RCB ಕಪ್ ಗೆಲುವಿನ ಆಸೆ ಜೀವಂತ: 2016 ರಲ್ಲೂ ಇಂತಹದ್ದೇ ಪರಿಸ್ಥಿತಿಯಿಂದ ಪುಟಿದೆದ್ದು ಫೈನಲ್ ಪ್ರವೇಶಿಸಿದ್ದ ಚಾಲೆಂಜರ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸಕ್ತ ಆವೃತ್ತಿಯ ಐಪಿಎಲ್ನಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಆಡಿದ ಆರು ಪಂದ್ಯಗಳಲ್ಲಿ ಐದು ಸೋಲು ಕಂಡಿರುವ ಆರ್ಸಿಬಿ, ಪ್ಲೇ ಆಫ್ ಪ್ರವೇಶಿಸುವ ಕನಸು ದೂರ ಸರಿಯುವಂತೆ ಆಗುತ್ತಿದೆ. ಆದರೆ ಇಷ್ಟಕ್ಕೆ ಅಭಿಮಾನಿಗಳು ಹೆದರುವ ಅವಶ್ಯಕತೆ ಇಲ್ಲವೇ ಇಲ್ಲ. 2016ರಲ್ಲೂ ಆರ್ಸಿಬಿ ಇಂತಹದ್ದೇ ಪರಿಸ್ಥಿತಿಯಿಂದ ಪುಟಿದೆದ್ದಿತ್ತು.
ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಆರ್ಸಿಬಿ, ಪುರುಷರ ತಂಡ ಸಹ ಇದೇ ರೀತಿ ಪ್ರದರ್ಶನ ನೀಡಬೇಕು ಎಂಬ ಆಶಯ ಹೊಂದಿತ್ತು. ಆದರೆ ಆರ್ಸಿಬಿ ತಂಡದ ಪ್ರದರ್ಶನ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಈ ಐಪಿಎಲ್ನಲ್ಲಿ ಆರ್ಸಿಬಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರೂ ಸಹ, ಫ್ಯಾನ್ಸ್ ಈ ಬಾರಿ ಕಪ್ ನಮ್ದೇ ಎನ್ನುತ್ತಲ್ಲೇ ತಿರುಗಾಡುತ್ತಿದ್ದಾರೆ.

9ನೇ ಸ್ಥಾನ
ಈ ಬಾರಿಯ ಐಪಿಎಲ್ 2024 ಆರಂಭ ಆರ್ಸಿಬಿ ತಂಡಕ್ಕೆ ಬಹುವಾಗಿ ಕಾಡುತ್ತಿದೆ. ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ತಂಡ ಸತತ ಸೋಲನ್ನು ಕಂಡಿರುವ ಆರ್ಸಿಬಿ ಮುಂದಿನ ಹಾದಿಯನ್ನು ಕಷ್ಟವಾಗಿಸಿಕೊಂಡಿದೆ. ತಂಡದಲ್ಲಿ ಸ್ಟಾರ್ ಆಟಗಾರರ ಗೊಂಚಲವೇ ಇದ್ದರೂ ಆಟಗಾರರು ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿರುವುದು ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ.
ಐದು ಪಂದ್ಯಗಳಲ್ಲಿ ತಂಡ ಸೋಲು ಕಂಡಿದ್ದು, 2 ಅಂಕಗಳೊಂದಿಗೆ, ಅಂಕ ಪಟ್ಟಿಯಲ್ಲಿ 9ನೇ ಸ್ಥಾನ ಹೊಂದಿದೆ. ಈ ಪರಿಸ್ಥಿತಿಯಲ್ಲಿ ಆರ್ಸಿಬಿ ಮುಂದಿನ ಹಾದಿಯನ್ನು ಪ್ರವೇಶಿಸುವುದು ಕಷ್ಟದಂತೆ ಕಾಣುತ್ತಿದೆ. ಆದರೆ ಅಸಾಧ್ಯವಂತೂ ಅಲ್ಲವೇ ಅಲ್ಲ. ಉಳಿದ 8 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ನಂತರ ಅವರಿಗೆ ಪ್ಲೇಆಫ್ನ ಬಾಗಿಲು ತೆರೆಯಬಹುದು.

2016ರಲ್ಲೂ ಇದೇ ಸ್ಥಿತಿ
ಐಪಿಎಲ್ 2016 ರಲ್ಲಿ, RCB ತಂಡವು ತನ್ನ ಮೊದಲ 7 ಪಂದ್ಯಗಳಲ್ಲಿ ಎರಡನ್ನು ಮಾತ್ರ ಗೆದ್ದಿತ್ತು. ಆದರೆ ಇದರ ನಂತರ ತಂಡವು ಭರ್ಜರಿಯಾಗಿ ಕಮ್ಬ್ಯಾಕ್ ಮಾಡಿತ್ತು. ಉಳಿದ 7 ಪಂದ್ಯಗಳಲ್ಲಿ 5 ಅನ್ನು ಗೆಲ್ಲುವ ಮೂಲಕ ಪ್ಲೇ ಆಫ್ಗೆ ಅರ್ಹತೆ ಪಡೆದಿತ್ತು. ಅಲ್ಲದೆ ತಂಡ ಫೈನಲ್ಗೆ ಲಗ್ಗೆ ಇಟ್ಟಿತ್ತು. ಆದರೆ ಫೈನಲ್ನಲ್ಲಿ ಆರ್ಸಿಬಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 8 ರನ್ಗಳಿಂದ ಸೋಲನುಭವಿಸಬೇಕಾಯಿತು.
ಕೊಹ್ಲಿ ಪ್ರದರ್ಶನ
ಐಪಿಎಲ್ 2016ರಲ್ಲಿ ವಿರಾಟ್ ಕೊಹ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಐಪಿಎಲ್ 2016ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಕೊಹ್ಲಿ ಅವರಿಗೆ ಪಾತ್ರವಾಗಿದ್ದರು. ಆ ಋತುವಿನಲ್ಲಿ ಅವರು 973 ರನ್ ಗಳಿಸಿದ್ದರು. ಆ ಋತುವಿನಲ್ಲಿ ಅವರು ನಾಲ್ಕು ಶತಕಗಳನ್ನು ಗಳಿಸಿದ್ದು ವಿಶೇಷವಾಗಿತ್ತು.
ಈ ಬಾರಿಯೂ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅಲ್ಲದೆ ಆರೆಂಜ್ ಕ್ಯಾಪ್ನ್ನು ಸಹ ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಈ ಬಾರಿ ವಿರಾಟ್ ಕೊಹ್ಲಿ ಫಾರ್ಮ್ ಎದುರಾಳಿಗಳಿಗೆ ನಡುಕ ಹುಟ್ಟಿಸಿದ್ದಂತೂ ಸುಳ್ಳಲ್ಲವೇ ಅಲ್ಲ.
-
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
ವಾಂಖೆಡೆಯಲ್ಲಿ ಮುಂಬೈ ಇಂಡಿಯನ್ಸ್ ಬೌಲರ್ಗಳಿಗೆ ಬೆವರಿಳಿಸಿದ ಆರ್ಸಿಬಿ ಫಿಲ್ ಸಾಲ್ಟ್ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
ಆರ್ಸಿಬಿ ಜಯದ ಕನಸಿಗೆ ತಣ್ಣೀರೆರಚಿದ ವೈಭವ್ ಸೂರ್ಯವಂಶಿ; ಆರ್ಆರ್ ಪಾಲಿಗೆ ಹೀರೋ ಆದ 15 ವರ್ಷದ ಬಾಲಕ -
ಒಂದೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಒಲಿದ ಮೂರು ಮರೆಯಲಾಗದ ಗೌರವಗಳು; ಕಿಂಗ್ ಕೊಹ್ಲಿ ಸಂದೇಶ ಭಾರೀ ವೈರಲ್ -
Vaibhav Suryavanshi: ನನ್ನ ಕನಸು ಕೊನೆಗೂ ನನಸಾಯಿತು; ವಿರಾಟ್ ಕೊಹ್ಲಿಗೆ ವಿಶೇಷ ಧನ್ಯವಾದ ಹೇಳಿದ ವೈಭವ್ ಸೂರ್ಯವಂಶಿ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್












Click it and Unblock the Notifications