ವಿರಾಟ್ ಕೊಹ್ಲಿಯನ್ನು ಗುರಾಯಿಸಿದ ಬಾಂಗ್ಲಾದೇಶ ಆಟಗಾರನಿಗೆ ರೋಹಿತ್ ಶರ್ಮಾ ಮಾಡಿದ್ದೇನು?
ಕ್ರಿಕೆಟ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಸಾಂಪ್ರದಾಯಿಕ ಎದುರಾಳಿಗಳಾಗಿವೆ. ಬಾಂಗ್ಲಾದೇಶ ಕೂಡ ಹಲವು ಬಾರಿ ಭಾರತೀಯ ಆಟಗಾರರನ್ನು ಕೆಣಕಿ ಮೈದಾನದಲ್ಲೇ ಅದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ.
ಆ್ಯಂಟಿಗುವಾದಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಸೂಪರ್ 8 ಪಂದ್ಯದಲ್ಲಿ ಶನಿವಾರ ಭಾರತ ಬಾಂಗ್ಲಾದೇಶದ ವಿರುದ್ಧ 50 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ವಿಶ್ವಕಪ್ನಲ್ಲಿ ಸೈಲೆಂಟ್ ಆಗಿದ್ದ ವಿರಾಟ್ ಕೊಹ್ಲಿ ಬಾಂಗ್ಲಾದೇಶದ ವಿರುದ್ಧ ಅಬ್ಬರಿಸಿದರು.

28 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್ ನೆರವಿನಿಂದ 37 ರನ್ ಗಳಿಸಿದರು. ಬಾಂಗ್ಲಾದೇಶದ ತಂಜಿಮ್ ಹಸನ್ ಸಾಕಿಬ್ ಕೊಹ್ಲಿಯನ್ನು ಬೌಲ್ಡ್ ಮಾಡುವಲ್ಲಿ ಯಶಸ್ವಿಯಾದರು. ಕೊಹ್ಲಿಯನ್ನು ಔಟ್ ಮಾಡಿದ ಬಳಿಕ ತಂಜಿಮ್ ಹಸನ್ ಕೊಹ್ಲಿಯನ್ನು ಗುರಾಯಿಸಿದರು. ಕೊಹ್ಲಿ ವಿಕೆಟ್ ಪಡೆದ ಬಳಿಕ ಅವರು ಅತಿರೇಕದಿಂದ ಸಂಭ್ರಮಿಸಿದರು.
ತಂಜಿಮ್ ಹಸನ್ ಅವರು ಗುರಾಯಿಸಿದರೂ ವಿರಾಟ್ ಕೊಹ್ಲಿ ಯಾವುದೇ ಪ್ರತಿಕ್ರಿಯೆ ಕೊಡದೆ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಕೊಹ್ಲಿಯನ್ನು ಗುರಾಯಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು, ಕೊಹ್ಲಿ ಅಭಿಮಾನಿಗಳು ಬಾಂಗ್ಲಾದೇಶ ಆಟಗಾರನ ವಿರುದ್ಧ ರೊಚ್ಚಿಗೆದ್ದಿದ್ದರು.
ಸಾಮಾನ್ಯವಾಗಿ ಕೊಹ್ಲಿಯನ್ನು ಯಾರಾದರೂ ಕೆಣಕಿದಿರೆ, ಮೈದಾನದಲ್ಲೇ ಅದಕ್ಕೆ ಉತ್ತರ ಸಿಗುತ್ತದೆ. ಆದರೆ ಈ ಬಾರಿ ಕೊಹ್ಲಿಯ ಸಾಲವನ್ನು ರೋಹಿತ್ ಶರ್ಮಾ ವಾಪಸ್ ಕೊಟ್ಟಿದ್ದು ವಿಶೇಷ.
The Rohit Sharma 👑 celebration 🥶#rohitsharma #t20cw24 #IndvsBan #INDvsBAN #indvsban #cricketlovers#IndianCricketTeam pic.twitter.com/wwZSOnnSaA
— Devoteeofsharma45 (@devoteofrohit45) June 22, 2024
ಉತ್ತರ ಕೊಟ್ಟ ರೋಹಿತ್ ಶರ್ಮಾ
ಭಾರತದ ಇನ್ನಿಂಗ್ಸ್ ಮುಗಿದ ಬಳಿಕ ಬಾಂಗ್ಲಾದೇಶ ಬ್ಯಾಟಿಂಗ್ ಆರಂಭಿಸಿತು. ಬಾಂಗ್ಲಾದೇಶ ತನ್ನ ಮೊದಲ ವಿಕೆಟ್ ಕಳೆದುಕೊಂಡಾಗ ರೋಹಿತ್ ಶರ್ಮಾ ತಕ್ಕ ಉತ್ತರ ಕೊಟ್ಟರು.
ಹಾರ್ದಿಕ್ ಪಾಂಡ್ಯ ಬಾಂಗ್ಲಾ ಆರಂಭಿಕ ಆಟಗಾರ ಲಿಟ್ಟನ್ ದಾಸ್ ಅವರ ವಿಕೆಟ್ ಪಡೆದಾಗ ರೋಹಿತ್ ಶರ್ಮಾ ಆಕ್ರಮಣಕಾರಿಯಾಗಿ ಸಂಭ್ರಮಿಸುವ ಮೂಲಕ ಉತ್ತರ ಕೊಟ್ಟರು. ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಸೆಮಿಫೈನಲ್ ಸ್ಥಾನ ಖಚಿತ
ವಿರಾಟ್ ಕೊಹ್ಲಿ ಏಕದಿನ ಮತ್ತು ಟಿ20 ವಿಶ್ವಕಪ್ ಸೇರಿಸಿ 3000 ರನ್ ಗಳಿಸಿದ ಮೊದಲ ಆಟಗಾರ ಎನ್ನುವ ದಾಖಲೆ ಬರೆದರು. ಸೆಮಿಫೈನಲ್ ಪಂದ್ಯಕ್ಕೆ ಮುನ್ನ ಕೊಹ್ಲಿ ಫಾರ್ಮ್ಗೆ ಮರಳಿರುವುದು ಭಾರತ ತಂಡದ ವಿಶ್ವಾಸ ಹೆಚ್ಚಿಸಿದೆ.
ಭಾರತ ಮುಂದಿನ ಸೂಪರ್ 8 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ಭಾರತ ಅಜೇಯವಾಗಿ ಸೆಮಿಫೈನಲ್ ತಲುಪಲಿದೆ.
-
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications