WPL 2025: ಆರ್ಸಿಬಿಗೆ ಯುಪಿ ವಾರಿಯರ್ಸ್ ಸವಾಲು; ಆಡುವ ಬಳಗ, ಪಿಚ್ ವರದಿ
ಮಹಿಳಾ ಪ್ರೀಮಿಯರ್ ಲೀಗ್ 2025ರ ಆವೃತ್ತಿಯ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಹಾಲಿ ಚಾಂಪಿಯನ್ ಆರ್ಸಿಬಿ, ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿತ್ತು. ಇದೀಗ ತನ್ನ ನಾಲ್ಕನೇ ಪಂದ್ಯ ಆಡಲು ಸಜ್ಜಾಗಿದ್ದು ಇಂದು (ಸೋಮವಾರ, ಫೆಬ್ರವರಿ 24) ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ.
ಕಳೆದ ಪಂದ್ಯದಲ್ಲಿ ರೋಚಕ ಹೋರಾಟ ನೀಡಿದರು ಆರ್ ಸಿಬಿ ಕೊನೆಯ ಓವರ್ ನಲ್ಲಿ ಸೋಲು ಕಂಡಿತ್ತು, ಬ್ಯಾಟಿಂಗ್ ಬಲಿಷ್ಠವಾಗಿದ್ದರೂ, ಎಲ್ಲಿಸ್ ಪೆರ್ರಿ ಗಾಯದ ಭಯದಿಂದ ಬೌಲಿಂಗ್ ಮಾಡದೇ ಇರುವುದು ತಂಡಕ್ಕೆ ಹಿನ್ನಡೆಯಾಗಿದೆ. ಆಶಾ ಶೋಭನಾ, ಶ್ರೇಯಾಂಕಾ ಪಾಟೀಲ್ ಆಡದೇ ಇರುವುದು ತಂಡದ ಬೌಲಿಂಗ್ ವಿಭಾಗಕ್ಕೆ ಹೊಡೆತ ನೀಡಿದೆ.

ಇಂದು ನಡೆಯುವ ಪಂದ್ಯದಲ್ಲಿ ಆರ್ ಸಿಬಿ ಬೌಲಿಂಗ್ ವಿಭಾಗವನ್ನು ಬಲಪಡಿಸಲು ಯೋಜಿಸಬಹುದು. ಜೊಶಿತಾ ಬದಲಾಗಿ ಸ್ನೇಹ್ ರಾಣಾ ಅವರನ್ನು ಆಡಿಸುವ ಸಾಧ್ಯತೆ ಇದೆ. ಶ್ರೇಯಾಂಕಾ ಪಾಟೀಲ್ ಬದಲಾಗಿ ಸ್ನೇಹ್ ರಾಣಾ ಆರ್ ಸಿಬಿ ಸೇರಿದ್ದು ಅನುಭವ ಹೊಂದಿರುವ ಸ್ಪಿನ್ನರ್ ಆಗಿದ್ದಾರೆ. ಬ್ಯಾಟಿಂಗ್ ಮಾಡುವ ಕ್ಷಮತೆ ಇದ್ದು ತಂಡದ ಬ್ಯಾಟಿಂಗ್ಗೆ ಮತ್ತಷ್ಟು ಬಲ ಬರಲಿದೆ.
ವ್ಯಾಟ್ ಹಾಡ್ಜ್, ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ ಉತ್ತಮ ಫಾರ್ಮ್ನಲ್ಲಿದ್ದು ಸದ್ಯ ಆರ್ ಸಿಬಿ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದ್ದು, ಮೂರನೇ ಗೆಲುವಿನ ವಿಶ್ವಾಸದಲ್ಲಿದೆ.
ಆಡಿದ ಮೂರು ಪಂದ್ಯಗಳಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಸೋತಿದ್ದ ಯುಪಿ ವಾರಿಯರ್ಸ್ ಮೂರನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 33 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಚಿನೆಲೆ ಹೆನ್ರಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗೆಲುವಿನ ಹಳಿಗೆ ಮರಳಿರುವ ಯುಪಿ ವಾರಿಯರ್ಸ್ ಆರ್ ಸಿಬಿ ವಿರುದ್ಧ ಗೆದ್ದು ಇನ್ನೆರಡು ಅಂಕಗಳನ್ನು ಪಡೆಯುವ ಉತ್ಸಾಹದಲ್ಲಿದೆ.
ಸೋಮವಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಜಿಯೋ ಹಾಟ್ಸ್ಟಾರ್ ಮತ್ತು ಸ್ಟಾರ್ ಸ್ಪೋರ್ಟ್ಸ್ನಲ್ಲಿ ನೇರಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಆರ್ಸಿಬಿ: ಸ್ಮೃತಿ ಮಂಧಾನ (ನಾಯಕಿ), ಡೇನಿಯಲ್ ವ್ಯಾಟ್-ಹಾಡ್ಜ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ರಾಘ್ವಿ ಬಿಸ್ಟ್, ಕನಿಕಾ ಅಹುಜಾ, ಜಾರ್ಜಿಯಾ ವೇರಂ, ಕಿಮ್ ಗಾರ್ತ್, ಏಕ್ತಾ ಬಿಶ್ತ್, ಜೋಶಿತಾ ವಿಜೆ/ ಸ್ನೇಹ್ ರಾಣಾ, ರೇಣುಕಾ ಸಿಂಗ್ ಠಾಕೂರ್.
ಯುಪಿ ವಾರಿಯರ್ಸ್: ಕಿರಣ್ ನವಗಿರೆ, ವೃಂದಾ ದಿನೇಶ್, ದೀಪ್ತಿ ಶರ್ಮಾ (ನಾಯಕಿ), ತಹ್ಲಿಯಾ ಮೆಕ್ಗ್ರಾತ್, ಶ್ವೇತಾ ಸೆಹ್ರಾವತ್, ಗ್ರೇಸ್ ಹ್ಯಾರಿಸ್, ಚಿನೆಲ್ಲೆ ಹೆನ್ರಿ, ಸೋಫಿ ಎಕಲ್ಸ್ಟನ್, ಉಮಾ ಚೆಟ್ರಿ (ವಿಕೆಟ್ ಕೀಪರ್), ಕ್ರಾಂತಿ ಗೌಡ್, ಸೈಮಾ ಠಾಕೋರ್.
-
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications