RCB: ಈ ಬಾರಿ ಆರ್ಸಿಬಿ ಫೈನಲ್ಗೆ ಹೋಗುವುದು ಖಚಿತ; ಯಾಕೆ ಗೊತ್ತಾ?
ಐಪಿಎಲ್ 2024ರಲ್ಲಿ ಪವಾಡವೇ ನಡೆದುಹೋಗಿದೆ. ಮೇ 3ರಂದು ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದ ಆರ್ಸಿಬಿ 18ನೇ ತಾರೀಕು ಪ್ಲೇಆಫ್ಗೆ ಅರ್ಹತೆ ಪಡೆಯುತ್ತದೆ ಎಂದು ಯಾರೂ ಕೂಡ ಊಹೆ ಮಾಡಿರಲಿಲ್ಲ. ಆದರೆ ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಸ್ಕೆ ವಿರುದ್ಧ 27 ರನ್ಗಳ ಭರ್ಜರಿ ಗೆಲುವು ಸಾಧಿಸಿದ ಆರ್ಸಿಬಿ ಹೊಸ ಇತಿಹಾಸ ಬರೆಯಿತು.
ಮೊದಲ 8 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿದ್ದ ಆರ್ಸಿಬಿ ಬಳಿಕ ಸತತ ಆರು ಪಂದ್ಯಗಳನ್ನು ಗೆದ್ದು 14 ಅಂಕಗಳೊಂದಿಗೆ ಪ್ಲೇ ಆಫ್ಗೆ ಅರ್ಹತೆ ಪಡೆದುಕೊಂಡಿದೆ.

ಆರ್ಸಿಬಿ ಈ ರೀತಿ ಮಾಡಿರುವುದು ಇದೇ ಮೊದಲನೇಲ್ಲ. ಆರ್ಸಿಬಿ ಇದುವರೆಗೆ ಮೂರು ಬಾರಿ ಫೈನಲ್ ಪ್ರವೇಶಿಸಿದೆ ಅಚ್ಚರಿಯ ಸಂಗತಿ ಎಂದರೆ ಆಗಲೂ ಕೂಡ ಸತತ ಐದು ಪಂದ್ಯಗಳನ್ನು ಗೆದ್ದಿತ್ತು.
ಫೈನಲ್ಗೆ ಹೋಗುವುದು ಪಕ್ಕಾ!
2009ರಲ್ಲಿ ಆರ್ಸಿಬಿ ಟೂರ್ನಿಯಿಂದಲೇ ಹೊರಗುಳಿಯುವ ಹಂತದಲ್ಲಿತ್ತು ಆದರೆ ಅಲ್ಲಿಂದ ಸತತವಾಗಿ ಐದು ಪಂದ್ಯಗಳನ್ನು ಗೆದ್ದು ಫೈನಲ್ ತಲುಪಿತ್ತು. 2011ರ ಆವೃತ್ತಿಯಲ್ಲಿ ಕೂಡ ಮೊದಲ ನಾಲ್ಕು ಪಂದ್ಯಗಳನ್ನು ಒಂದು ಗೆದ್ದಿತ್ತು, ಆದರೆ ಬಳಿಕ ಸತತವಾಗಿ 7 ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶ ಪಡೆದಿದ್ದಲ್ಲದೆ ಫೈನಲ್ ಕೂಡ ಪ್ರವೇಶಿಸಿತ್ತು.
2016ರ ಆವೃತ್ತಿಯಲ್ಲಿ ಕೂಡ ಮೊದಲ 6 ಪಂದ್ಯಗಳಲ್ಲಿ ಕೇವಲ 2 ಪಂದ್ಯ ಗೆದ್ದಿದ್ದ ಆರ್ಸಿಬಿ ಕೊನೆಯ 4 ಲೀಗ್ ಹಂತದ ಪಂದ್ಯಗಳನ್ನು ಸತತವಾಗಿ ಗೆದ್ದಿತ್ತು, ಬಳಿಕ ಪ್ಲೇ ಆಫ್ನಲ್ಲಿ ಕೂಡ ಸತತ ಎರಡು ಪಂದ್ಯಗಳನ್ನು ಗೆದ್ದು ಫೈನಲ್ಗೆ ಅರ್ಹತೆ ಪಡೆದುಕೊಂಡಿತ್ತು.
ಮೂರು ಬಾರಿ ಫೈನಲ್ ಪ್ರವೇಶಿಸಿದರೂ ಒಮ್ಮೆಯೂ ಕಪ್ ಗೆಲ್ಲದೇ ಇರುವುದು ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿದೆ. ಆದರೂ ಅಭಿಮಾನಿಗಳು ಆರ್ಸಿಬಿ ಪರವಾಗಿ ನಿಂತಿದ್ದಾರೆ. ಈ ಬಾರಿ ಬೂದಿಯಿಂದ ಎದ್ದು ಬಂದಿರುವ ಆರ್ಸಿಬಿ ಕಪ್ ಗೆಲ್ಲುವ ಭರವಸೆ ಕೊಟ್ಟಿದೆ.
ಸತತ ಆರು ಪಂದ್ಯಗಳನ್ನು ಗೆದ್ದಿರುವ ಆರ್ಸಿಬಿ ತಂಡಕ್ಕೆ ಐತಿಹಾಸಿಕ ಸಾಧನೆ ಮಾಡಲು ಇನ್ನು ಮೂರು ಪಂದ್ಯ ಗೆಲ್ಲಬೇಕಿದೆ. ಗೆಲ್ಲಲಿ ಎನ್ನುವುದು ಕೋಟ್ಯಂತರ ಅಭಿಮಾನಿಗಳ ಹಾರೈಕೆಯೂ ಆಗಿದೆ.
ಮೇ 22ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದ್ದು, ಆ ಪಂದ್ಯವನ್ನು ಗೆದ್ದರೆ, ಚೆನ್ನೈನಲ್ಲಿ ಕ್ವಾಲಿಫೈಯರ್ 2 ಪಂದ್ಯದಲ್ಲಿ ಆಡಲಿದೆ.
-
ಸುಮ್ನೆ ಬಾಲ್ ಕೊಡೋ ಮಾರಾಯ.. ನಾ ಕೊಡಕಿಲ್ಲ ಏನ್ ಮಾಡ್ತೀರಾ? ಟಿಮ್ ಡೇವಿಡ್-ಅಂಪೈರ್ ಫನ್ನಿ ವಿಡಿಯೋ ಭಾರೀ ವೈರಲ್ -
ವಾಂಖೆಡೆಯಲ್ಲಿ ಮುಂಬೈ ಇಂಡಿಯನ್ಸ್ ಬೌಲರ್ಗಳಿಗೆ ಬೆವರಿಳಿಸಿದ ಆರ್ಸಿಬಿ ಫಿಲ್ ಸಾಲ್ಟ್ -
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications