Bengaluru Stampede Tragedy: ಕೊಹ್ಲಿ ಬಳಿಕ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಅಭಿಮಾನಿಗಳಿಗೆ ವಿಶೇಷ ಸಂದೇಶ
RCB Rajat Patidar: ಆರ್ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಮಂದಿ ಸಾವನ್ನಪ್ಪಿದ್ದರು. ಈ ದುರಂತ ಸಂಬಂಧ ಇದೀಗ ವಿರಾಟ್ ಕೊಹ್ಲಿ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಸಹ ಇನ್ಸ್ಟಾಗ್ರಾಂ ಮೂಲಕ ಅಭಿಮಾನಿಗಳಿಗೆ ಭಾವುಕ ಸಂದೇಶವನ್ನು ರವಾನಿಸಿದ್ದಾರೆ. ಹಾಗಾದ್ರೆ, ಅದರಲ್ಲಿ ಏನಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಮೊದಲ ಟ್ರೋಫಿಗೆ ಮುತ್ತಿಟ್ಟಿತು. ಆದರೆ, ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿದ್ದು, ಈ ವೇಳೆ ಎಂ.ಚಿನ್ನಸ್ವಾಮಿ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದರು. ಈ ದುರಂತ ಆರ್ಸಿಬಿ ಪಾಲಿಗೆ ಕಪ್ಪುಚುಕ್ಕೆಯಾಗಿ ಉಳಿದುಬಿಟ್ಟಿತು. ಇನ್ನೂ ಇತ್ತೀಚೆಗಷ್ಟೇ ಆರ್ಸಿಬಿ ಪ್ರಾಂಚೈಸಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25,00,000 ರೂಪಾಯಿ ಆರ್ಥಿಕ ನೆರವನ್ನು ಸಹ ಘೋಷಣೆ ಮಾಡಿತು.

ಇನ್ನೂ ಇಂದು (ಸೆಪ್ಟೆಂಬರ್ 3) ಇನ್ಸ್ಟಾಗ್ರಾಂ ಖಾತೆ ಮೂಲಕ ವಿರಾಟ್ ಕೊಹ್ಲಿ ಬಳಿಕ, ಆರ್ಸಿಬಿ ನಾಯಕ ವಿಶೇಷ ಸಂದೇಶವನ್ನು ರವಾನಿಸಿದ್ದಾರೆ. ಇದನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದೆ. "ಪ್ರತಿ ಸಾರಿ ನಾನು ಆರ್ಸಿಬಿ ಪರ ಮೈದಾನಕ್ಕಿಳಿದಾಗ, ಉತ್ಸಾಹ ಇರುತ್ತದೆ. ಪಂದ್ಯ ಮುಗಿದ ನಂತರವೂ ಆ ಉತ್ಸಾಹ ಹಾಗೆ ಇರುತ್ತದೆ. ಅದು ನಿಮ್ಮಿಂದ," ಎಂದು ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.
"ನಿಮ್ಮ ಪ್ರೀತಿ, ನಂಬಿಕೆ ಮತ್ತು ಅಚಲ ಬೆಂಬಲದಿಂದ ಸದಾ ಉತ್ಸಾದಿಂದ ತಂಡ ಇರುತ್ತದೆ. ನೀವು ಯಾವಾಗಲೂ ನಮ್ಮ ಜೊತೆಯಲ್ಲಿದ್ದೀರಿ. ಹೃದಯಪೂರ್ವಕವಾಗಿ ಹೇಳಬೇಕಾದರೆ, ನಾವು ಕೂಡ ನಿಮ್ಮ ಜೊತೆಯಲ್ಲಿದ್ದೇವೆ ಎಂಬುದನ್ನು ತಿಳಿಸಿಕೊಳ್ಳಲು ಬಯಸುತ್ತೇನೆ. ನೀವು ಎಲ್ಲರೂ ನನ್ನ ಚಿಂತನೆ ಮತ್ತು ಪ್ರಾರ್ಥನೆಗಳಲ್ಲಿ ಇದ್ದೀರಿ. ನಿಮ್ಮ ಪ್ರೋತ್ಸಾಹವೇ ತಂಡಕ್ಕೆ ಆನೆ ಬಲ," ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಆರ್ಸಿಬಿ ಇನ್ಸ್ಟಾದಲ್ಲಿ ಹಂಚಿಕೊಂಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications