RCB: ನಾಯಕತ್ವ ವಹಿಸಿಕೊಂಡ ಆರ್ಸಿಬಿ ಬ್ಯಾಟರ್ ರಜತ್ ಪಟಿದಾರ್
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025ರ ಮೆಗಾ ಹರಾಜಿಗೆ ಇನ್ನು ಮೂರು ದಿನ ಮಾತ್ರ ಉಳಿದಿದೆ. ನವೆಂಬರ್ 24, 25 ರಂದು ಜೆಡ್ಡಾದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದ್ದು ಯಾವ ಆಟಗಾರರು ಯಾವ ತಂಡ ಸೇರುತ್ತಾರೆ ಎನ್ನುವ ಕುತೂಹಲವಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB) ಮೆಗಾ ಹರಾಜಿಗೆ ಮುನ್ನ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡು ಎಲ್ಲಾ ಆಟಗಾರರನ್ನು ಬಿಡುಗಡೆ ಮಾಡಿದ್ದು, ಬಲಿಷ್ಠ ತಂಡವನ್ನು ಕಟ್ಟಲು ಯೋಜನೆ ರೂಪಸಿದೆ. ಮೆಗಾ ಹರಾಜಿಗೆ ಮುನ್ನವೇ ಆರ್ ಸಿಬಿ ಆಟಗಾರನಿಗೆ ನಾಯಕತ್ವ ಸಿಕ್ಕಿದೆ.
ಆರ್ಸಿಬಿ ತಂಡದ ಭರವಸೆಯ ಬ್ಯಾಟರ್ ರಜತ್ ಪಟಿದಾರ್ ರನ್ನು ತಂಡವನ್ನು ಬರೋಬ್ಬರಿ 11 ಕೋಟಿ ರೂಪಾಯಿ ನೀಡುವ ಮೂಲಕ ತಂಡದಲ್ಲೇ ಉಳಿಸಿಕೊಂಡಿದೆ. ಸ್ಪಿನ್, ವೇಗದ ಬೌಲಿಂಗ್ಗೆ ಸ್ಪೋಟಕ ಬ್ಯಾಟಿಂಗ್ ಮಾಡುವ ಪಟಿದಾರ್ ತಂಡದ ಪ್ರಮುಖ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಐಪಿಎಲ್ 2025ರ ಆವೃತ್ತಿಗೆ ಮುನ್ನ ಅವರಿಗೆ ನಾಯಕತ್ವದ ಜವಾಬ್ದಾರಿ ಸಿಕ್ಕಿದೆ.

ದೇಶೀಯ ಕ್ರಿಕೆಟ್ನಲ್ಲಿ ರಜತ್ ಪಟಿದಾರ್ ಮಧ್ಯಪ್ರದೇಶ ತಂಡಕ್ಕಾಗಿ ಆಡುತ್ತಾರೆ. ನಾಳೆಯಿಂದ (ನವೆಂಬರ್ 22) ಆರಂಭವಾಗಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ರಜತ್ ಪಟಿದಾರ್ ಮಧ್ಯಪ್ರದೇಶ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಪಂದ್ಯಾವಳಿಯಲ್ಲಿ ಅವರು ಉತ್ತಮವಾಗಿ ನಾಯಕತ್ವದ ಜವಾಬ್ದಾರಿ ನಿಭಾಯಿಸಿದರೆ, ಐಪಿಎಲ್ನಲ್ಲಿ ಕೂಡ ಅವರನ್ನು ನಾಯಕತ್ವಕ್ಕೆ ಪರಿಗಣಿಸುವ ಸಾಧ್ಯತೆ ಇದೆ.
Taking the helm for Madhya Pradesh, it’s Rajat Patidar’s time to shine in the Syed Mushtaq Ali Trophy! 🌟
— Royal Challengers Bengaluru (@RCBTweets) November 20, 2024
Congrats, RaPa! Lead with prowess and let your gameplay do the talking on the field! 🔥#PlayBold #SMAT2024 pic.twitter.com/zQf6xNl9bH
ಶುಭಾಶಯ ತಿಳಿಸಿದ ಆರ್ಸಿಬಿ
ರಜತ್ ಪಟಿದಾರ್ ಮಧ್ಯಪ್ರದೇಶ ಟಿ20 ತಂಡದ ನಾಯಕನಾಗಿ ಆಯ್ಕೆಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕೃತ ಎಕ್ಸ್ ಖಾತೆಯಲ್ಲಿ ಶುಭಾಶಯ ಕೋರಿದೆ. ಇದು ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
2025ರ ಐಪಿಎಲ್ನಲ್ಲಿ ಆರ್ ಸಿಬಿ ಹೊಸ ನಾಯಕನಿಗಾಗಿ ಹುಡುಕಾಟ ನಡೆಸುತ್ತಿದೆ. ಫಾಫ್ ಡುಪ್ಲೆಸಿಸ್ರನ್ನು ರಿಟೈನ್ ಮಾಡಿಕೊಳ್ಳದೆ ಬಿಡುಗಡೆ ಮಾಡಿದ್ದು, ಭವಿಷ್ಯದ ದೃಷ್ಟಿಯಿಂದ ಯುವ ಆಟಗಾರನನ್ನು ಹುಡುಕುತ್ತಿದೆ. ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಅಥವಾ ರಿಷಬ್ ಪಂತ್ರನ್ನು ಖರೀದಿ ಮಾಡಿ ನಾಯಕರನ್ನಾಗಿ ಮಾಡಿ ಎಂದು ಅಭಿಮಾನಿಗಳು ಕೇಳಿದ್ದಾರೆ.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications