Virat Kohli: ಕೊಹ್ಲಿ ಶತಕದ ಬಗ್ಗೆ ಸಚಿನ್, ಅನುಷ್ಕಾ ಹೇಳಿದ್ದೇನು? ಇನ್ನಿಂಗ್ಸ್ ಬಳಿಕ ಕೊಹ್ಲಿ ಏನಂದ್ರು?
ಭಾರತೀಯ ಕ್ರಿಕೆಟ್ ಅಭಿಮಾನಿಗಳ ಬಹಳ ದಿನದ ಕನಸು ಕೊನೆಗೂ ನನಸಾಗಿದೆ. ಕ್ರಿಕೆಟ್ ದೇವರ 49 ಶತಕಗಳ ದಾಖಲೆಯನ್ನು ಕಿಂಗ್ ಕೊಹ್ಲಿ ಸರಿಗಟ್ಟಿದ್ದಾರೆ. ಹೌದು, ಭಾರತದ ಕ್ರಿಕೆಟ್ ಕಾಶಿ ಈಡನ್ ಗಾರ್ಡನ್ಸ್ ಅಂಗಳದಲ್ಲಿ ತಮ್ಮ ಹುಟ್ಟು ಹಬ್ಬದ ದಿನವೇ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಗಳಿಸಿ ಮಿಂಚಿದರು.
ವಿರಾಟ್ ಕೊಹ್ಲಿ ಶತಕ ಗಳಿಸಿದ ನಂತರ ವಿಶ್ವದಾದ್ಯಂತ ಕ್ರಿಕೆಟ್ ಪ್ರೇಮಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಹಲವು ಮಾಜಿ ಕ್ರಿಕೆಟಿಗರು ಕೊಹ್ಲಿ ಸಾಧನೆಯನ್ನು ಹಾಡಿ ಹೊಗಳಿದ್ದಾರೆ, ಇನ್ನು ಸ್ವತಃ ಸಚಿನ್ ತೆಂಡೂಲ್ಕರ್ ಕೂಡ ವಿರಾಟ್ ಕೊಹ್ಲಿ ಶತಕ ಗಳಿಸಿದ ನಂತರ ಅಭಿನಂದನೆ ತಿಳಿಸಿದ್ದಾರೆ.

50ನೇ ಶತಕ ಗಳಿಸಲು ಹಾರೈಕೆ
ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಸಚಿನ್ ತೆಂಡೂಲ್ಕರ್ ವಿರಾಟ್ ಕೊಹ್ಲಿಗೆ ಅಭಿನಂದನೆ ಸಲ್ಲಿಸಿದರು. "ವಿರಾಟ್ ಚೆನ್ನಾಗಿ ಆಡಿದ್ದಾರೆ. ಈ ವರ್ಷದ ಆರಂಭದಲ್ಲಿ 49 ರಿಂದ 50 ಕ್ಕೆ ಹೋಗಲು ನನಗೆ 365 ದಿನಗಳು ಬೇಕಾಯಿತು. ನೀವು 49 ರಿಂದ 50 ಕ್ಕೆ ಹೋಗಿ ಮುಂದಿನ ಕೆಲವು ದಿನಗಳಲ್ಲಿ ನನ್ನ ದಾಖಲೆಯನ್ನು ಮುರಿಯುತ್ತೀರಿ ಎಂದು ನಾನು ಭಾವಿಸುತ್ತೇನೆ. ಅಭಿನಂದನೆಗಳು!!" ಎಂದು ಹೇಳಿದ್ದಾರೆ.
Well played Virat.
— Sachin Tendulkar (@sachin_rt) November 5, 2023
It took me 365 days to go from 49 to 50 earlier this year. I hope you go from 49 to 50 and break my record in the next few days.
Congratulations!!#INDvSA pic.twitter.com/PVe4iXfGFk
ಸಚಿನ್ ಏಪ್ರಿಲ್ 24, 2023ರಂದು 50ನೇ ವರ್ಷಕ್ಕೆ ಕಾಲಿಟ್ಟಿದ್ದನ್ನು ಇಲ್ಲಿ ಸೂಚ್ಯವಾಗಿ ಹೇಳಿದ್ದಾರೆ. ಸಚಿನ್ ತೆಂಡೂಲ್ಕರ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಾಸ್ಯದ ಸಂದೇಶವನ್ನು ಕಳುಹಿಸಿದ್ದಾರೆ. 49 ರಿಂದ 50 ವರ್ಷ ತುಂಬಲು ತನಗೆ 365 ದಿನಗಳು ಬೇಕಾಯಿತು ಎಂದು ಅವರು ಹೇಳಿಕೊಂಡರು. ಕೊಹ್ಲಿ ಶೀಘ್ರದಲ್ಲೇ 50ನೇ ಶತಕ ಸಿಡಿಸಲಿ ಎಂದು ಹಾರೈಸಿದ್ದಾರೆ.
ಪತ್ನಿ ಅನುಷ್ಕಾರಿಂದ ಕೂಡ ಅಭಿನಂದನೆ
ಇನ್ನು ವಿರಾಟ್ ಕೊಹ್ಲಿ ಶತಕ ಗಳಿಸಿದ ನಂತರ ಪತ್ನಿ ಅನುಷ್ಕಾ ಶರ್ಮಾ ಕೂಡ ಇನ್ಸ್ಟಾಗ್ರಾಂ ಖಾತೆಯಲ್ಲಿ ಕೊಹ್ಲಿ ಫೋಟೊ ಹಂಚಿಕೊಂಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. 'ನಿಮ್ಮ ಜನ್ಮದಿನದಂದು ನಿಮಗಾಗಿ ನಿಮ್ಮದೇ ಉಡುಗೊರೆ' ಎಂದು ಕೊಹ್ಲಿ ಶತಕವನ್ನು ಸಂಭ್ರಮಿಸಿದ್ದಾರೆ.
ಶತಕ ಸಿಡಿಸಿದ ಬಳಿಕ ಕೊಹ್ಲಿ ಹೇಳಿದ್ದೇನು?
ಇನ್ನು ಭಾರತದ ಇನ್ನಿಂಗ್ಸ್ ಮುಗಿದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, "ನನಗೆ ಆಡಲು ಅವಕಾಶ ನೀಡಿದ್ದಕ್ಕಾಗಿ ಮತ್ತು ತಂಡದ ಯಶಸ್ಸಿಗೆ ಕೊಡುಗೆ ನೀಡಿದ ದೇವರಿಗೆ ನಾನು ಆಭಾರಿಯಾಗಿದ್ದೇನೆ. ಈ ಮಹಾನ್ ಸ್ಥಳದಲ್ಲಿ ಈ ದೊಡ್ಡ ಗುಂಪಿನ ಮುಂದೆ ನನ್ನ ಜನ್ಮದಿನದಂದು ನೂರು ರನ್ ಗಳಿಸುವುದು ಅದ್ಭುತವಾಗಿದೆ. ಪಿಚ್ ನಿಧಾನವಾಗಿದೆ, ನಾವು ಗುಣಮಟ್ಟದ ಬೌಲಿಂಗ್ ಲೈನ್-ಅಪ್ ಅನ್ನು ಹೊಂದಿದ್ದೇವೆ, ನಾವು ಉತ್ತಮವಾಗಿ ಆಡಬೇಕಾಗಿವೆ, ವಿಕೆಟ್ ಪಡೆಯುವುದು ಪ್ರಮುಖವಾಗಿವೆ, ಜೋಡಿಯನ್ನು ಬೇಗ ಪಡೆಯುವುದು ಈ ಪಿಚ್ನ ವರ್ತನೆಯೊಂದಿಗೆ ಅವರನ್ನು ಒತ್ತಡಕ್ಕೆ ಒಳಪಡಿಸುತ್ತದೆ," ಎಂದು ವಿರಾಟ್ ಕೊಹ್ಲಿ ಹೇಳಿದರು.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications