ಪಾಕಿಸ್ತಾನದಿಂದ ದಿನಕ್ಕೊಂದು ನೆಪ: ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ ತಡವಾಗ್ತಿರೋದ್ಯಾಕೆ?
ಏಷ್ಯಾಕಪ್ ಪಂದ್ಯಾವಳಿ ಆಯೋಜನೆಗಾಗಿ ದಿನಕ್ಕೊಂದು ಕ್ಯಾತೆ ತೆಗೆಯುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗ ಭಾರತದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕೂಡ ಅಡ್ಡಗಾಲು ಹಾಕುತ್ತಿದೆ. ಕಳೆದ ವಾರವೇ ಏಕದಿನ ವಿಶ್ವಕಪ್ ವೇಳಾಪಟ್ಟಿ ನಡೆಯಬೇಕಿತ್ತಾದರೂ, ಪಾಕಿಸ್ತಾನದ ಕೊಂಕಿನಿಂದ ಬಿಡುಗಡೆ ಮುಂದೆ ಹೋಗಿದೆ.
ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ಪಂದ್ಯಾವಳಿ ನಡೆಯಲಿದ್ದು, ಬಿಸಿಸಿಐ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಆದರೆ ಬಿಸಿಸಿಐ ಕಳುಹಿಸಿದ ಕರಡು ವೇಳಾಪಟ್ಟಿಗೆ ಪಾಕಿಸ್ತಾನ ವಿರೋಧ ವ್ಯಕ್ತಪಡಿಸಿದೆ, ಪಾಕಿಸ್ತಾನದ ಎರಡು ಪಂದ್ಯಗಳ ಸ್ಥಳಗಳನ್ನು ಬದಲಾವಣೆ ಮಾಡಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒತ್ತಾಯಿಸಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮನವಿ ಮಾಡಿರುವುದಕ್ಕೆ ಬಿಸಿಸಿಐ ವಿರೋಧ ವ್ಯಕ್ತಪಡಿಸಿದೆ. ಅಲ್ಲದೆ, ಪಾಕಿಸ್ತಾನದ ಧೋರಣೆ ವಿರುದ್ಧ ಅಸಮಾಧಾನ ಕೂಡ ವ್ಯಕ್ತಪಡಿಸಿದೆ. ದಿನಕ್ಕೊಂದು ನೆಪ ಹೇಳುತ್ತಾ, ವೇಳಾಪಟ್ಟಿ ಬಿಡುಗಡೆಗೂ ಅಡ್ಡಗಾಲು ಹಾಕಿದೆ.
ಪಾಕಿಸ್ತಾನದ ಸಮಸ್ಯೆ ಏನು?
ಬಿಸಿಸಿಐ ಹಿರಿಯ ಅಧಿಕಾರಿಗಳು ಹೇಳುವ ಪ್ರಕಾರ, "ಪಾಕಿಸ್ತಾನ ಕ್ರಿಕೆಟ್ ಮಂಡಳಿ ಏನು ಬೇಕಾದರೂ ಹೇಳಬಹುದು. ಆದರೆ ವೇಳಾಪಟ್ಟಿ ವಿಳಂಬವಾಗಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಾರಣ. ಪಾಕಿಸ್ತಾನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಲು ಸಿದ್ದರಿಲ್ಲ, ಈಗ ಅವರು ಚೆನ್ನೈನಲ್ಲಿ ಕೂಡ ಆಡಲು ಸಿದ್ದವಾಗಿಲ್ಲ. ಅವರಿಗೆ ಅಭದ್ರತೆಯ ಭಯ ಕಾಡುತ್ತಿದೆ" ಎಂದು ಹೇಳಿದ್ದಾರೆ.
ಕರಡು ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 15 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ಪ್ರೊಫೈಲ್ ಪಂದ್ಯ ನಡೆಯಲಿದೆ ಎಂದು ವರದಿಯಾಗಿದೆ. ಆದರೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಾನು ಪಂದ್ಯವನ್ನಾಡುವುದಿಲ್ಲ ಎಂದು ಹೇಳಿದೆ. ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಸೇರಿದಂತೆ ಹಲವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಶಾಹಿದ್ ಅಫ್ರಿದಿಯನ್ನು ಕೆರಳಿಸಿತ್ತು, ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಡದಿರುವ ನಿರ್ಧಾರಕ್ಕೆ ಪಿಸಿಬಿಯನ್ನು ತರಾಟೆಗೆ ತೆಗೆದುಕೊಂಡರು. ಅಹಮದಾಬಾದ್ ಪಿಚ್ಗಳು ಪಾಕಿಸ್ತಾನದ ಆಟಗಾರರ ಮೇಲೆ ಯಾವುದೇ ಭೂತಗಳನ್ನು ಹೊಂದಿಲ್ಲ ಎಂದು ಹರಿಹಾಯ್ದರು.
ಚೆನ್ನೈನಲ್ಲಿ ಆಡಲು ಹಿಂಜರಿಕೆ ಏಕೆ?
ಚೆನ್ನೈನಲ್ಲಿ ಸ್ಪಿನ್ ಸ್ನೇಹಿ ಪಿಚ್ ಹೊಂದಿದ್ದು, ಇಲ್ಲಿ ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನ ಪಂದ್ಯ ನಡೆಯಲಿದೆ. ಚೆನ್ನೈ ಸ್ಪಿನ್ ಸ್ನೇಹಿ ಪಿಚ್ ಆಗಿರುವುದರಿಂದ ಇಲ್ಲಿ ಅಫ್ಘಾನಿಸ್ತಾನದ ವಿರುದ್ಧ ಪಂದ್ಯವನ್ನಾಡಲ್ಲ ಎಂದು ಪಾಕಿಸ್ತಾನ ಹೊಸ ತಗಾದೆ ತೆಗೆದಿದೆ. ಅಫ್ಘಾನಿಸ್ತಾನದ ವಿರುದ್ಧದ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದೆ.
ಏಕದಿನ ವಿಶ್ವಕಪ್ನ ಅಧಿಕೃತ ವೇಳಾಪಟ್ಟಿಯನ್ನು ಮುಂಬರುವ ವಾರದಲ್ಲಿ ಐಸಿಸಿ ಪ್ರಕಟಿಸಬಹುದು. ಪಂದ್ಯಾವಳಿಯು ಅಕ್ಟೋಬರ್ 5 ರಿಂದ ಪ್ರಾರಂಭವಾಗುವ ಸಾಧ್ಯತೆ ಇದೆ, ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಆತಿಥೇಯ ಭಾರತವು ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ಏಕದಿನ ವಿಶ್ವಕಪ್ನ ಸೆಮಿಫೈನಲ್ ಪಂದ್ಯಗಳು ನವೆಂಬರ್ 15 ಮತ್ತು 16 ರಂದು ನಡೆಯಲಿದ್ದು, ಫೈನಲ್ ನವೆಂಬರ್ 19ರಂದು ನಡೆಯಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications