ಕೋಚ್ ವಿರುದ್ಧ ಮಹಿಳಾ ಸೈಕಲಿಸ್ಟ್ ದೂರು, ತನಿಖೆಗೆ ಸಮಿತಿ ರಚಿಸಿದ SAI
ನವದೆಹಲಿ, ಜೂನ್ 6: ಭಾರತೀಯ ರಾಷ್ಟ್ರೀಯ ಸೈಕಲ್ ಪಟುಗಳ ತಂಡದ ಕೋಚ್ ವಿರುದ್ಧ ಗುರುತರ ಆರೋಪ ಕೇಳಿ ಬಂದಿದೆ. ಸೈಕಲಿಸ್ಟ್ ಮಯೂರಿ ಲೂತೆ ತಮ್ಮ ಜೊತೆ ತಂಡದ ಮುಖ್ಯ ಕೋಚ್ ಆರ್ ಕೆ ಶರ್ಮ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಮಯೂರಿ ನೀಡಿದ ದೂರನ್ನು ಪರಿಗಣಿಸಿರುವ ಭಾರತೀಯ ಕ್ರೀಡಾ ಪ್ರಾಧಿಕಾರ(SAI) ಈ ಬಗ್ಗೆ ಸಮಗ್ರ ತನಿಖೆಗೆ ಸಮಿತಿಯನ್ನು ರಚಿಸಿದೆ. ಸೈಕಲಿಂಗ್ ಫೆಡರೇಷನ್ ಸಹಯೋಗದಲ್ಲಿ ಸಮಿತಿ ರಚನೆಯಾಗಲಿದ್ದು ತನಿಖೆ ನಡೆಯಲಿದೆ.
ಸೈಕ್ಲಿಸ್ಟ್ ಮಯೂರಿ ದೂರಿನ ಬಗ್ಗೆ ಆದ್ಯತೆಯ ಮೇರೆಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಮತ್ತು ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಸಿಎಫ್ಐ) ಕೂಡ ತನ್ನ ಅಥ್ಲೀಟ್ನ ಬೆಂಬಲಕ್ಕೆ ನಿಂತಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ(SAI) ಹೇಳಿದೆ. "ಸ್ಲೊವೇನಿಯಾದಲ್ಲಿ ವಿದೇಶಿ ತರಬೇತಿ ಶಿಬಿರದ ಸಂದರ್ಭದಲ್ಲಿ ತರಬೇತುದಾರರಿಂದ ಅನುಚಿತ ವರ್ತನೆ ಕಂಡು ಬಂದಿದೆ ಎಂದು ದೂರು ಬಂದಿದೆ. ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಶಿಫಾರಸಿನ ಮೇರೆಗೆ ತರಬೇತುದಾರನನ್ನು ನೇಮಿಸಲಾಗಿದೆ ಎಂದು SAI ಮಾಹಿತಿ ನೀಡಿದೆ.
"ಕ್ರೀಡಾಪಟು ನೀಡಿದ ದೂರು ಅನುಸರಿಸಿ, ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು SAI ತಕ್ಷಣವೇ ಅವರನ್ನು ಭಾರತಕ್ಕೆ ಕರೆತಂದಿದೆ ಮತ್ತು ಈ ವಿಷಯದ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ಸಹ ರಚಿಸಿದೆ. ಈ ವಿಷಯವನ್ನು ಆದ್ಯತೆಯ ಮೇಲೆ ವ್ಯವಹರಿಸಲಾಗುತ್ತಿದೆ ಮತ್ತು ಶೀಘ್ರದಲ್ಲೇ ಪರಿಹರಿಸಲಾಗುವುದು" ಎಂದು SAI ಅಧಿಕೃತ ಹೇಳಿಕೆ ನೀಡಿದೆ.

ಜೂನ್ 18 ರಿಂದ 22 ರವರೆಗೆ ನಡೆಯಲಿರುವ ಏಷ್ಯನ್ ಟ್ರ್ಯಾಕ್ ಸೈಕ್ಲಿಂಗ್ ಚಾಂಪಿಯನ್ಶಿಪ್ಗಾಗಿ ಸ್ಲೊವೇನಿಯಾದಲ್ಲಿ ತರಬೇತಿ-ಕಮ್-ಸ್ಪರ್ಧೆಯ ವಿದೇಶಿ ಎಕ್ಸ್ಪೋಸರ್ ಟ್ರಿಪ್ ತಯಾರಿ ನಡೆಸಲಾಗಿದೆ.
"ದೂರುದಾರರಾದ ಮಯೂರಿ ಅವರ ಬೆಂಬಲಕ್ಕೆ CFI ನಿಂತಿದೆ ಮತ್ತು SAI ರಚಿಸಿರುವ ಸಮಿತಿಯ ನಿರ್ಧಾರವು ಫೆಡರೇಶನ್ನ ಸಂಪೂರ್ಣ ಬೆಂಬಲವನ್ನು ಹೊಂದಿರುತ್ತದೆ ಎಂದು ಈಗಾಗಲೇ ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಮಯೂರಿ ಜೊತೆ ಮಾತುಕತೆ ನಡೆಸಿದೆದೆ" ಎಂದು CFI ಹೇಳಿದೆ.
CFI ಯ ನಾಲ್ಕು ಸದಸ್ಯರ ಸಮಿತಿಯು ಪ್ರಧಾನ ಕಾರ್ಯದರ್ಶಿ ಮಣಿಂದರ್ ಪಾಲ್ ಸಿಂಗ್, ಎಸ್ಎಸ್ ಸುದೀಶ್ ಕುಮಾರ್ (ಅಧ್ಯಕ್ಷ, ಕೇರಳ ಸೈಕ್ಲಿಂಗ್), ದಿಪಾಲಿ ನಿಕಮ್ (ಮುಖ್ಯ ತರಬೇತುದಾರ, ಮಹಾರಾಷ್ಟ್ರ ಸೈಕ್ಲಿಂಗ್ ತಂಡ) ಮತ್ತು ಸಹಾಯಕ ಕಾರ್ಯದರ್ಶಿ ವಿಎನ್ ಸಿಂಗ್ ಅವರು ಸೋಮವಾರದಂದು ಮಯೂರಿರನ್ನು ಭೇಟಿಯಾಗಿ ಸಂಪೂರ್ಣ ಬೆಂಬಲವನ್ನು ಭರವಸೆ ನೀಡಿದರು.
ಕೋಚ್ ಶರ್ಮಾ ಜೊತೆಗೆ ಉಳಿದ ಆಟಗಾರರು ಜೂನ್ 14 ರಂದು ಭಾರತಕ್ಕೆ ಮರಳಲು ನಿರ್ಧರಿಸಲಾಗಿದೆ ಎಂದು ಸಿಎಫ್ಐ ಹೇಳಿದೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications