Virat Kohli and Gautam Gambhir: ಮುನಿಸು ಮರೆತು ಫ್ಯಾನ್ಸ್ ಮನಗೆದ್ದ ದಿಗ್ಗಜರು
ಆರ್ಸಿಬಿಯ ವಿರಾಟ್ ಕೊಹ್ಲಿ ಮತ್ತು ಕೆಕೆಆರ್ ಮೆಂಟರ್ ಗೌತಮ್ ಗಂಭೀರ್ ನಡುವೆ ಎಲ್ಲವೂ ಸರಿಯಾಗಿದೆ ಎಂದು ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸಾಬೀತಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ವರ್ಷ ಐಪಿಎಲ್ ಪಂದ್ಯದ ವೇಳೆ ಕಿರಿಕ್ ಮಾಡಿಕೊಂಡಿದ್ದ ಗಂಭೀರ್ ಈ ಬಾರಿ ಶಾಂತವಾಗಿದ್ದು, ಅಭಿಮಾನಿಗಳ ಮನಗೆದ್ದಿದ್ದಾರೆ.
ಐಪಿಎಲ್ 2024 ರ 10ನೇ ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯದ ವೇಳೆ ಇಬ್ಬರು ಪರಸ್ಪರ ತಬ್ಬುಕೊಳ್ಳುವ ಮೂಲಕ ಇಬ್ಬರ ನಡುವಿನ ಪೈಪೋಟಿ, ದ್ವೇಷದ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ

ಶುಕ್ರವಾರದ ಪಂದ್ಯಕ್ಕೆ ಮುನ್ನ ಇದು ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಕದನ ಎಂದೇ ಬಿಂಬಿಸಲಾಗಿತ್ತು. ಇಬ್ಬರೂ ಕೂಡ ಮುಂಗೋಪಿಗಳಾಗಿದ್ದು, ಮೈದಾನದಲ್ಲಿ ಹಲವು ಬಾರಿ ಕಿತ್ತಾಡಿಕೊಂಡಿದ್ದು ಇದಕ್ಕೆ ಕಾರಣ. ಆದರೆ ಈ ಬಾರಿ ಇಬ್ಬರೂ ಕೂಡ ಮುನಿಸು ಮರೆತು, ಕ್ರೀಡಾ ಮನೋಭಾವ ಮೆರೆದಿದ್ದಾರೆ.
ಇಬ್ಬರ ನಡುವಿನ ತಿಕ್ಕಾಟ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಐಪಿಎಲ್ 2023 ರ ಲೀಗ್ ಹಂತದ ಪಂದ್ಯದಲ್ಲಿ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ನಡುವೆ ಜಗಳವಾಗಿತ್ತು.
ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಇಬ್ಬರ ನಡುವೆ ಶುರುವಾದ ಜಗಳ, ನಂತರ ಲಕ್ನೋದಲ್ಲಿ ನಡೆದ ಪಂದ್ಯದಲ್ಲಿ ಗಂಭೀರ್ ಮತ್ತು ಕೊಹ್ಲಿ ನಡುವೆ ತೀವ್ರ ಮಾತಿನ ಚಕಮಕಿಗೆ ಕಾರಣವಾಗಿತ್ತು. ಅದಾದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಯಾಗಿತ್ತು.
ಅರ್ಧಶತಕ ಸಿಡಿಸಿದ ಕೊಹ್ಲಿ
ಐಪಿಎಲ್ 2024ರಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಫಾರ್ಮ್ ಮುಂದುವರೆಸಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 59 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 83 ರನ್ ಗಳಿಸಿದರು. ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿದ್ದು, ಕೆಕೆಆರ್ ತಂಡಕ್ಕೆ 183 ರನ್ಗಳ ಸವಾಲಿನ ಗುರಿ ನೀಡಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications