RCB: ಆರ್ಸಿಬಿ ನಾಯಕನ ರೇಸ್ನಲ್ಲಿ ಮೂವರು ಪ್ರಬಲ ಆಟಗಾರರು.!
Royal Challengers Bengaluru: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಐಪಿಎಲ್ 2025ರ ಮೆಗಾ ಹರಾಜಿಗೆ ಕೆಲವೇ ದಿನಗಳಷ್ಟೇ ಬಾಕಿಯಿವೆ. ಇನ್ನು ಆರ್ಸಿಬಿ ವಿಚಾರಕ್ಕೆ ಬಂದರೆ, ಇಲ್ಲಿನ ಫ್ರಾಂಚೈಸಿ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡಿದೆ. ಮತ್ತೊಂದೆಡೆ ತಂಡ ಇದೀಗ ಚಾಣಕ್ಷ ನಾಯಕನ ಹುಡುಕಾಟದಲ್ಲಿದೆ. ಈ ಸರದಿಯಲ್ಲಿ ಮೂವರು ಸ್ಟಾರ್ ಆಟಗಾರಿದ್ದಾರೆ.
ಐಪಿಎಲ್ 2025ರ ಮೆಗಾ ಹರಾಜಿಗೆ 10 ಫ್ರಾಂಚೈಸಿಗಳು ಭರ್ಜರಿ ಸಿದ್ಧತೆಯನ್ನು ಮಾಡಿಕೊಂಡಿವೆ. ನವೆಂಬರ್ 24-25 ರಂದು ಜೆಡ್ಡಾದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡೆದಿರುವ 17 ಆವೃತ್ತಿಗಳಲ್ಲೂ ಕಪ್ ಗೆದ್ದಿಲ್ಲ. ಆದರೆ ಈ ಬಾರಿ 18ನೇ ಆವೃತ್ತಿಯಲ್ಲಿ ಶತಾಯಗತಾಯ ಕಪ್ ಗೆದ್ದೇ ಗೆಲ್ಲಬೇಕೆನ್ನುವ ಹಠದಲ್ಲಿ ಆರ್ಸಿಬಿ ಇದೆ.

2022ರಲ್ಲಿ ಆರ್ಸಿಬಿ ಗ್ಲೇನ್ ಮ್ಯಾಕ್ಸ್ವೆಲ್, ಮೊಹಮ್ಮದ್ ಸೀರಾಜ್, ವಿರಾಟ್ ಕೊಹ್ಲಿಯಷ್ಟೇ ಉಳಿಸಿಕೊಂಡ ಇನ್ನು ಮಿಕ್ಕಿದವರನ್ನೆಲ್ಲ ಕೈಬಿಟ್ಟಿತ್ತು. ಇದೀಗ 2025ನೇ ಆವೃತ್ತಿಗೆ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್ ಅವರನ್ನು ಮಾತ್ರ ಉಳಿಸಿಕೊಂಡು ಇನ್ನೆಲ್ಲ ಪ್ಲೇಯರ್ಸ್ಗಳನ್ನು ಕೈಬಿಟ್ಟಿದೆ.
ಇದೀಗ ಆರ್ಸಿಬಿ ವಿಕೇಟ್ ಕೀಪರ್ ಮತ್ತು ನಾಯಕನಿಗಾಗಿ, ಬ್ಯಾಟ್ಸ್ಮನ್ಗಾಗಿ ಹುಡುಕಾಟ ನಡೆಸುತ್ತಿದೆ. ಈ ಪಟ್ಟಿಯಲ್ಲಿ ಕೆ.ಎಲ್.ರಾಹುಲ್, ರಿಷಬ್ ಪಂತ್, ಇಶಾನ್ ಕಿಶನ್ ಸೇರಿದಂತೆ ಹಲವು ಪ್ರಬಲ ಹೆಸರುಗಳು ಕೇಳಿಬಂದಿವೆ. ಅದರಲ್ಲೂ ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್ ಮತ್ತು ರಿಷಬ್ ಪಂತ್ ಐಪಿಎಲ್ 2025ರಲ್ಲಿ ಆರ್ಸಿಬಿಯನ್ನು ಮುನ್ನಡೆಸುವ ಸ್ಪರ್ಧಿಗಳಾಗಬಹುದು ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಈ ಮೂವರಲ್ಲಿ ಫಾಫ್ ಡು ಪ್ಲೆಸಿಸ್ ನಂತರ ನಾಯಕ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂದು ಕಾದುನೋಡಬೇಕಿದೆ.
ಅದರಲ್ಲೂ ವಿಕೆಟ್ ಕೀಪರ್, ಬ್ಯಾಟರ್ ರಿಷಬ್ ಪಂತ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಯಕನನ್ನಾಗಿ ಮಾಡುವ ಮಾಡುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಮೆಗಾ ಹರಾಜಿನ ಮೊದಲು ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಕೈಬಿಟ್ಟಿದೆ. ರಿಷಬ್ ಪಂತ್ ಐಪಿಎಲ್ 2024ರಲ್ಲಿ ಡೆಲ್ಲಿ ತಂಡಕ್ಕೆ ನಾಯಕರಾಗಿದ್ದರು. ಆದರೆ, ಕಪ್ ಗೆಲ್ಲುವಲ್ಲಿ ವಿಫಲರಾದರು ಎಂಬುದು ಗಮನಿಸಬೇಕಾದ ವಿಚಾರವಾಗಿದೆ.
ಇದರ ನಡುವೆ ಆರ್ಸಿಬಿ ತಂಡ ರಿಷಬ್ ಪಂತ್ ಅವರ ಉತ್ತಮ ಪ್ರದರ್ಶನವನ್ನು ಗುರುತಿಸುವ ಮೂಲಕ ಅವರನ್ನೇ ನಾಯಕನ ಸ್ಥಾನಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಪಂತ್ ಇದುವರೆಗೆ 111 ಐಪಿಎಲ್ ಪಂದ್ಯಗಳನ್ನು ಆಡಿದ್ದು, 3,284 ರನ್ ಗಳಿಸಿದ್ದಾರೆ. ಈ ಮೂಲಕ ಅವರು 35.31 ಸರಾಸರಿಯನ್ನು ಕಾಯ್ದುಕೊಂಡಿದ್ದಾರೆ ಎಂಬುದನ್ನು ಗಮನಿಸಲೇಬೇಕಾದ ಸಂಗತಿಯಾಗಿದೆ.
ಇದೀಗ ಆರ್ಸಿಬಿ ಬಳಿ 83 ಕೋಟಿ ರೂಪಾಯಿ ಇದ್ದು, ಸೂಕ್ತ ನಾಯಕನಿಗಾಗಿ ಹುಡುಕಾಟ ನಡೆಸುತ್ತಿದೆ. ಈ ಸರದಿಯಲ್ಲಿ ಪಂತ್ ಇದ್ದಾರೆ ಎನ್ನುವ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿವೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications