RCB vs PBKS: ಮೊದಲ ಪಂದ್ಯದಲ್ಲೇ ಆರ್ಸಿಬಿಗೆ ಭಯ ಹುಟ್ಟಿಸಿದ ಕನ್ನಡಿಗ ಕಾವೇರಪ್ಪ
ಐಪಿಎಲ್ 2024ರ ಅಖಾಡಕ್ಕೆ ಮತ್ತೊಬ್ಬ ಕನ್ನಡಿಗನ ಎಂಟ್ರಿಯಾಗಿದೆ. ಕರ್ನಾಟಕದ ವೇಗದ ಬೌಲರ್ ವಿದ್ವತ್ ಕಾವೇರಪ್ಪ, ಮೊದಲ ಐಪಿಎಲ್ ಪಂದ್ಯದಲ್ಲೇ ಮಿಂಚಿದ್ದಾರೆ.
ಕನ್ನಡಿಗ ಕಾವೇರಪ್ಪ ಆರ್ಸಿಬಿ ವಿರುದ್ಧವೇ ಚೊಚ್ಚಲ ಪಂದ್ಯವನ್ನಾಡಿದ್ದು ವಿಶೇಷ. ತಮ್ಮ ಮೊದಲ ಪಂದ್ಯದಲ್ಲೇ ಆರ್ಸಿಬಿ ಆಟಗಾರರು, ಅಭಿಮಾನಿಗಳು ಗಾಬರಿಯಾಗುವಂತಹ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಮೊದಲ ಪಂದ್ಯದಲ್ಲಿ ಮೊದಲ ಓವರ್ ನಲ್ಲೇ ದಾಳಿಗಿಳಿದ ಅವರು, ತಮ್ಮ ಮೊದಲ ಓವರ್ ನಲ್ಲೇ ವಿರಾಟ್ ಕೊಹ್ಲಿ ಅವರ ವಿಕೆಟ್ ಪಡೆಯುವ ಅವಕಾಶ ಸೃಷ್ಟಿಸಿದರು, ಆದರೆ ಆಶುತೋಷ್ ಶರ್ಮಾ ಕ್ಯಾಚ್ ಬಿಟ್ಟ ಕಾರಣ ನಿರಾಸೆ ಅನುಭವಿಸಿದರು.
ಆದರೆ ತಮ್ಮ ಎರಡನೇ ಓವರ್ ನಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಅದೇ ಓವರ್ ನಲ್ಲಿ ಪಂಜಾಬ್ ಕಿಂಗ್ಸ್ ಫಿಲ್ಡರ್ ಗಳು ಮತ್ತೊಮ್ಮೆ ವಿರಾಟ್ ಕೊಹ್ಲಿ ಅವರ ಕ್ಯಾಚ್ ಬಿಟ್ಟರು. ಬಳಿಕ ಬಂದ ಸ್ಫೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ಅವರ ವಿಕೆಟ್ ಪಡೆದುಕೊಂಡರು.
ರಜತ್ ಪಾಟಿದಾರ್ ಕೂಡ ಎರಡನೇ ಎಸೆತದಲ್ಲೇ ಕಾವೇರಪ್ಪ ಬೌಲಿಂಗ್ನಲ್ಲಿ ಸುಲಭ ಕ್ಯಾಚ್ ಕೊಟ್ಟರು ಹರ್ಷಲ್ ಪಟೇಲ್ ಕೈಚಲ್ಲಿದರು. ಬಳಿಕ ಅಬ್ಬರಿಸಿದ ರಜತ್ ಪಟಿದಾರ್, ಕೇವಲ 21 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು.
ಬರೋಬ್ಬರಿ ಮೂರು ಪ್ರಮುಖ ಕ್ಯಾಚ್ ಕೈಬಿಟ್ಟರು ವಿದ್ವತ್ ಕಾವೇರಪ್ಪ ಎರಡು ಪ್ರಮುಖ ವಿಕೆಟ್ ಪಡೆದುಕೊಂಡರು. ಒಂದು ಹಂತದಲ್ಲಿ ಆರ್ ಸಿಬಿ ಪಾಳಯದಲ್ಲಿ ಆತಂಕ ಉಂಟಾಗಿತ್ತು, ಆದರೆ ರಜತ್ ಪಾಟಿದಾರ್ ಮತ್ತು ಕೊಹ್ಲಿ ವಿಕೆಟ್ ಬೀಳದಂತೆ ರನ್ ಕಲೆಹಾಕಿದರು.
ಉತ್ತಮ ಬೌಲರ್ ಕನ್ನಡಿಗ ಕಾವೇರಪ್ಪ
ವಿದ್ವತ್ ಕಾವೇರಪ್ಪ ಕರ್ನಾಟಕ ತಂಡಕ್ಕಾಗಿ ಆಡುವ ವೇಗದ ಬೌಲರ್. ಈ ಬಾರಿಯ ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 12 ಟಿ20 ಪಂದ್ಯಗಳನ್ನಾಡಿರುವ ಅವರು, 23 ವಿಕೆಟ್ ಪಡೆದುಕೊಂಡಿದ್ದಾರೆ, ಅವರ ಎಕಾನಮಿ 5.89 ಹೊಂದಿದ್ದಾರೆ.
18 ಲಿಸ್ಟ್ ಎ ಪಂದ್ಯಗಳಲ್ಲಿ 38 ವಿಕೆಟ್ ಪಡೆದುಕೊಂಡಿರುವ ಅವರು, 20 ಪ್ರಥಮ ದರ್ಜೆ ಪಂದ್ಯಗಳಲ್ಲಿ ಬರೋಬ್ಬರಿ 80 ವಿಕೆಟ್ ಪಡೆದುಕೊಂಡಿದ್ದಾರೆ. ಭಾರತ ಎ ತಂಡಕ್ಕೂ ಆಡಿರುವ ಅವರು, ಈ ವರ್ಷ ಬಿಸಿಸಿಐ ಒಪ್ಪಂದ ಕೂಡ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಭಾರತ ತಂಡಕ್ಕೆ ಪದಾರ್ಪಣೆ ಮಾಡುವ ಗುರಿ ಹೊಂದಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications