Ricky Ponting: ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ರಿಕಿ ಪಾಂಟಿಂಗ್ಗೆ ಗೇಟ್ಪಾಸ್
2025ರ ಐಪಿಎಲ್ಗೆ ಮುನ್ನ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲು ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ. ಬದಲಾವಣೆಯ ಮೊದಲ ಹಂತದಲ್ಲಿ ತಂಡದ ಮುಖ್ಯ ಕೋಚ್ ಆಗಿದ್ದ ರಿಕಿ ಪಾಂಟಿಂಗ್ ಅವರಿಗೆ ಗೇಟ್ ಪಾಸ್ ನೀಡಲಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಕ್ರಿಕೆಟ್ ನಿರ್ದೇಶಕ ಸೌರವ್ ಗಂಗೂಲಿ ರಿಕಿ ಪಾಂಟಿಂಗ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಈ ನಿರ್ಧಾರ ಬಂದಿದೆ. ರಿಕಿ ಪಾಂಟಿಂಗ್ ಸತತ ಏಳು ವರ್ಷಗಳು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೋಚ್ ಆಗಿದ್ದರು. ಅವರ ಅವಧಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ.

ಕಳೆದ ಮೂರು ಐಪಿಎಲ್ ಸೀಸನ್ಗಳಲ್ಲಿ ತಂಡವು ಪ್ಲೇಆಫ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ಫಲಿತಾಂಶಗಳ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟ್ ನಿರ್ದೇಶಕರಾದ ಗಂಗೂಲಿಯವರು ಬೇಸರ ವ್ಯಕ್ತಪಡಿಸಿದ್ದರು. ಬಂಗಾಳಿ ಪತ್ರಿಕೆ ಆಜ್ಕಲ್ಗೆ ನೀಡಿದ ಸಂದರ್ಶನದಲ್ಲಿ, ಗಂಗೂಲಿ ಮುಖ್ಯ ಕೋಚ್ ಪಾತ್ರವನ್ನು ಸ್ವತಃ ವಹಿಸಿಕೊಳ್ಳುವ ಮತ್ತು ಭಾರತೀಯ ಕೋಚಿಂಗ್ ಸಿಬ್ಬಂದಿಯನ್ನು ನೇಮಿಸುವ ಬಗ್ಗೆ ಗಮನ ಹರಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು.
ಧನ್ಯವಾದ ತಿಳಿಸಿದ ಡೆಲ್ಲಿ ಕ್ಯಾಪಿಟಲ್ಸ್
ಡೆಲ್ಲಿ ಕ್ಯಾಪಿಟಲ್ಸ್ನ ಸಾಮಾಜಿಕ ಮಾಧ್ಯಮಗಳಲ್ಲಿ ಇಷ್ಟು ವರ್ಷ ಫ್ರಾಂಚೈಸಿಗೆ ನೀಡಿದ ಕೊಡುಗೆಗಳಿಗಾಗಿ ಪಾಂಟಿಂಗ್ಗೆ ಧನ್ಯವಾದಗಳನ್ನು ತಿಳಿಸಲಾಗಿದೆ. ಹೊಸ ಮುಖ್ಯ ಕೋಚ್ ಯಾರಾಗುತ್ತಾರೆ ಎನ್ನುವ ಬಗ್ಗೆ ಪ್ರಶ್ನೆ ಇದ್ದು, ಗಂಗೂಲಿ ಅವರೇ ಮುಖ್ಯ ಕೋಚ್ ಆಗುವ ಸಾಧ್ಯತೆ ಇದೆ.
ಡೆಲ್ಲಿ ಕ್ಯಾಪಿಟಲ್ಸ್ ಕೋಚಿಂಗ್ ತಂಡದಲ್ಲಿ ಕ್ರಿಕೆಟ್ ನಿರ್ದೇಶಕ ಸೌರವ್ ಗಂಗೂಲಿ, ಸಹಾಯಕ ಕೋಚ್ ಪ್ರವೀಣ್ ಆಮ್ರೆ, ಬೌಲಿಂಗ್ ಕೋಚ್ ಜೇಮ್ಸ್ ಹೋಪ್ಸ್ ಮತ್ತು ಫೀಲ್ಡಿಂಗ್ ಕೋಚ್ ಬಿಜು ಜಾರ್ಜ್ ಇದ್ದಾರೆ.
After 7 seasons, Delhi Capitals has decided to part ways with Ricky Ponting.
— Delhi Capitals (@DelhiCapitals) July 13, 2024
It's been a great journey, Coach! Thank you for everything 💙❤️ pic.twitter.com/dnIE5QY6ac
'ನೀವು ನಮ್ಮ ಮುಖ್ಯ ತರಬೇತುದಾರರಾಗಿ ಮುಂದುವರೆಯುವುದಿಲ್ಲ ಎನ್ನುವುದನ್ನು ಪದಗಳಲ್ಲಿ ಹೇಳುವುದು ನಮಗೆ ನಂಬಲಾಗದಷ್ಟು ಕಷ್ಟಕರವಾಗಿದೆ. ಕಾಳಜಿ, ಬದ್ಧತೆ, ವರ್ತನೆ ಮತ್ತು ಪ್ರಯತ್ನ ಇದು ಪ್ರತಿಯೊಂದು ಸಮಯದಲ್ಲಿ ನೀವು ನಮಗೆ ಹೇಳಿದ ನಾಲ್ಕು ವಿಷಯಗಳು ಎಂದು ಧನ್ಯವಾದ ತಿಳಿಸಿದೆ.
ತಂಡದಲ್ಲಿ ಭಾರಿ ಬದಲಾವಣೆ?
2025ರ ಐಪಿಎಲ್ ಹರಾಜಿಗೆ ಮುನ್ನ ಮೆಗಾ ಹರಾಜು ನಡೆಯಲಿದ್ದು, ತಂಡದಲ್ಲಿ ಭಾರಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ರಿಷಬ್ ಪಂತ್ ತಂಡದಲ್ಲಿ ನಾಯಕರಾಗಿ ಮುಂದುವರೆಯಲಿದ್ದು, ಉಳಿದಂತೆ ಪ್ರಮುಖ ಆಟಗಾರರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲು ಯೋಜನೆ ರೂಪಿಸಲಿದೆ.
-
Tejasvi Surya: ಕೆಎಸ್ಸಿಎನಿಂದ ಐಪಿಎಲ್ ಫ್ರೀ ಟಿಕೆಟ್ ಚರ್ಚೆ: ಕಾಂಗ್ರೆಸ್ ಶಾಸಕರಿಗೆ ಸಂಸದ ತೇಜಸ್ವಿ ಸೂರ್ಯ ಕ್ಲಾಸ್ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications