Virat Kohli: ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ರಾಜನಿಗೆ ಕ್ರಿಕೆಟ್ ದೇವರಿಂದ ವಿಶೇಷ ಸಂದೇಶ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡುವ ಮುನ್ನವೇ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ವಿರಾಟ್ ಕೊಹ್ಲಿ ನಿರ್ಧಾರಕ್ಕೆ ಇಡೀ ಕ್ರಿಕೆಟ್ ಜಗತ್ತೇ ಶಾಕ್ ಆಗಿದೆ. ಅಭಿಮಾನಿಗಳಿಗೂ ಇದು ದೊಡ್ಡ ಶಾಕ್ ಆಗಿದೆ. ಎಲ್ಲಾ ಮಾದರಿಗಿಂತ ಕೊಹ್ಲಿಗೆ ಟೆಸ್ಟ್ ಮಾದರಿ ತುಂಬಾ ಇಷ್ಟ. ಆದರೂ ಅವರು ಆತುರದಲ್ಲಿ ನಿರ್ಧಾರ ಯಾಕೆ ಮಾಡಿದರು ಎನ್ನುವ ಪ್ರಶ್ನೆ ಕಾಡುತ್ತಿದೆ.
ಆದರೂ ಅವರು ನಿವೃತ್ತಿಯಾಗಿರುವುದಂತೂ ಸತ್ಯ, ಟೆಸ್ಟ್ ಕ್ರಿಕೆಟ್ನಲ್ಲಿ ನಾವಿನ್ನು ಕೊಹ್ಲಿಯನ್ನು ನೋಡಲು ಸಾಧ್ಯವಿಲ್ಲ ಎನ್ನುವುದೇ ಅಭಿಮಾನಿಗಳಿಗೆ ದೊಡ್ಡ ಆಘಾತ. ಕೊಹ್ಲಿ ನಿರ್ಧಾರಕ್ಕೆ ಹಲವು ಮಾಜಿ ಆಟಗಾರರು ಕೂಡ ಶಾಕ್ ಆಗಿದ್ದಾರೆ. ಕೊಹ್ಲಿ ಇನ್ನೂ 2-3 ವರ್ಷ ಕ್ರಿಕೆಟ್ ಆಡಬೇಕಿತ್ತು ಎಂದು ಹೇಳಿದ್ದಾರೆ.

ಕ್ರಿಕೆಟ್ ದೇವರ ಸಂದೇಶ
ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಂದ ವಿಶೇಷ ಸಂದೇಶ ಸಿಕ್ಕಿದೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಕೊಹ್ಲಿ ಕುರಿತು ಸಚಿನ್ ವಿಶೇಷ ಸಂದೇಶ ಹಂಚಿಕೊಟ್ಟಿದ್ದಾರೆ.
"ನೀವು ಟೆಸ್ಟ್ನಿಂದ ನಿವೃತ್ತರಾಗುತ್ತಿರುವಾಗ, 12 ವರ್ಷಗಳ ಹಿಂದೆ, ನನ್ನ ಕೊನೆಯ ಟೆಸ್ಟ್ ಪಂದ್ಯದ ಸಮಯದಲ್ಲಿ ನೀವು ನಡೆದುಕೊಂಡ ರೀತಿಯನ್ನು ನಾನು ನೆನಪಿಸಿಕೊಳ್ಳುತ್ತೇನೆ. ನಿಮ್ಮ ದಿವಂಗತ ತಂದೆಯಿಂದ ಸ್ವೀಕರಿಸಿದ ಒಂದು ದಾರವನ್ನು ಉಡುಗೊರೆಯಾಗಿ ನೀಡಲು ನೀವು ಮುಂದಾದಿರಿ. ಅದು ನನಗೆ ಸ್ವೀಕರಿಸಲು ತುಂಬಾ ವೈಯಕ್ತಿಕ ವಿಷಯವಾಗಿತ್ತು, ಆದರೆ ನಿಮ್ಮ ವರ್ತನೆ ಹೃದಯಸ್ಪರ್ಶಿಯಾಗಿತ್ತು ಮತ್ತು ಅಂದಿನಿಂದ ನನ್ನೊಂದಿಗೆ ಉಳಿದಿದೆ. ಪ್ರತಿಯಾಗಿ ನೀಡಲು ನನ್ನ ಬಳಿ ಯಾವುದೇ ದಾರ ಇಲ್ಲದಿದ್ದರೂ, ನೀವು ನನ್ನ ಅಪಾರವಾದ ಮೆಚ್ಚುಗೆ ಮತ್ತು ಶುಭಾಶಯಗಳನ್ನು ಹೊಂದಿದ್ದೀರಿ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ವಿರಾಟ್, ನಿಮ್ಮ ನಿಜವಾದ ಪರಂಪರೆ, ಕ್ರೀಡೆಯನ್ನು ಎತ್ತಿಕೊಳ್ಳಲು ಅಸಂಖ್ಯಾತ ಯುವ ಕ್ರಿಕೆಟಿಗರನ್ನು ಪ್ರೇರೇಪಿಸುತ್ತದೆ.
ನೀವು ಎಂತಹ ಅದ್ಭುತ ಟೆಸ್ಟ್ ವೃತ್ತಿಜೀವನವನ್ನು ಹೊಂದಿದ್ದೀರಿ! ನೀವು ಭಾರತೀಯ ಕ್ರಿಕೆಟ್ಗೆ ಕೇವಲ ರನ್ ಮಾತ್ರವಲ್ಲ ಅದಕ್ಕಿಂತ ಹೆಚ್ಚಿನದನ್ನು ನೀಡಿದ್ದೀರಿ. ಅದಕ್ಕಾಗಿಯೇ ನೀವು ಹೊಸ ಪೀಳಿಗೆಯ ಉತ್ಸಾಹಭರಿತ ಅಭಿಮಾನಿಗಳು ಮತ್ತು ಆಟಗಾರರನ್ನು ನೀಡಿದ್ದೀರಿ. ಬಹಳ ವಿಶೇಷವಾದ ಟೆಸ್ಟ್ ವೃತ್ತಿಜೀವನಕ್ಕೆ ಅಭಿನಂದನೆಗಳು ಎಂದಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications