ವಿಡಿಯೋ; ಸಾಗರದಲ್ಲಿ ಸಿದ್ಧವಾಯಿತು ಆರ್ಸಿಬಿ ಕಾರು!
ಶಿವಮೊಗ್ಗ, ಮಾರ್ಚ್ 25; ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಕ್ಷಣಗಣನೆ ಶುರುವಾಗಿದೆ. ಈ ಭಾರಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರೇಜ್ ಜೋರಾಗಿದೆ. ಅಭಿಮಾನಿಯೊಬ್ಬರು ನೆಚ್ಚಿನ ತಂಡಕ್ಕಾಗಿ ತಮ್ಮ ಕಾರಿಗೆ ಹೊಸ ರೂಪ ಕೊಟ್ಟಿದ್ದಾರೆ.
ಸಾಗರದ ಸದ್ಗುರು ಸಂತೋಷ್ ಆರ್ಸಿಬಿ ತಂಡದ ಅಪ್ಪಟ ಅಭಿಮಾನಿ. ಇದೆ ಕಾರಣಕ್ಕೆ ತಮ್ಮ ಫಿಯಟ್ ಕಾರಿಗೆ ಹೊಸ ಲುಕ್ ಕೊಟ್ಟಿದ್ದಾರೆ. ಈಗ ಈ ಕಾರು ಸಾಗರದಲ್ಲಿ ಜನರ ಗಮನ ಸೆಳೆಯುತ್ತಿದೆ. ಜನರು ಕಾರಿನ ಜೊತೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬಿದ್ದಿದ್ದಾರೆ.
ಸದ್ಗುರು ಹೊಟೇಲ್ ಸಂತೋಷ್ 1980ರ ಫಿಯಟ್ ಕಾರಿಗೆ ಹೊಸ ಲುಕ್ ಕೊಟ್ಟಿದ್ದಾರೆ. "ಹಳೆಯದನ್ನೆಲ್ಲ ಉಳಿಸಿಕೊಂಡು ಹೋಗಬೇಕು. ಆ ಕಾರಣಕ್ಕೆ ಹಳೆಯ ಫಿಯಟ್ ಖರೀದಿಸಿದ್ದೇನೆ. ನಾನು ಆರ್ಸಿಬಿ ಅಭಿಮಾನಿ. ಆದ್ದರಿಂದ ಕಾರಿಗೆ ಆರ್ಸಿಬಿ ಸ್ಟಿಕ್ಕರ್ ಮಾಡಿಸಿದ್ದೇನೆ" ಎಂದು ಹೇಳಿದರು.

ಈ ಸಲ ಕಪ್ ನಮ್ದೆ; ಕಾರಿನ ಮುಂಭಾಗದ ಬಾನೆಟ್ ಮೇಲೆ 'ಈ ಸಲ ಕಪ್ ನಮ್ದೆ' ಎಂದು ಬರೆಯಿಸಿದ್ದಾರೆ. ಬಾನೆಟ್ನ ಮುಂಭಾಗ ನಟ ಡಾ. ರಾಜಕುಮಾರ್ ಭಾವಚಿತ್ರವಿದೆ. ಕಾರಿನ ಮೇಲೆ ನಟರಾದ ಶಂಕರನಾಗ್, ಡಾ. ವಿಷ್ಣುವರ್ಧನ್, ಪುನೀತ್ ರಾಜಕುಮಾರ್ ಫೋಟೊಗಳಿವೆ. ಮುಂಭಾಗದಲ್ಲಿ ಡಾ. ರಾಜಕುಮಾರ್ ಅವರ ದೊಡ್ಡ ಫೋಟೊ ಇದೆ.
ಅಚ್ಚೇ ದಿನ್; "ಇವೆಲ್ಲದರ ನಡುವೆ ಪೆಟ್ರೋಲ್ ಟ್ಯಾಂಕ್ ಮೇಲೆ ಬರೆಯಿಸಿರುವ ಪದ ಹಲವರ ಗಮನ ಸೆಳೆಯುತ್ತಿದೆ. 'ಅಚ್ಚೇ ದಿನ್' ಎಂದು ಸ್ಟಿಕ್ಕರ್ ಹಾಕಿಸಿದ್ದಾರೆ. ವಿಡಂಬನಾತ್ಮಕವಾಗಿ ಅಚ್ಚೇ ದಿನ್ ಎಂದು ಬರೆಯಿಸಿದ್ದೇನೆ. ಈ ಭಾರಿ ನಮ್ಮ ತಂಡ ಕಪ್ ಗೆಲ್ಲಬಹುದು ಎಂಬ ಕಾರಣಕ್ಕೆ ಅಚ್ಚೇ ದಿನ್ ಎಂದುಕೊಳ್ಳಬಹುದು. ಮತ್ತೊಂದು ಕಡೆ ಪೆಟ್ರೋಲ್ ರೇಟ್ ದುಬಾರಿಯಾಗಿರುವುದು ಅಚ್ಚೇ ದಿನ್ ಎಂದು ತಿಳಿದು ಕೊಳ್ಳಬಹುದು" ಎನ್ನುತ್ತಾರೆ ಸದ್ಗುರು ಸಂತೋಷ್.
ಕಾರಿನ ವಿಡಿಯೋ ವರೈಲ್; ಇನ್ನು ಆರ್ಸಿಬಿ ಮೇಲಿನ ಅಭಿಮಾನ, ಕಾರಿಗೆ ಹೊಸ ಲುಕ್ ಕೊಟ್ಟಿರುವುದನ್ನು ಸದ್ಗುರು ಸಂತೋಷ್ ಅವರು ವಿಡಿಯೋ ರೆಕಾರ್ಡ್ ಮಾಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರ್ಸಿಬಿ ತಂಡದ ಪರವಾಗಿ ಇರುವ ಅಭಿಮಾನಿಗಳಿಗೆ ಜೋಶ್ ನೀಡಿದೆ.
ಕಳೆದ ಐಪಿಎಲ್ ಹೊತ್ತಿಗೆ ತಮ್ಮ ಸ್ಕೂಟರ್ಗೆ ಐಪಿಎಲ್ ಸ್ಟಿಕರ್ ಮಾಡಿಸಿ ಸಂತೋಷ್ ಅವರು ಸುದ್ದಿಯಾಗಿದ್ದರು. ಈಗಲೂ ಆ ಸ್ಕೂಟರ್ ಹಲವರ ಗಮನ ಸೆಳೆಯುತ್ತಿದೆ. ಈ ಭಾರಿ ಫಿಯಟ್ ಕಾರಿಗೆ ಐಪಿಎಲ್ ಲುಕ್ ಕೊಟ್ಟಿದ್ದಾರೆ. ಇದು ಕೂಡ ಈಗ ಫೋಟೋ, ಸೆಲ್ಫಿ ಪ್ರಿಯರು, ಆರ್ಸಿಬಿ ಅಭಿಮಾನಿಗಳನ್ನು ಸೆಳೆಯುತ್ತಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications