Rohit Sharma: ಭಾರತ ಕ್ರಿಕೆಟ್ ತಂಡದ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ; ಮುಂದಿನ ನಾಯಕ ಯಾರು?
Rohit Sharma Retirement: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಈಗಾಗಲೇ ಅಂತಾರಾಷ್ಟ್ರೀಯ ಟಿ-20 ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದರು. ಇದೀಗ ಇಂದು (ಮೇ 7) ಟೆಸ್ಟ್ ಮಾದರಿಗೂ ವಿದಾಯ ಹೇಳಿದ್ದಾರೆ.
ಇದೀಗ ಮುಂಬೈ ತಂಡದ ಪರ ಐಪಿಎಲ್ ಆಡುತ್ತಿರುವಾಗಲೇ 38 ವರ್ಷದ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ರೋಹಿತ್ ಶರ್ಮಾ ಅವರು ತಮ್ಮ ಟ್ವಿಟರ್ ಖಾಯೆಯಲ್ಲಿ ಬರೆದುಕೊಂಡಿದ್ದಾರೆ. ಈಗಾಗಲೇ ಟಿ-20 ಕ್ರಿಕೆಟ್ಗೆ ನೀವೃತ್ತಿ ಘೋಷಿಸಿದ್ದು, 50 ಓವರ್ಗಳ ಕ್ರಿಕೆಟ್ನಲ್ಲಿ ಮಾತ್ರ ಆಡಲಿದ್ದಾರೆ.

ಟೆಸ್ಟ್ನಲ್ಲಿ ರೋಹಿತ್ ಶರ್ಮಾ ಸಾಧನೆ: 67 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಅವರು, 18 ಅರ್ಧ ಶತಕ, 12 ಶತಕಗಳನ್ನು ಸಿಡಿಸಿದ್ದಾರೆ. ಒಟ್ಟು 4,301 ರನ್ಗಳನ್ನು ಕಲೆಹಾಕಿದ್ದಾರೆ. ಚಾಂಪಿಯನ್ ಟ್ರೋಫಿ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ-20 ಕ್ರಕಿಕೆಟ್ಗೆ ವಿದಾಯ ಹೇಳಿದ್ದರು. ಇದೀಗ ಟೆಸ್ಟ್ಗೂ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಇದೀಗ ಟೆಸ್ಟ್ ಕ್ರಿಕೆಟ್ಗೆ ರೋಹಿತ್ ನಿವೃತ್ತಿ ಬಳಿಕ ಟೀಂ ಇಂಡಿಯಾದ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಸರದಿಯಲ್ಲಿ ಬೂಮ್ರಾ, ಕೆ.ಎಲ್. ರಾಹುಲ್, ಶುಭ್ಮನ್ ಗಿಲ್ ಮತ್ತು ರಿಷಬ್ ಪಂತ್ ಹೆಸರುಗಳು ಮುನ್ನಲೆಯಲ್ಲಿವೆ.
ಬಿಸಿಸಿಐ ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಿದೆ ಎನ್ನುವ ಸುಳಿವು ಸಿಕ್ಕ ಬೆನ್ನೆಲ್ಲೆ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ, ಐಪಿಎಲ್ ನಡೆಯುವಾಗಲೇ ಹೀಗೆ ದಿಢೀರ್ ಈ ನಿರ್ಧಾರ ತೆಗೆದುಕೊಂಡಿರುವುದು ಅಭಿಮಾನಿಗಳಿಗೆ ಶಾಕ್ ಆಗಿದೆ.
ಇನ್ನು ಮುಂದಿನ ತಿಂಗಳು ಅದರೆ ಜೂನ್ನಲ್ಲಿ ಪ್ರಾರಂಭ ಆಗಲಿರುವ ಇಂಗ್ಲೆಂಡ್ ವಿರುದ್ಧದ ಮುಂಬರುವ 5 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಹೊಸ ನಾಯಕ ಯಾರಾಗಲಿದ್ದಾರೆ ಎನ್ನುವ ಚರ್ಚೆಗಳು ನಡೆಯುತ್ತಿವೆ. ಈ ನಡುವೆಯೇ ಜಸ್ಪ್ರಿತ್ ಬುಮ್ರಾ, ಕೆ.ಎಲ್. ರಾಹುಲ್, ಶುಭಮನ್ ಗಿಲ್ ಹಾಗೂ ರಿಷಭ್ ಪಂತ್ ಹೆಸರುಗಳು ಜೋರಾಗಿ ಕೇಳಿಬರುತ್ತಿವೆ. ಈ ಪೈಕಿ ಶುಭ್ಮನ್ ಗಿಲ್ ಹೇಸರು ಮುಂಚೂಣಿಯಲಿದ್ದು, ಅವರೇ ಟೆಸ್ಟ್ ಕ್ರಿಕೆಟ್ಗೆ ನಾಯಕರಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications