇರಪ್ಪ 1 ವಿಕೆಟ್ ಪಡೆದುಕೊಂಡಿದ್ದರು.

ಬಳಿಕ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಕರ್ನಾಟಕ ಕೇವಲ 139 ರನ್ಗಳಿಗೆ ಆಲೌಟ್ ಆಗಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ಶತಕ ಸಿಡಿಸಿದ್ದ ದೇವದತ್ ಪಡಿಕ್ಕಲ್ ಎರಡನೇ ಇನ್ನಿಂಗ್ಸ್ನಲ್ಲಿ 36 ರನ್ ಗಳಿಸಿದರು. ವೈಶಾಖ್ 22 ಮತ್ತು ಹಾರ್ದಿಕ್ ರಾಜ್ 20 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ ಗಳು ರನ್ ಗಳಿಸಲು ಪರದಾಡಿದರು.
ಸಮರ್ಥ್ 2 ರನ್, ನಾಯಕ ಮಯಾಂಕ್ ಅಗರ್ವಾಲ್ 11 ರನ್, ಮನಿಶ್ ಪಾಂಡೆ 14 ರನ್, ಕಿಶನ್ ಬೆದರೆ 9 ರನ್, ಎಸ್ ಶರತ್ 18 ರನ್ ಗಳಿಸಿದರು. ನಿಖಿನ್ ಜೋಸ್ ಮತ್ತು ಶಶಿ ಕುಮಾರ್ ಸೊನ್ನೆಗೆ ಔಟಾದರು. ಮೊದಲ ಇನ್ನಿಂಗ್ಸ್ನಲ್ಲಿ 215 ರನ್ಗಳ ಮುನ್ನಡೆ ಪಡೆದುಕೊಂಡಿದ್ದ ಕರ್ನಾಟಕ ಎರಡನೇ ಇನ್ನಿಂಗ್ಸ್ನಲ್ಲಿ 139 ರನ್ ಗಳಿಸುವ ಮೂಲಕ ತಮಿಳುನಾಡು ತಂಡಕ್ಕೆ 355 ರನ್ಗಳ ಗುರಿ ನೀಡಿತು.
ಅಜಿತ್ ರಾಮ್ 5 ವಿಕೆಟ್ ಪಡೆಯುವ ಮೂಲಕ ಕರ್ನಾಟಕ ತಂಡಕ್ಕೆ ಆಘಾತ ನೀಡಿದರು. ಸಾಯಿ ಕಿಶೋರ್ 2 ವಿಕೆಟ್ ಪಡೆದರೆ. ಮೊಹಮ್ಮದ್ ಮತ್ತು ಪ್ರದೋಶ್ ರಂಜನ್ ತಲಾ ಇಂದು ವಿಕೆಟ್ ಪಡೆದರು.
ತಮಿಳುನಾಡಿಗೆ ಆರಂಭಿಕ ಆಘಾತ
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ತಮಿಳುನಾಡು ಮೂರನೇ ದಿನದಾಟದ ಅಂತ್ಯಕ್ಕೆ 36 ರನ್ ಗಳಿಸಿದ್ದು ಮೊದಲ ವಿಕೆಟ್ ಕಳೆದುಕೊಂಡಿದೆ. ಎನ್ ಜಗದೀಶನ್ 8 ರನ್ ಗಳಿಸಿ ಔಟಾದರು. ವಿಮಲ್ ಕುಮಾರ್ ಅಜೇಯ 16 ಮತ್ತು ಪ್ರದೂಶ್ ರಂಜನ್ ಪೌಲ್ ಅಜೇಯ 10 ರನ್ ಗಳಿಸಿದ್ದು ನಾಲ್ಕನೇ ದಿನಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ. ವೈಶಾಖ್ ಮೊದಲ ವಿಕೆಟ್ ಪಡೆದಿದ್ದಾರೆ. ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಗೆದ್ದು ಸಿ ಗುಂಪಿನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವ ವಿಶ್ವಾಸದಲ್ಲಿದೆ ಕರ್ನಾಟಕ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications