Ravichandran Ashwin: ಭಾರತ ತಂಡಕ್ಕೆ ಆಘಾತ: ಮೂರನೇ ಟೆಸ್ಟ್ನಿಂದ ಹೊರಗುಳಿದ ರವಿಚಂದ್ರನ್ ಅಶ್ವಿನ್
ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಭಾರತದ ಬೌಲರ್ ರವಿಚಂದ್ರನ್ ಅಶ್ವಿನ್ ಹೊರಗುಳಿದಿದ್ದಾರೆ. ಕುಟುಂಬದ ತುರ್ತುಪರಿಸ್ಥಿತಿಯಿಂದಾಗಿ ಈ ನಿರ್ಧಾರ ಮಾಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಎರಡನೇ ದಿನದಾಟದಲ್ಲಿ ಭಾಗವಹಿಸಿದ್ದ ರವಿಚಂದ್ರನ್ ಅಶ್ವಿನ್ ತಮ್ಮ ಟೆಸ್ಟ್ ವೃತ್ತಿಜೀವನದ 500ನೇ ವಿಕೆಟ್ ಪಡೆದು ಸಂಭ್ರಮಿಸಿದ್ದರು. ಮೂರನೇ ದಿನ ಪ್ರಮುಖ ವಿಕೆಟ್ ಪಡೆಯುವ ಸಾಧ್ಯತೆ ಇತ್ತಾದರೂ, ಅವರು ದಿಢೀರ್ ಎಂದು ಪಂದ್ಯದಿಂದ ಹೊರಗುಳಿದಿದ್ದಾರೆ.

ರವಿಚಂದ್ರನ್ ಅಶ್ವಿನ್ ಟೆಸ್ಟ್ ತಂಡದಿಂದ ಹಿಂದೆ ಸರಿದಿದ್ದಾರೆ, ಕುಟುಂಬ ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ತಕ್ಷಣವೇ ಜಾರಿಗೆ ಬರಲಿದೆ. ಈ ಸವಾಲಿನ ಸಮಯದಲ್ಲಿ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ತಂಡವು ಅಶ್ವಿನ್ ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಬಿಸಿಸಿಐ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಸಿಸಿಐ ಚಾಂಪಿಯನ್ ಕ್ರಿಕೆಟಿಗ ಮತ್ತು ಅವರ ಕುಟುಂಬಕ್ಕೆ ತನ್ನ ಹೃತ್ಪೂರ್ವಕ ಬೆಂಬಲವನ್ನು ನೀಡುತ್ತದೆ. ಆಟಗಾರರು ಮತ್ತು ಅವರ ಪ್ರೀತಿಪಾತ್ರರ ಆರೋಗ್ಯ ಮತ್ತು ಯೋಗಕ್ಷೇಮವು ಅತ್ಯಂತ ಮಹತ್ವದ್ದಾಗಿದೆ. ಆಟಗಾರರ ಮತ್ತು ಕುಟುಂಬದವರ ಗೌಪ್ಯತೆ ಕಾಪಾಡುವುದು ನಮ್ಮ ಜವಾಬ್ದಾರಿ ಎಂದು ಹೇಳಿದೆ.
ಬಿಸಿಸಿಐ ಮತ್ತು ತಂಡವು ಅಶ್ವಿನ್ಗೆ ಯಾವುದೇ ಅಗತ್ಯ ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತದೆ ಮತ್ತು ಅಗತ್ಯವಿರುವಂತೆ ಬೆಂಬಲವನ್ನು ನೀಡಲು ಸಂವಹನದ ಮಾರ್ಗಗಳನ್ನು ತೆರೆದಿರುತ್ತದೆ. ಈ ಸೂಕ್ಷ್ಮ ಅವಧಿಯಲ್ಲಿ ಅಭಿಮಾನಿಗಳು ಮತ್ತು ಮಾಧ್ಯಮಗಳ ತಿಳುವಳಿಕೆ ಮತ್ತು ಸಹಾನುಭೂತಿಯನ್ನು ಟೀಮ್ ಇಂಡಿಯಾ ಮೆಚ್ಚುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಭಾರತ ತಂಡಕ್ಕೆ ಹಿನ್ನಡೆ
ರವಿಚಂದ್ರನ್ ಅಶ್ವಿನ್ ಪಂದ್ಯದ ಅರ್ಧದಲ್ಲಿ ಹಿಂದೆ ಸರಿದಿರುವುದು ಭಾರತ ತಂಡಕ್ಕೆ ಹಿನ್ನಡೆಯಾಗಿದೆ. ಇಂಗ್ಲೆಂಡ್ ಅತ್ಯುತ್ತಮ ಆರಂಭ ಪಡೆದಿದ್ದ ಸಮಯದಲ್ಲಿ ರವಿಚಂದ್ರನ್ ಅಶ್ವಿನ್ ಅವರು, ಜಾಕ್ ಕ್ರಾಲಿ ಅವರ ವಿಕೆಟ್ ಪಡೆದಿದ್ದರು. ಇದರೊಂದಿಗೆ 500 ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದರು.
ಮೂರನೇ ದಿನ ರಾಜ್ಕೋಟ್ ಪಿಚ್ ಸ್ಪಿನ್ನರ್ ಗಳಿಗೆ ನೆರವಾಗುವ ಸಾಧ್ಯತೆ ಇದ್ದ ಕಾರಣ, ಅಶ್ವಿನ್ ಪ್ರಮುಖ ಅಸ್ತ್ರವಾಗುವ ಸಾಧ್ಯತೆ ಇತ್ತು. ಅಪಾರ ಅನುಭವ ಹೊಂದಿರುವ ಅವರು ಪ್ರಮುಖ ವಿಕೆಟ್ ಪಡೆಯುವ ಬೌಲರ್ ಆಗಿದ್ದರು. ಈಗ ಅವರ ಅನುಪಸ್ಥಿತಿ ಭಾರತ ತಂಡವನ್ನು ಕಾಡಲಿದೆ.












Click it and Unblock the Notifications