ಬೌಲರ್ಗಳದ್ದೇನು ತಪ್ಪಿಲ್ಲ, ಎಡವುತ್ತಿರುವುದೇ ಬ್ಯಾಟಿಂಗ್ ವಿಭಾಗದಲ್ಲಿ: ಆರ್ಸಿಬಿ ಬ್ಯಾಟ್ಸ್ಮನ್ಗಳ ವಿರುದ್ಧ ಸೇಹ್ವಾಗ್..
Virender Sehwag: ಐಪಿಎಲ್ 2025ರಲ್ಲಿ ಆರ್ಸಿಬಿಯು ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಸತತ ಮೂರು ಪಂದ್ಯಗಳನ್ನು ಸೋತಿದೆ. ಶುಕ್ರವಾರ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೇಹ್ವಾಗ್ ಆರ್ಸಿಬಿ ಬ್ಯಾಟ್ಸ್ಮನ್ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಸೋಲನುಭವಿಸಿತು. ಮಳೆಯಿಂದಾಗಿ 14 ಓವರ್ಗಳಿಗೆ ಪಂದ್ಯವನ್ನು ಆಡಿಸಲಾಗಿತ್ತು. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಅಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಆರ್ಸಿಬಿ ನಿಗದಿತ 14 ಓವರ್ಗಳಿಗೆ 9 ವಿಕೆಟ್ ಕಳೆದುಕೊಂಡು ಬರೀ 95 ರನ್ಗಳನ್ನು ಕಲೆಹಾಕುವ ಮೂಲಕ 96 ರನ್ಗಳ ಟಾರ್ಗೆಟ್ ನೀಡಿತು.

ಆರ್ಸಿಬಿಯ ಪರ ಟೀಂ ಡೆವಿಡ್ ಅಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ಏಕಾಂಗಿ ಹೋರಾಟದಿಂದ 50 ರನ್ಗಳನ್ನು ಕಲೆಹಾಕಿದರು. ಈ ಮೂಲಕ ತಂಡದ ಮೊತ್ತವನ್ನು 90ರ ಗಡಿ ದಾಟಿಸಿದರು. ಆದರೆ, ಈ ಸಾಧಾರಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಕೇವಲ 12.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 98 ರನ್ ಗಳಿಸಿ ಸುಲಭವಾಗಿ ಗೆದ್ದಿತು.
ಪಂಜಾಬ್ ಪರ ಬ್ಯಾಟ್ ಬೀಸಿದ ನೆಹಾಲ್ ವಾಧೇರಾರ 19 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಕೊನೆಯದಾಗಿ ಸ್ಟೋಯ್ನಿಸ್ ವಿನ್ನಿಂಗ್ ಶಾಟ್ ಸಿಕ್ಸ್ ಮೂಲಕ ಪಂಜಾಬ್ ತಂಡವನ್ನು ಗೆಲ್ಲಿಸಿದರು. ಹೀಗೆ ಪಂಜಾಬ್ ಆರ್ಸಿಬಿ ವಿರುದ್ಧ 5 ವಿಕೆಟ್ಗಳ ಜಯ ಸಾಧಿಸಿತು. ಇನ್ನು ಆರ್ಸಿಬಿಯ ಬ್ಯಾಟ್ಸ್ಮನ್ಗಳ ಬೇಜವಾಬ್ದಾರಿ ಆಟದ ವಿರುದ್ಧ ವಿರೇಂದ್ರ ಸೇಹ್ವಾಗ್ ಆಕ್ರೋಶ ವ್ಯಕ್ತಪಡಿಸಿದರು.
ಸೇಹ್ವಾಗ್ ಹೇಳಿದ್ದೇನು?: ಈ ಪಂದ್ಯದಲ್ಲಿ ಆರ್ಸಿಬಿ ಬ್ಯಾಟ್ಸ್ಮನ್ಗಳು ಬೇಜವಾಬ್ದಾರಿಯುತ ಆಟ ಆಡಿದ್ದಕ್ಕೆ ವಿರೇಂದ್ರ ಸೆಹ್ವಾಗ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಆರ್ಸಿಬಿ ತಂಡದ ಎಲ್ಲಾ ಬ್ಯಾಟರ್ಗಳು ಬೇಗನೇ ವಿಕೆಟ್ ಒಪ್ಪಿಸಿಬಿಟ್ಟರು. ಒಬ್ಬರೂ ಕಾಮನ್ ಸೆನ್ಸ್ ಇಲ್ಲದವರಂತೆ ಆಡಿದರು ಎಂದು ಅಸಮಧಾನ ವ್ಯಕ್ತಪಡಿಸಿದರು.
ಕನಿಷ್ಠ ಒಬ್ಬ ಬ್ಯಾಟ್ಸ್ಮನ್ನಾದರೂ ಸಾಮಾನ್ಯ ಜ್ಞಾನ ಬಳಸಿದ್ದರೆ, ರನ್ಗಳು 110-120 ಆಗುತ್ತಿತ್ತು. ಆಗ ಗೆಲುವಿಗೆ ಹೋರಾಡುವ ಅವಕಾಶ ಇತ್ತು ಎಂದು ಆರ್ಸಿಬಿ ಬ್ಯಾಟ್ಸ್ಮನ್ಗಳ ವಿರುದ್ಧ ಕೆಂಡಕಾರಿದರು. ಆರ್ಸಿಬಿಯ ಬೌಲರ್ಗಳು ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಝಲ್ವುಡ್ ಕೇವಲ ಒಂದೊಂದು ವಿಕೆಟ್ ಪಡೆದರು. ಆರ್ಸಿಬಿ ಬೌಲರ್ಗಳು ಉತ್ತಮವಾಗಿ ಪ್ರದರ್ಶನ್ ತೋರುತ್ತಿದ್ದಾರೆ. ಆದರೆ, ಬ್ಯಾಟ್ಸ್ಮನ್ಗಳ ವೈಫಲ್ಯದಿಂದ ತಂಡ ಸೋಲುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಿತು. ಆರಂಭದಿಂದಲೇ ಅಭಿಮಾನಿಗಳು ಬಹುನಿರೀಕ್ಷೆ ಇಟ್ಟುಕೊಂಡಿದ್ದ ಆಟಗಾರರೇ ಪಂಜಾಬ್ ಬೌಲರ್ಸ್ಗಳಿಗೆ ಬೇಗ ವಿಕೆಟ್ ಒಪ್ಪಿಸಿದರು. ಆರಂಭಿಕರಾದ ಫಿಲ್ ಸಾಲ್ಟ್ 4 ಮತ್ತು ವಿರಾಟ್ ಕೊಹ್ಲಿ 1 ರನ್ಗೆ ಔಟಾಗಿ ಪೆವಿಲಿಯನ್ ಸೇರಿದರು. ಇಲ್ಲಿದಂಲೇ ತಂಡಕ್ಕೆ ದೊಡ್ಡ ಸಂಕಷ್ಟ ಎದರಾಯಿತು. ಬಳಿಕ ನಾಯಕ ರಜತ್ ಪಾಟಿದಾರ್ 23 ರನ್ಗೆ ಔಟಾದರು.
ಲಿಯಾಮ್ ಲಿವಿಂಗ್ಸ್ಟೋನ್ 4 ರನ, ಜಿತೇಶ್ ಶರ್ಮಾ2 ರನ್, ಮತ್ತು ಕೃನಾಲ್ ಪಾಂಡ್ಯ 1 ರನ್ ಗಳಿಸಿ ಔಟಾದರು. ಈ ವೇಳೆ ಟಿಮ್ ಡೇವಿಡ್ ಏಕಾಂಗಿಯಾಗಿ ಹೋರಾಟ ನಡೆಸಿ 26 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ಗಳೊಂದಿಗೆ 50 ರನ್ ಕಲೆಹಾಕಿ ತಂಡದ ಮೊತ್ತವನ್ನು 95 ರನ್ಗೆ ಮುಟ್ಟಿಸಿ ಅಜೇಯರಾಗಿ ಉಳಿದರು.
-
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications