ಕೊಹ್ಲಿ, ರೋಹಿತ್ ನಂತರ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ ರವೀಂದ್ರ ಜಡೇಜಾ
17 ವರ್ಷಗಳ ಬಳಿಕ ಭಾರತ ತಂಡ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಭಾರತ ತಂಡದ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಇರುವಾಗಲೇ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಿದಾಯ ಹೇಳುವ ಮೂಲಕ ಶಾಕ್ ಕೊಟ್ಟಿದ್ದರು. ಈಗ ರವೀಂದ್ರ ಜಡೇಜಾ ಕೂಡ ವಿದಾಯ ಹೇಳಿದ್ದಾರೆ.
ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ರವೀಂದ್ರ ಜಡೇಜಾ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಮೂರನೇ ದಿಗ್ಗಜ ಆಟಗಾರ ವಿದಾಯ ಹೇಳಿದಂತಾಗಿದೆ.

"ಹೃದಯ ತುಂಬಿದ ಕೃತಜ್ಞತೆಯೊಂದಿಗೆ, ನಾನು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ಹೆಮ್ಮೆಯಿಂದ ಓಡುವ ದೃಢವಾದ ಕುದುರೆಯಂತೆ, ನಾನು ಯಾವಾಗಲೂ ನನ್ನ ದೇಶಕ್ಕಾಗಿ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ ಮತ್ತು ಇತರ ಸ್ವರೂಪಗಳಲ್ಲಿ ಅದನ್ನು ಮುಂದುವರಿಸುತ್ತೇನೆ.
ಟಿ 20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಗಿದೆ, ಇದು ನನ್ನ ಟಿ 20 ಅಂತರರಾಷ್ಟ್ರೀಯ ವೃತ್ತಿಜೀವನದ ಉತ್ತುಂಗವಾಗಿದೆ. ಬೆಂಬಲಕ್ಕಾಗಿ ಧನ್ಯವಾದಗಳು." ಎಂದು ರವೀಂದ್ರ ಜಡೇಜಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹೇಳಿದ್ದಾರೆ.
35 ವರ್ಷದ ಜಡೇಜಾ ಈವರೆಗೂ 74 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದಾರೆ. 41 ಇನ್ನಿಂಗ್ಸ್ಗಳಲ್ಲಿ 515 ರನ್ ಗಳಿಸಿದ್ದಾರೆ. 54 ವಿಕೆಟ್ ಪಡೆದಿರುವ ಅವರು ಭಾರತ ತಂಡದ ಪ್ರಮುಖ ಆಲ್ರೌಂಡರ್ ಗಳಲ್ಲಿ ಒಬ್ಬರಾಗಿದ್ದಾರೆ.
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಮಾತ್ರ ವಿದಾಯ ಹೇಳಿದ್ದು, ಐಪಿಎಲ್ನಲ್ಲಿ ಜಡೇಜಾ ಆಡಲಿದ್ದಾರೆ. ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ನಲ್ಲಿ ಕೂಡ ಅವರ ಆಟ ಮುಂದುವರೆಯಲಿದೆ. ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಭಾರತ ತಂಡದ ಅಭಿಮಾನಿಗಳಿಗೆ ಪ್ರಮುಖ ಆಟಗಾರರು ವಿದಾಯ ಹೇಳುತ್ತಿರುವುದು ಬೇಸರ ತಂದಿದೆ.
ಪ್ರಧಾನಿ ನರೇಂದ್ರ ಮೋದಿ ಟ್ವಿಟ್
ರವೀಂದ್ರ ಜಡೇಜಾ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಕೂಟ ಟ್ವೀಟ್ ಮಾಡಿದ್ದು ಶುಭಾಶಯ ಕೋರಿದ್ದಾರೆ. "ಪ್ರೀತಿಯ ರವೀಂದ್ರ ಜಡೇಜಾ, ನೀವು ಆಲ್ ರೌಂಡರ್ ಆಗಿ ಅಸಾಧಾರಣ ಪ್ರದರ್ಶನ ನೀಡಿದ್ದೀರಿ. ಕ್ರಿಕೆಟ್ ಪ್ರೇಮಿಗಳು ನಿಮ್ಮ ಸ್ಟೈಲಿಶ್ ಆಟ, ಸ್ಪಿನ್ ಮತ್ತು ಅತ್ಯುತ್ತಮ ಫೀಲ್ಡಿಂಗ್ ಅನ್ನು ಮೆಚ್ಚುತ್ತಾರೆ. ರೋಮಾಂಚನಕಾರಿ ಟಿ20 ಪ್ರದರ್ಶನಗಳಿಗೆ ಧನ್ಯವಾದಗಳು. ನಿಮ್ಮ ಮುಂದಿನ ಜೀವನಕ್ಕೆ ನನ್ನ ಶುಭಾಶಯಗಳು." ಎಂದು ಹೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications