Sachin Tendulkar: ಅಭಿಮಾನಿಗಳ ಮನಗೆದ್ದ ಸಚಿನ್ ತೆಂಡೂಲ್ಕರ್ ಮನಮೋಹಕ ಬ್ಯಾಟಿಂಗ್
ಸಚಿನ್ ತೆಂಡೂಲ್ಕರ್ 'ಕ್ರಿಕೆಟ್ ದೇವರು' ಅಥವಾ ಗಾಡ್ ಆಫ್ ಕ್ರಿಕೆಟ್ ಎಂದೇ ಕರೆಸಿಕೊಳ್ಳುತ್ತಾರೆ. ಅವರ ಕೆಲವು ದಾಖಲೆಗಳನ್ನು ಮುರಿಯುವ ಬ್ಯಾಟರ್ ಬರುವುದೇ ಅನುಮಾನ ಎನ್ನುಷ್ಟು ಸಾಧನೆ ಮಾಡಿದ್ದಾರೆ. 2012ರಲ್ಲಿ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿ ಪಡೆದು 13 ವರ್ಷಗಳಾದರೂ ಅವರ ಹಲವು ದಾಖಲೆಗಳ ಹತ್ತಿರ ಕೂಡ ಇನ್ನೂ ಯಾರಿಗೂ ಬರಲು ಆಗುತ್ತಿಲ್ಲ. ಅಂತಹ ಕ್ರಿಕೆಟ್ ದೇವರು ಮತ್ತೊಮ್ಮೆ ಮೈದಾನಕ್ಕಿಳಿದರೆ ಅಭಿಮಾನಿಗಳಿಗೆ ಅದಕ್ಕಿಂತ ಖುಷಿ ಇನ್ನೇನಿದೆ.
51 ವರ್ಷದ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ಭಾರತ ತಂಡದ ಪರವಾಗಿ ಆಡುತ್ತಿದ್ದಾರೆ. ತಾನು ಕ್ರಿಕೆಟ್ನಿಂದ ದೂರವಾಗಿ 13 ವರ್ಷವಾದರೂ ಕ್ರಿಕೆಟ್ ನನ್ನಿಂದ ದೂರವಾಗಿಲ್ಲ ಎನ್ನುವನ್ನು ಸಾಬೀತು ಮಾಡಿದ್ದಾರೆ. ಬುಧವಾರ ವಡೋದರಾದಲ್ಲಿ ಅವರಾಡಿದ ಇನ್ನಿಂಗ್ಸ್ ಸಚಿನ್ರ ಗತವೈಭವವನ್ನು ನೆನಪಿಸಿತು. ಸಚಿನ್ಗೆ ವಯಸ್ಸೇ ಆಗಲ್ವಾ ಎನ್ನುಂತೆ ಮಾಡಿತು.

ಇಂಟನ್ಯಾಷನಲ್ ಮಾಸ್ಟರ್ಸ್ ಲೀಗ್ ಟಿ20 ಪಂದ್ಯಾವಳಿ ನಡೆಯುತ್ತಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿರುವ ಹಿರಿಯ ಆಟಗಾರರು ಆಡುತ್ತಿದ್ದಾರೆ. ಇಂಡಿಯಾ ಮಾಸ್ಟರ್ಸ್ ತಂಡಕ್ಕೆ ಸಚಿನ್ ತೆಂಡೂಲ್ಕರ್ ನಾಯಕತ್ವ ವಹಿಸಿಕೊಂಡಿದ್ದು ಈಗಾಗಲೇ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದೆ. ಬುಧವಾರ ಆಸ್ಟ್ರೇಲಿಯಾ ಮಾಸ್ಟರ್ಸ್ ವಿರುದ್ಧ ಭಾರತ ಸೋತರೂ ಸಚಿನ್ ತೆಂಡೂಲ್ಕರ್ ಆಡಿದ ಇನ್ನಿಂಗ್ಸ್ ಮಾತ್ರ ಅಭಿಮಾನಿಗಳ ಪಾಲಿಗೆ ಹಬ್ಬವೇ ಸರಿ ಎನ್ನುವಂತಾಗಿತ್ತು.
ಭರ್ಜರಿ ಅರ್ಧಶತಕ ಸಿಡಿಸಿದ ಸಚಿನ್
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮಾಸ್ಟರ್ಸ್ 20 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು 269 ರನ್ ಕಲೆ ಹಾಕಿತು. ಶೇನ್ ವ್ಯಾಟ್ಸನ್ 52 ಎಸೆತಗಳಲ್ಲಿ ಅಜೇಯ 110 ರನ್ ಗಳಿಸಿದರೆ, ಬೆನ್ ಡಂಕ್ 53 ಎಸೆತಗಳಲ್ಲಿ 132 ರನ್ ಗಳಿಸಿದರು. 270 ರನ್ಗಳ ಗುರಿಯನ್ನು ಬೆನ್ನಟ್ಟಿದ ಭಾರತ ಮಾಸ್ಟರ್ಸ್ ಪರವಾಗಿ ಸಚಿನ್ ತೆಂಡೂಲ್ಕರ್ ಏಕಾಂಗಿ ಹೋರಾಟ ಮಾಡಿದರು.
33 ಎಸೆತಗಳಲ್ಲಿ 7 ಬೌಂಡರಿ 4 ಅಮೋಘ ಸಿಕ್ಸರ್ ಸಹಿತ 64 ರನ್ ಗಳಿಸುವ ಮೂಲಕ ಮಿಂಚಿದರು. ಮೈದಾನದಲ್ಲಿ ನೆರೆದಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಮ್ಮೆ ಸಚಿನ್ ತೆಂಡೂಲ್ಕರ್ ಅವರ ಮನಮೋಹಕ ಇನ್ನಿಂಗ್ಸ್ ನೋಡುವ ಸೌಭಾಗ್ಯ ಸಿಕ್ಕಿತು. 51ರ ವಯಸ್ಸಿನಲ್ಲೂ ಬೌಂಡರಿ ಸಿಕ್ಸರ್ ಬಾರಿಸಿ ಈ ಕಾಲಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡಿದ್ದು ಅವರ ಅಭಿಮಾನಿಗಳಿಗಂತೂ ಹಬ್ಬವೇ ಸರಿ.
-
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ











Click it and Unblock the Notifications