Ravindra Jadeja: ಬಿಜೆಪಿಗೆ ಸೇರ್ಪಡೆಯಾದ ರವೀಂದ್ರ ಜಡೇಜಾ
ಭಾರತ ತಂಡದ ಕ್ರಿಕೆಟಿಗ ರವೀಂದ್ರ ಜಡೇಜಾ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿಕೊಂಡಿದ್ದಾರೆ. ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಗುರುವಾರ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಜಡೇಜಾ ಪತ್ನಿ ರಿವಾಬಾ ಬಿಜೆಪಿ ಶಾಸಕಿಯಾಗಿದ್ದು, ರವೀಂದ್ರ ಜಡೇಜಾ ಈಗ ಬಿಜೆಪಿಗೆ ಸೇರಿರುವುದು ಕೇವಲ ಔಪಚಾರಿಕ ಅಷ್ಟೇ. ರಿವಾಬಾ ಜಡೇಜಾ ತಮ್ಮ ಪತಿಯ ಬಿಜೆಪಿ ಸದಸ್ಯತ್ವದ ಕಾರ್ಡ್ ಅನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ಯುಎಸ್ಎ- ವೆಸ್ಟ್ಇಂಡೀಸ್ನಲ್ಲಿ ನಡೆದ ಟಿ20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್ ಆದ ಬಳಿಕ ರವೀಂದ್ರ ಜಡೇಜಾ ಜೂನ್ 29ರಂದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಬಳಿಕ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿತ್ತು, ಮುಂಬರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರು ಭಾರತ ತಂಡಕ್ಕೆ ಮರಳಲಿದ್ದಾರೆ.

ರವೀಂದ್ರ ಜಡೇಜಾ ಅವರ ಸಹೋದರಿ, ತಂದೆ ಕಾಂಗ್ರೆಸ್ ಪಕ್ಷದ ಬೆಂಬಲಿಗರಾಗಿದ್ದಾರೆ. ಆದರೆ ರವೀಂದ್ರ ಜಡೇಜಾ ಮತ್ತು ರಿವಾಬ ಜಡೇಜಾ ಮಾತ್ರ ಬಿಜೆಪಿ ಪಕ್ಷದ ಬೆಂಬಲಿಗರಾಗಿದ್ದರು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದಿದ್ದ ರಿವಾಬ ಜಡೇಜಾ ಸುಲಭ ಗೆಲುವು ಸಾಧಿಸಿದ್ದರು.
ಸದಸ್ಯತ್ವ ಅಭಿಯಾನ ಆರಂಭಿಸಿದ ಬಿಜೆಪಿ
ಸೆಪ್ಟೆಂಬರ್ 2 ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಮ್ಮ ಸದಸ್ಯತ್ವವನ್ನು ನವೀಕರಿಸುವ ಮೂಲಕ ಭಾರತೀಯ ಜನತಾ ಪಕ್ಷದ 2024 ರ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಸಂಘಟನೆ ಪರ್ವ, ಸದಸ್ಯತ್ವ ಅಭಿಯಾನ 2024 ಶೀರ್ಷಿಕೆಯಡಿ ಈ ಬಾರಿ ಕಾರ್ಯಕರ್ತರ ಸಂಖ್ಯೆ ಹೆಚ್ಚಿಸಿಕೊಳ್ಳಲು ಬಿಜೆಪಿ ಮುಂದಾಗಿದೆ.
ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಪಕ್ಷದ ಕಾರ್ಯಕರ್ತರು ಯುವಕರೊಂದಿಗೆ ಸಂಪರ್ಕ ಸಾಧಿಸಲು ವಿಶೇಷ ಪ್ರಯತ್ನಗಳನ್ನು ಮಾಡುವಂತೆ ನಾಯಕರಿಗೆ ಒತ್ತಾಯಿಸಿದ್ದಾರೆ. ಬಿಜೆಪಿ ಈ ಬಾರಿ ಸದಸ್ಯತ್ವ ಅಭಿಯಾನದ ಮೂಲಕ 100 ಮಿಲಿಯನ್ ಸದಸ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿ ಹೊಂದಿದೆ. 2014 ಮತ್ತು 2019 ರ ನಡುವೆ 180 ಮಿಲಿಯನ್ ಸದಸ್ಯರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
🪷 #SadasyataAbhiyaan2024 pic.twitter.com/he0QhsimNK
— Rivaba Ravindrasinh Jadeja (@Rivaba4BJP) September 2, 2024
ಬಿಜೆಪಿ ಸದಸ್ಯತ್ವ ಅಭಿಯಾನ ಆಚರಣೆಯಲ್ಲ ಅದು ಕುಟುಂಬದ ವಿಸ್ತರಣೆ ಮತ್ತು ಸೈದ್ಧಾಂತಿಕ ಆಂದೋಲನವಾಗಿದೆ ಎಂದು ಮೋದಿ ಹೇಳಿದ್ದಾರೆ. ಪಕ್ಷ ಎಲ್ಲಿ ಕಡಿಮೆ ಮತ ಪಡೆದಿದೆ ಅಲ್ಲಿಂದಲೇ ಸದಸ್ಯತ್ವ ಅಭಿಯಾನ ಆರಂಭಿಸಲು ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.
ಸತತ ಮೂರನೇ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಪಕ್ಷದ ಬೇರುಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಪ್ರಯತ್ನ ಮಾಡುತ್ತಿದೆ. ನರೇಂದ್ರ ಮೋದಿ ಯುವ ಜನತೆಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ ಭಾರತೀಯ ರಾಜಕೀಯದಲ್ಲಿ ಸೋಷಿಯಲ್ ಮೀಡಿಯಾ ಬಳಸಿಕೊಂಡು ಯುವ ಜನರನ್ನು ಸೆಳೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದೀಗ ಸದಸ್ಯತ್ವ ಅಭಿಯಾನದ ಮೂಲಕ ಯುವ ಮತದಾರರ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ











Click it and Unblock the Notifications