RCB vs CSK: ಕೊನೆಯ ಬಾರಿ ವಿರಾಟ್ ಕೊಹ್ಲಿ- ಎಂಎಸ್ ಧೋನಿ ಮುಖಾಮುಖಿ?
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧ ಸೆಣೆಸಲು ಸಜ್ಜಾಗಿದೆ. ಐಪಿಎಲ್ನ ಬದ್ದವೈರಿಗಳು ಎಂದೇ ಪರಿಗಣಿಸುವ ಈ ಪಂದ್ಯ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಕ್ರಿಕೆಟ್ ಜಗತ್ತಿನ ಇಬ್ಬರು ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಮುಖಾಮುಖಿಯಾಗುತ್ತಿದ್ದು ಪಂದ್ಯವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ.
ಸಿಎಸ್ಕೆ ತಂಡ ಈಗಾಗಲೇ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಆರ್ ಸಿಬಿ ಅಗ್ರ ಎರಡು ಸ್ಥಾನದಲ್ಲಿ ಪ್ಲೇಆಫ್ ಪ್ರವೇಶಿಸಲು ಕಾಯುತ್ತಿದೆ. ಸಿಎಸ್ಕೆ ಈ ಬಾರಿ ತೀರಾ ಕಳಪೆ ಪ್ರದರ್ಶನ ನೀಡಿದ್ದು ಪಂದ್ಯಾವಳಿಯಿಂದ ಹೊರಬಿದ್ದಿದೆ. ಈಗ ಯುವ ಆಟಗಾರರಿಗೆ ತಂಡದಲ್ಲಿ ಹೆಚ್ಚಿನ ಅವಕಾಶ ಸಿಗುವ ಸಾಧ್ಯತೆ ಇದೆ.

ವಿರಾಟ್- ಧೋನಿ ಕೊನೆಯ ಬಾರಿ ಮುಖಾಮುಖಿ
ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಐಪಿಎಲ್ ಪಂದ್ಯದಲ್ಲಿ ಇದೇ ಕೊನೆಯ ಬಾರಿ ಮುಖಾಮುಖಿಯಾಗುವ ಸಾಧ್ಯತೆ ಇದೆ. ಮುಂದಿನ ಆವೃತ್ತಿಯಲ್ಲಿ ಎಂಎಸ್ ಧೋನಿ ಆಡುವ ಸಾಧ್ಯತೆ ತೀರಾ ಕಡಿಮೆ ಇರುವ ಕಾರಣ ಇಬ್ಬರು ದಿಗ್ಗಜರನ್ನು ಮೈದಾನದಲ್ಲಿ ನೋಡುವುದು ಇದೇ ಕೊನೆಯ ಬಾರಿ ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದಾರೆ.
ಈ ಆವೃತ್ತಿಯಲ್ಲಿ ಈಗಾಗಲೇ ಆರ್ ಸಿಬಿ ಸಿಎಸ್ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ 50 ರನ್ಗಳ ಭರ್ಜರಿ ಗೆಲುವ ಸಾಧಿಸುವ ಮೂಲಕ 17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್ಕೆ ವಿರುದ್ಧ ಗೆದ್ದ ಸಾಧನೆ ಮಾಡಿದೆ.
ಕಳೆದ ಆವೃತ್ತಿಯಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್ ಸಿಬಿ ಸಿಎಸ್ಕೆ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಪ್ಲೇಆಫ್ ತಲುಪಿತ್ತು. ಈಗ ಸಿಎಸ್ಕೆ ಪ್ಲೇಆಫ್ ತಲುಪಲು ಅವಕಾಶವಿಲ್ಲದ ಕಾರಣ ಆರ್ ಸಿಬಿ ಪ್ಲೇಆಫ್ ಹಾದಿಯನ್ನು ಕಷ್ಟವಾಗಿಸುವ ಅವಕಾಶವಿದೆ.
ಆದರೆ ಆರ್ ಸಿಬಿ ಬಲಿಷ್ಠವಾಗಿದ್ದು ತವರಿನಲ್ಲಿ ಈಗಾಗಲೇ ಗೆಲುವು ಕಂಡಿರುವ ಕಾರಣ, ಸಿಎಸ್ಕೆ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್ನಲ್ಲಿದ್ದು ಈಗಾಗಲೇ 6 ಅರ್ಧಶತಕ ಗಳಿಸಿದ್ದಾರೆ. ಮತ್ತೊಮ್ಮೆ ಕೊಹ್ಲಿ ಮಿಂಚಿದರೆ ಆರ್ ಸಿಬಿ ಗೆಲುವು ಸುಲಭವಾಗಲಿದೆ. ಜ್ವರದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಹೊರಗುಳಿದಿದ್ದ ಫಿಲ್ ಸಾಲ್ಟ್ ಸಿಎಸ್ಕೆ ವಿರುದ್ಧ ಕಣಕ್ಕಿಳಿಯುವುದು ಖಚಿತವಾಗಿದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಆರ್ ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹ್ಯಾಜಲ್ವುಡ್, ಯಶ್ ದಯಾಲ್.
ಸಿಎಸ್ಕೆ: ಶೇಕ್ ರಶೀದ್, ಆಯುಷ್ ಮ್ಹಾತ್ರೆ, ದೀಪಕ್ ಹೂಡಾ, ಸ್ಯಾಮ್ ಕರ್ರಾನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಎಂಎಸ್ ಧೋನಿ (ನಾಯಕ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಮಥೀಶ ಪತಿರಾನ.
-
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications