RCB: ಆರ್ಸಿಬಿಯಲ್ಲಿ ಉಳಿದುಕೊಳ್ಳಲಿರುವ ಆಟಗಾರರು
IPL 2025 RCB Team: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್ಸಿಬಿ ಭರ್ಜರಿಯಾಗು ಗೆಲ್ಲುವ ಮೂಲಕ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ಇದೀಗ ಎಲ್ಲರ ಚಿತ್ತ 2026ರ ಸೀಸನ್ನತ್ತ ನೆಟ್ಟಿದ್ದು, ಪ್ರಾಂಚೈಸಿ ಯಾರನ್ನೆಲ್ಲಾ ತಂಡದಲ್ಲಿ ಉಳಿಸಿಕೊಳ್ಳಲಿದೆ ಎನ್ನುವ ಬಿಗ್ ಅಪ್ಡೇಟ್ವೊಂದು ಲಭ್ಯವಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿದ 17 ಆವೃತ್ತಿಗಳಿಂದ ಒಂದೇ ಒಂದು ಟ್ರೋಫಿ ಗೆದ್ದಿರಲಿಲ್ಲ. ಆದರೆ 18ನೇ ಆವೃತ್ತಿಯ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿಯಾಗಿ ಗೆಲ್ಲುವ ಮೂಲಕ ಟ್ರೋಫಿ ಇಲ್ಲ ಎನ್ನುವ ಕೊರಗಿಗೆ ತೆರೆ ಎಳೆಯಿತು. ಇದಕ್ಕೆ ಪ್ರಮುಖ ಕಾರಣ ತಂಡ ಈ ಬಾರಿ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ತೋರಿದ್ದು. ಇದೀಗ ಮುಂದಿನ ಸೀಸನ್ನಲ್ಲಿ ಯಾವೆಲ್ಲಾ ಆಟಗಾರರನ್ನು ಉಳಿಸಿಕೊಳ್ಳಲಿದ ಎನ್ನುವ ಬಿಗ್ ಅಪ್ಡೇಟ್ವೊಂದು ಇಲ್ಲಿದೆ ನೋಡಿ.

ಕಳೆದ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ 18 ವರ್ಷಗಳ ವನವಾಸವನ್ನು ಕೊನೆಗೊಳಿಸಿ ಚೊಚ್ಚಲ ಟ್ರೋಫಿ ಗೆದ್ದುಕೊಂಡಿತು. ಇನ್ನೂ ಆರ್ಸಿಬಿ ಐಪಿಎಲ್ 2026ಕ್ಕೆ 2025ರ ವಿಜೇತ ತಂಡವನ್ನೇ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಕೆಲವರನ್ನು ಮಾತ್ರ ಕೈಬಿಡಲಿದ್ದು, ಉಳಿದಂತೆ ಬಹುತೇಕ ಅವರನ್ನೇ ಉಳಿಸಿಕೊಳ್ಳುವ ಆಲೋಚನೆಯಲ್ಲಿದೆ ಎನ್ನುವ ಮಾಹಿತಿಯಿದೆ.
2025ರ ಆವೃತ್ತಿಯಲ್ಲಿ ಕೆಲವರನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಆಟಗಾರರು ಅಂದುಕೊಂಡಿಂತಕ್ಕಿಂತಲೂ ಉತ್ತಮ ಪ್ರದರ್ಶನ ತೋರಿದ್ದರು. ಈ ಮೂಲಕ ಮುಂದಿನ ಸೀಸನ್ಗೂ ಕೂಡ ಇದೇ ತಂಡವನ್ನು ಉಳಿಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ನಿರ್ಧರಿಸಿದೆ ಎನ್ನುವ ಮಾಹಿತಿ ಇದೆ. ಯಾಕಂದ್ರೆ ಒಬ್ಬರು ಗಾಯವಾಗಿ ಹೊರಗುಳಿದರೆ, ಆ ಸ್ಥಾನ ತುಂಬಲು ಮತ್ತೊಬ್ಬ ಆಟಗಾರ ಆರ್ಸಿಬಿಯಲ್ಲಿದ್ದಾರೆ. ಆದ್ದರಿಂದ ತಂಡದಲ್ಲಿ ಹೆಚ್ಚು ಬದಲಾವಣೆಗಳು ಇರುವುದಿಲ್ಲ ಎನ್ನಲಾಗುತ್ತಿದೆ.
ಆರ್ಸಿಬಿ ಉಳಿಸಿಕೊಳ್ಳಲು ನಿರ್ಧಾರ ಮಾಡಿರುವ ತಂಡ ತುಂಬಾ ಬಲಿಷ್ಠ ಆಗಿದೆ. ಈಗಾಗಲೇ ಕಳೆದ ಸೀಸನ್ನಲ್ಲಿ ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್ಸಿಬಿ ಟ್ರೋಫಿ ಗೆದ್ದಿದ್ದು, ಮುಂದಿನ ಆವೃತ್ತಿಯಲ್ಲೂ ಉತ್ತಮ ತಂಡದೊಂದಿದೆ ಮತ್ತೆ ಕಪ್ ಗೆಲ್ಲುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿವೆ. ಅಷ್ಟರ ಮಟ್ಟಿಗೆ ಬಲಿಷ್ಠ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಂದಿದೆ.
ಮತ್ತೊಂದೆಡೆ ಮುಂದಿನ ಆವೃತ್ತಿಯಿಂದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಐಪಿಎಲ್ ಆಡುವುದು ಅನುಮಾನ. ಅವರು ವಿದಾಯ ಘೋಷಣೆ ಮಾಡಲಿದ್ದಾರೆ ಎನ್ನುವ ಸುದ್ದಿಗಳು ಹಬ್ಬಿದ್ದವು. ಆದರೆ ಇದೀಗ ಇದಕ್ಕೆಲ್ಲಾ ಸ್ಪಷ್ಟನೆ ಸಿಕ್ಕಿದ್ದು, ಮುಂದಿನ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಅವರು ಸದ್ಯ ಯಾವುದೇ ನಿವೃತ್ತಿಯ ಮಾತುಗಳನ್ನು ಆಡಿಲ್ಲ. ಕೊನೆಯವರೆಗೂ ಅವರು ಬೆಂಗಳೂರಿನ ಪರ ಕಣಕ್ಕಿಯಲಿದ್ದಾರೆ ಎನ್ನುವ ಸ್ಪಷ್ಟನೆ ಸಿಕ್ಕಿದೆ.
ಆರ್ಸಿಬಿ ಉಳಿಸಿಕೊಳ್ಳುವ ಆಟಗಾರರು
* ರಜತ್ ಪಾಟಿದಾರ್ (ನಾಯಕ)
* ವಿರಾಟ್ ಕೊಹ್ಲಿ
* ಫಿಲ್ ಸಾಲ್ಟ್
* ದೇವದತ್ ಪಡಿಕ್ಕಲ್
* ಜಿತೇಶ್ ಶರ್ಮಾ (ವಿಕೆಟ್ ಕೀಪರ್)
* ಟಿಮ್ ಡೇವಿಡ್
* ರೊಮಾರಿಯೊ ಶೆಫರ್ಡ್
* ಜಾಕೋಬ್ ಬೆಥೆಲ್
* ಕೃನಾಲ್ ಪಾಂಡ್ಯ
* ಜೋಶ್ ಹ್ಯಾಜಲ್ವುಡ್
* ಭುವನೇಶ್ವರ್ ಕುಮಾರ್
* ನುವಾನ್ ತುಷಾರ
* ಸುಯಶ್ ಶರ್ಮಾ
* ಸ್ವಸ್ತಿಕ್ ಚಿಕಾರ
* ಮನೋಜ್ ಭಾಂಡಗೆ
-
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Tejasvi Surya: ಕೆಎಸ್ಸಿಎನಿಂದ ಐಪಿಎಲ್ ಫ್ರೀ ಟಿಕೆಟ್ ಚರ್ಚೆ: ಕಾಂಗ್ರೆಸ್ ಶಾಸಕರಿಗೆ ಸಂಸದ ತೇಜಸ್ವಿ ಸೂರ್ಯ ಕ್ಲಾಸ್ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications