ಇದೇ ಕಾರಣಕ್ಕೆ ಐಪಿಎಲ್ನಿಂದ ಆರ್ಸಿಬಿ ಬ್ಯಾನ್..
RCB: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಗೆದ್ದ ಆರ್ಸಿಬಿ ಟ್ರೋಫಿ ಇಲ್ಲ ಎನ್ನುವ ಕೊರಗನ್ನೇನೋ ಮರೆಸಿತು. ಆದರೆ, ಟ್ರೋಫಿ ಗೆದ್ದ ಬಳಿಕ ಬೆಂಗಳೂರು ತಂಡಕ್ಕೆ ಒಂದಲ್ಲ ಒಂದು ಆಪತ್ತುಗಳು ಎದುರಾಗುತ್ತಲಿವೆ. ಹಾಗೆಯೇ ಇದೀಗ ಕ್ಯಾಬಿನೆಟ್ ತೆಗೆದುಕೊಂಡಿರುವ ನಿರ್ಧಾರದಿಂದ ಮತ್ತೊಂದು ದೊಡ್ಡ ಗಂಡಾಂತರವೊಂದು ಎದುರಾಗಿದ್ದು, ಬ್ಯಾನ್ ಪರಿಸ್ಥಿತಿಗೆ ಬಂದು ನಿಂತಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು 17 ವರ್ಷಗಳ ಬಳಿಕ 18ನೇ ಆವೃತ್ತಿಯಲ್ಲಿ ಮೊಟ್ಟ ಮೊದಲ ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿತು. ಫೈನಲ್ ಪಂದ್ಯ ಅಹಮದಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜೂನ್ 3ರಂದು ನಡೆದಿದ್ದು, ಈ ವೇಳೆ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸುವ ಮೂಲಕ ಆರ್ಸಿಬಿ ಮೊದಲ ಟ್ರೋಫಿಗೆ ಮುತ್ತಿಟ್ಟಿತು. ಅಂದು ಬರೀ ಕರ್ನಾಟಕ ಮಾತ್ರವಲ್ಲದೆ, ಇಡೀ ದೇಶವೇ ಬೆಂಗಳೂರು ತಂಡದ ಗೆಲುವಿನ ಸಂಭ್ರಾಮಾಚರಣೆಯಲ್ಲಿ ಮಿಂದೆದಿತ್ತು.

ಮಾರನೇ ದಿನ ಜೂನ್ 4ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕ ಕಾಲ್ತುಳಿದ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದುರಂತ ಇಡೀ ದೇಶದ ಗಮನ ಸೆಳೆದಿದ್ದು ಅಲ್ಲದೆ, ಆರ್ಸಿಬಿಗೆ ಕಪ್ಪುಚುಕ್ಕೆಯಾಗಿಬಿಟ್ಟಿತು. ಆಗಿನಿಂದ ತುಂಬಾ ಬೆಳವಣಿಗೆಗಳು ಆಗುತ್ತಲೇ ಬಂದವು. ಆರ್ಸಿಬಿ ಹಾಗೂ ಕೆಎಸ್ಸಿಎ ವಿರುದ್ಧ ಎಫ್ಐಆರ್, ವಿರಾಟ್ ಕೊಹ್ಲಿ ಮೇಲೂ ದೂರು ದಾಖಲಾಯಿತು.
ಕ್ಯಾಬಿನೆಟ್ ತೆಗೆದುಕೊಂಡ ತೀರ್ಮಾನ ಏನು?: ಇನ್ನೂ ಇದೀಗ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಕುನ್ಹಾ ವರದಿ ಶಿಫಾರಸು ಜಾರಿಗೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಅರ್ಸಿಬಿ, ಕೆಎಸ್ಸಿಎ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ಕ್ಯಾಬಿನೆಟ್ ಅಧಿಕೃತ ಒಪ್ಪಿಗೆ ಸೂಚಿಸಿದೆ.
ಅಲ್ಲದೆ, ಪ್ರಕರಣದಲ್ಲಿ ಪೊಲೀಸರ ತಪ್ಪಿದೆ. ಅವರ ವಿರುದ್ಧವೂ ಕೂಡ ಇಲಾಖಾ ತನಿಖೆ ಆಗಬೇಕೆಂದು ಸಚಿವರು ಒಮ್ಮತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಡಿಎನ್ಎ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲು ಮಾಡುವಂತೆಯೂ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.
ವರದಿಯಲ್ಲಿ ಏನಿದೆ?: ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗವು ವಿಜಯೋತ್ಸವದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ತನಿಖಾ ವರದಿಯನ್ನು ಜುಲೈ 12ರಂದು ಸರ್ಕಾರಕ್ಕೆ ಸಲ್ಲಿಸಿತ್ತು. ಆರ್ಸಿಬಿ ಜೊತೆ ಬೆಂಗಳೂರು ಪೊಲೀಸರು ಕೈಜೋಡಿಸಿದ ಹಿನ್ನೆಲೆ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿ ಮಾಡಲಲಾಗಿತ್ತು.
ಆರ್ಸಿಬಿ ತನ್ನ ಅಧಿಕೃತ ಹ್ಯಾಂಡಲ್ನಲ್ಲಿ ಬೆಳಗ್ಗೆ ಎರಡು ಪೋಸ್ಟ್ ಮಾಡಿದ ಬಳಿಕ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಜನರ ದಂಡು ಸೇರಿದ್ದರೂ ಸಹ ಕ್ರೀಡಾಂಗಣಕ್ಕೆ ಪ್ರವೇಶದ ವಿಧಾನದ ವಿವರಗಳನ್ನು ನಿರ್ದಿಷ್ಟವಾಗಿ ತಿಳಿಸಿರಲಿಲ್ಲ.
ಗೇಟ್ಗಳ ಪ್ರವೇಶವನ್ನು ನಿಯಂತ್ರಿಸದಿರುವುದು ಮತ್ತು ಕ್ರೀಡಾಂಗಣದ ಪ್ರವೇಶಕ್ಕೆ ಸಂಬಂಧ ಸರಿಯಾದ ವಿವರಣೆ ನೀಡದ ಹಿನ್ನೆಲೆ ಆಯೋಜಕರೇ ಈ ದುರಂತಕ್ಕೆ ಕಾರಣರಾಗಿದ್ದಾರೆ. ಸರಿಯಾಗಿ ಪೊಲೀಸರಿಂದ ಅನುಮತಿ ಪಡೆಯದೇ ದಿಢೀರ್ ನಿರ್ಧಾರ ತೆಗೆದುಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಉಲ್ಲೇಖ ಮಾಡಲಾಗಿತ್ತು. ಒಟ್ಟಿನಲ್ಲಿ ಕೊನೆಗೆ ಆರ್ಸಿಬಿ ವಿರುದ್ಧ ಕ್ರಮಿನಲ್ ಕೇಸ್ ದಾಖಲಿಸಲು ಕ್ಯಾಬಿನೆಟ್ನಲ್ಲಿ ನಿರ್ಧಾರ ತೆಗೆದುಕೊಂಡಿದ್ದು, ಇದು ತಂಡದ ಬ್ಯಾನ್ವರೆಗೂ ಹೋಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
-
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
ಐಪಿಎಲ್ 2026 ಉದ್ಘಾಟನಾ ಪಂದ್ಯಕ್ಕೂ ಮುನ್ನ ಆರ್ಸಿಬಿಯಿಂದ ಸ್ಟಾರ್ ಆಟಗಾರ ಔಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications