ವಿರುಷ್ಕಾ ಜೊತೆಗಿನ ಚಿತ್ರ ಹಂಚಿಕೊಂಡ ಕಾಸರಗೋಡಿನ ಅಜರುದ್ದೀನ್
ಬೆಂಗಳೂರು, ಏಪ್ರಿಲ್ 23: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಲು ಆಯ್ಕೆಯಾಗಿರುವ ಯುವ ಪ್ರತಿಭೆಗಳಿಗೆ ತಮ್ಮ ರೋಲ್ಮಾಡೆಲ್ಗಳನ್ನು ಹತ್ತಿರದಿಂದ ನೋಡಿ ಅವರ ಜೊತೆ ಆಡುವುದೇ ದೊಡ್ಡ ಸಂತಸದ ವಿಷಯ. ಇಂಥದ್ದೊಂದು ಸಂತಸದ ಕ್ಷಣವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಯುವ ಪ್ರತಿಭೆ ಮೊಹಮ್ಮದ್ ಅಜರುದ್ದೀನ್ ಕೂಡಾ ಅನುಭವಿಸಿದ್ದಾರೆ.
ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮ ಅವರನ್ನು ಬಯೋ ಬಬ್ಬಲ್ ಸಂದರ್ಭದಲ್ಲಿ ಭೇಟಿ ಮಾಡಿದ ಕಾಸರಗೋಡು ಜಿಲ್ಲೆಯ ಪ್ರತಿಭೆ ಮೊಹಮ್ಮದ್ ಅಜರುದ್ದೀನ್ ಅವರು ಫೋಟೊ ಹಂಚಿಕೊಂಡಿದ್ದಾರೆ.
ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಅಜರುದ್ದೀನ್ ಅವರನ್ನು ಬೆಂಗಳೂರು ತಂಡ ಐಪಿಎಲ್ ಹರಾಜಿನಲ್ಲಿ ಆಯ್ಕೆ ಮಾಡಿಕೊಂಡಿದೆ. ಐಪಿಎಲ್ ಮೊದಲ ಸೀಸನ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿದ್ದಾರೆ.
So happy to be amongst such humble, down to earth people @AnushkaSharma @imVkohli 💫 pic.twitter.com/MmDPKbiaLw
— Mohammed Azharuddeen (@Azhar_Junior_14) April 22, 2021
ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಬಲಗೈ ಬ್ಯಾಟ್ಸ್ ಮನ್ ಅಜರುದ್ದೀನ್ ಅವರು ಕೇರಳ ಪರ ಆಡಿ 54 ಎಸೆತಗಳಲ್ಲಿ 137 ರನ್ ಚೆಚ್ಚಿದ್ದಲ್ಲದೆ, 16 ಓವರ್ ಗಳಲ್ಲಿ ಕೇರಳ 197 ರನ್ ಚೇಸ್ ಮಾಡಲು ನೆರವಾಗಿದ್ದರು.
ಇದರಿಂದ ಐಪಿಎಲ್ ಹರಾಜಿನಲ್ಲಿ 20 ಲಕ್ಷ ಮೂಲ ಬೆಲೆಗೆ ಬೆಂಗಳೂರು ತಂಡ ಸೇರಿದ್ದರು. 22 ಪ್ರಥಮದರ್ಜೆ ಕ್ರಿಕೆಟ್ನಲ್ಲಿ 959 ರನ್, ಲಿಸ್ಟ್ 'ಎ' ಪಂದ್ಯಗಳಲ್ಲಿ 445 ರನ್, 24 ಟಿ20 ಪಂದ್ಯಗಳಲ್ಲಿ 451 ಬಾರಿಸಿದ್ದಾರೆ. ಟಿ20 ಪಂದ್ಯಗಳಲ್ಲಿ 137* ರನ್ ಅಜರ್ ಅವರ ವೈಯಕ್ತಿಕ ಅತ್ಯಧಿಕ ರನ್ ಆಗಿದೆ.

ಮುಂಬೈನಲ್ಲಿ ಬಯೋ ಬಬ್ಬಲ್ನಲ್ಲಿರುವ ಅನುಷ್ಕಾ ಶರ್ಮ ಹಾಗೂ ಪುತ್ರಿ ವಮಿಕಾ ಜೊತೆಗಿದ್ದ ನಾಯಕ ಕೊಹ್ಲಿ ಅವರನ್ನು ಕಾಣಲು ಬಂದ ಅಜರುದ್ದೀನ್, ದಂಪತಿಯ ಸರಳತೆ ಹಾಗೂ ಆತ್ಮೀಯತೆಯನ್ನು ಮೆಚ್ಚಿ, ಇವರನ್ನು ಭೇಟಿ ಮಾಡಿ, ಸಕತ್ ಖುಷಿಯಾಗಿದೆ ಎಂದಿದ್ದಾರೆ.
ಮುಂಬೈ ಇಂಡಿಯನ್ಸ್, ಸನ್ ರೈಸರ್ಸ್ ಹೈದರಾಬಾದ್, ಕೋಲ್ಕತಾ ನೈಟ್ ರೈಡರ್ಸ್ ನಂತರ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಸೋಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಜರುದ್ದೀನ್ ಕಣಕ್ಕಿಳಿದು ಮಿಂಚುವ ಅವಕಾಶಕ್ಕಾಗಿ ಕಾದಿದ್ದಾರೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications