Rohit Sharma: ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಕಿಡಿಕಾರಿದ ರೋಹಿತ್ ಶರ್ಮಾ
ಐಪಿಎಲ್ 2024ರ ಆವೃತ್ತಿಯಲ್ಲಿ ಸಾಕಷ್ಟು ಸುದ್ದಿ ಮಾಡಿರುವ ತಂಡ ಮುಂಬೈ ಇಂಡಿಯನ್ಸ್, ಅದು ಆಟಕ್ಕಾಗಿ ಅಲ್ಲ, ಬದಲಾಗಿ ತಂಡದಲ್ಲಿ ನಡೆದ ಘಟನೆಗಳಿಂದ. ಮುಂಬೈ ಇಂಡಿಯನ್ಸ್ ತಂಡಕ್ಕಾಗಿ ಆಡುವುದು ಇದೇ ಕೊನೆ ಎನ್ನುವ ರೋಹಿತ್ ಶರ್ಮಾ ಅವರ ವಿಡಿಯೋ ವೈರಲ್ ಆಗಿತ್ತು. ಇದು ಈಗ ರೋಹಿತ್ ಶರ್ಮಾ ಅವರ ಅಸಮಾಧಾನಕ್ಕೆ ಕಾರಣವಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ತಮ್ಮ ಖಾಸಗಿತನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ರೆಕಾರ್ಡ್ ಮಾಡದಂತೆ ಮನವಿ ಮಾಡಿದರೂ, ಸ್ಟಾರ್ ಸ್ಪೋರ್ಟ್ಸ್ ತನ್ನ ವೈಯಕ್ತಿಕ ಚಾಟ್ಗಳ ಆಡಿಯೊ ಮತ್ತು ತುಣುಕನ್ನು ತಂಡದ ಸಹ ಆಟಗಾರರು ಮತ್ತು ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳುವುದನ್ನು ಮುಂದುವರೆಸಿದೆ ಎಂದು ರೋಹಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆಚ್ಚುವರಿ ವೀಕ್ಷಣೆ ಪಡೆಯಲು ಕ್ರಿಕೆಟಿಗರ ಗೌಪ್ಯತೆಗೆ ಅಡ್ಡಿಪಡಿಸುವುದನ್ನು ಮುಂದುವರೆಸದಂತೆ ಸಾಮಾನ್ಯ ಜ್ಞಾನವನ್ನು ಉಪಯೋಗಿಸಿ ಎಂದು ರೋಹಿತ್ ಶರ್ಮಾ ಮಾಧ್ಯಮಕ್ಕೆ ಆಗ್ರಹಿಸಿದ್ದಾರೆ.
ಅಸಮಾಧಾನ ವ್ಯಕ್ತಪಡಿಸಿದ ಹಿಟ್ಮ್ಯಾನ್
ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ ಪೋಸ್ಟ್ ಹಂಚಿಕೊಂಡ ರೋಹಿತ್ ಸ್ಟಾರ್ ಸ್ಪೋರ್ಟ್ಸ್ ಅನ್ನು ಟೀಕಿಸಿದರು: "ಕ್ರಿಕೆಟಿಗರ ಜೀವನದಲ್ಲಿ ಗೌಪ್ಯತೆ ಇಲ್ಲದಂತಾಗಿದೆ. ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ಗೌಪ್ಯವಾಗಿ ನಡೆಸುವ ಪ್ರತಿಯೊಂದು ಹೆಜ್ಜೆ ಮತ್ತು ಸಂಭಾಷಣೆಯನ್ನು ಕ್ಯಾಮೆರಾಗಳು ರೆಕಾರ್ಡ್ ಮಾಡುತ್ತಿವೆ." ಎಂದು ಹೇಳಿದ್ದಾರೆ.
ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ ಖಾಸಗಿಯಾಗಿ ನಡೆಸುತ್ತಿರುವ ಪ್ರತಿಯೊಂದು ಹೆಜ್ಜೆ ಮತ್ತು ಸಂಭಾಷಣೆಯನ್ನು ರೆಕಾರ್ಡ್ ಮಾಡುತ್ತಿವೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ನನ್ನ ಸಂಭಾಷಣೆಯನ್ನು ರೆಕಾರ್ಡ್ ಮಾಡದಂತೆ ಸ್ಟಾರ್ ಸ್ಪೋರ್ಟ್ಸ್ ಕೇಳಿಕೊಂಡರೂ, ರೆಕಾರ್ಡ್ ಮಾಡುವುದಲ್ಲದೆ ಪ್ರಸಾರ ಕೂಡ ಮಾಡಲಾಗುತ್ತಿದೆ.
ಹೆಚ್ಚಿನ ವೀಕ್ಷಣೆಗಳನ್ನು ಮತ್ತು ಕ್ಲಿಕ್ಗಳನ್ನು ಪಡೆಯಲು ಈ ರೀತಿ ಮಾಡುವುದು ಒಂದು ದಿನ ಅಭಿಮಾನಿಗಳು, ಕ್ರಿಕೆಟಿಗರು ಮತ್ತು ಕ್ರಿಕೆಟ್ ನಡುವಿನ ನಂಬಿಕೆಯನ್ನು ಮುರಿಯುತ್ತದೆ ಎಂದು ಹೇಳಿದ್ದಾರೆ.
ಕೆಕೆಆರ್ ಪಂದ್ಯದ ವೇಳೆ ವಿಡಿಯೋ ವೈರಲ್
ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರೊಂದಿಗಿನ ಸಂಭಾಷಣೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ರೋಹಿತ್ ಅವರು ಅಸಮಾಧಾನ ವ್ಯಕ್ತವಾಗಿದೆ.
ಕೆಲವು ದಿನಗಳ ಹಿಂದೆ, ರೋಹಿತ್ ಶರ್ಮಾ ಭಾರತ ತಂಡದ ಸಹ ಆಟಗಾರ ಧವಲ್ ಕುಲಕರ್ಣಿ ಅವರೊಂದಿಗೆ ಸಂಭಾಷಣೆಯನ್ನು ರೆಕಾರ್ಡ್ ಮಾಡುವಾಗ ಆಡಿಯೊವನ್ನು ನಿಷ್ಕ್ರಿಯಗೊಳಿಸಲು ಅಧಿಕೃತ ಪ್ರಸಾರಕರ ಕ್ಯಾಮರಾಮನ್ಗೆ ಮನವಿ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
"ಸಹೋದರ ದಯವಿಟ್ಟು ಆಡಿಯೋವನ್ನು ಬಂದ್ ಮಾಡಿ, ಒಂದು ಆಡಿಯೋದಿಂದ ನನಗೆ ಸಮಸ್ಯೆ ಎದುರಾಗಿದೆ" ಎಂದು ರೋಹಿತ್ ಸ್ಟಾರ್ ಸ್ಪೋರ್ಟ್ಸ್ ರೆಕಾರ್ಡ್ ಮಾಡಿದ ಕ್ಲಿಪ್ನಲ್ಲಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications