Samit Dravid: ಭಾರತ ತಂಡಕ್ಕೆ ಎಂಟ್ರಿ ಕೊಟ್ಟ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್
ಭಾರತ ತಂಡದ ಮಾಜಿ ನಾಯಕ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಇದೀಗ ಭಾರತ ತಂಡಕ್ಕೆ ಆಡಲು ಸಜ್ಜಾಗಿದ್ದಾರೆ. ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ಮಿಂಚಿದ ಸಮಿತ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಅಂಡರ್-19 ಸರಣಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಏಕದಿನ ಮತ್ತು ನಾಲ್ಕುದಿನಗಳ ಟೆಸ್ಟ್ ಪಂದ್ಯಕ್ಕೆ ಅವರು ಆಯ್ಕೆಯಾಗಿದ್ದಾರೆ. ಭಾರತ ಅಂಡರ್ 19 ತಂಡವು ಆಸ್ಟ್ರೇಲಿಯಾ ವಿರುದ್ಧ 50 ಓವರ್ಗಳ ಮೂರು ಪಂದ್ಯಗಳನ್ನು ಮತ್ತು ಎರಡು ನಾಲ್ಕು ದಿನಗಳ ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ಪುದುಚೆರಿ ಮತ್ತು ಚೆನ್ನೈನಲ್ಲಿ ಟೆಸ್ಟ್ ಪಂದ್ಯಗಳು ನಡೆಯಲಿದೆ. ಏಕದಿನ ತಂಡಕ್ಕೆ ಮೊಹಮ್ಮದ್ ಅಮಾನ್ ನಾಯಕತ್ವ ವಹಿಸಿಕೊಂಡಿದ್ದು, ನಾಲ್ಕು ದಿನಗಳ ಟೆಸ್ಟ್ ತಂಡಕ್ಕೆ ಸೋಹಮ್ ಪಟವರ್ಧನ್ ನಾಯಕರಾಗಿದ್ದಾರೆ. ಏಕದಿನ ಸರಣಿಯ ಮೂರು ಪಂದ್ಯಗಳು ಸೆಪ್ಟೆಂಬರ್ 21, 23 ಮತ್ತು 26 ರಂದು ನಡೆಯಲಿದ್ದು, ಎಲ್ಲಾ ಪಂದ್ಯಗಳು ಪುದುಚೆರಿಯಲ್ಲಿ ನಡೆಯಲಿವೆ.

ನಾಲ್ಕು ದಿನಗಳ ಪಂದ್ಯಗಳು ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 7 ರಂದು ಪ್ರಾರಂಭವಾಗಲಿವೆ. ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿವೆ. ವೇಗದ ಬೌಲಿಂಗ್ ಆಲ್ ರೌಂಡರ್ ಸಮಿತ್ ದ್ರಾವಿಡ್ ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿರುವ ಕೆಎಸ್ಸಿಎ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ಪರ ಆಡುತ್ತಿದ್ದಾರೆ.
ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ಸಮಿತ್ ದ್ರಾವಿಡ್ ಅವರಿಂದ ಉತ್ತಮ ಪ್ರದರ್ಶನ ಏನೂ ಬಂದಿಲ್ಲ. ಏಳು ಇನ್ನಿಂಗ್ಸ್ಗಳಲ್ಲಿ ಕೇವಲ 82 ರನ್ ಗಳಿಸಿದ್ದಾರೆ. 33 ರನ್ ಅವರು ಗಳಿಸಿದ ಅತ್ಯಧಿಕ ದೊಡ್ಡ ಸ್ಕೋರ್ ಆಗಿದೆ. ಬೌಲರ್ ಆದರೂ ಅವರಿಗೆ ಮಹಾರಾಜ ಟ್ರೋಫಿಯಲ್ಲಿ ಇನ್ನೂ ಬೌಲಿಂಗ್ ಮಾಡಲು ಅವಕಾಶ ಸಿಕ್ಕಿಲ್ಲ.
ಕೂಚ್ ಬೆಹಾರ್ ಪಂದ್ಯಾವಳಿಯಲ್ಲಿ ಮಿಂಚು
2024ರ ಆರಂಭದಲ್ಲಿ ಸಮಿತ್ ದ್ರಾವಿಡ್ ಅವರು ಕೂಚ್ ಬೆಹಾರ್ ಟ್ರೋಫಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಕರ್ನಾಟಕ ಮೊದಲ ಬಾರಿಗೆ ಕೂಚ್ ಬೆಹಾರ್ ಪ್ರಶಸ್ತಿ ಗೆದ್ದುಕೊಂಡಿತ್ತು. 18 ವರ್ಷದ ಅವರು ಎಂಟು ಪಂದ್ಯಗಳಲ್ಲಿ 362 ರನ್ ಗಳಿಸಿದ್ದರು. ಜಮ್ಮು ಮತ್ತು ಕಾಶ್ಮೀರ ವಿರುದ್ಧ 98 ರನ್ ಗಳಿಸುವ ಮೂಲಕ ಗಮನ ಸೆಳೆದಿದ್ದರು. ಬ್ಯಾಟಿಂಗ್ನಲ್ಲಿ ಮಾತ್ರವಲ್ಲದ ಬೌಲಿಂಗ್ನಲ್ಲಿ ಕೂಡ ಅವರು ಮಿಂಚಿದ್ದು, ಎಂಟು ಪಂದ್ಯಗಳಲ್ಲಿ 16 ವಿಕೆಟ್ ಪಡೆದುಕೊಂಡಿದ್ದರು.
ಏಕದಿನ ಸರಣಿಗೆ ಭಾರತ ಅಂಡರ್ 19 ತಂಡ
ರುದ್ರ ಪಟೇಲ್ (ಉಪನಾಯಕ), ಸಾಹಿಲ್ ಪರಾಖ್, ಕಾರ್ತಿಕೇಯ ಕೆಪಿ, ಮೊಹಮ್ಮದ್ ಅಮಾನ್ (ನಾಯಕ), ಕಿರಣ್ ಚೋರ್ಮಲೆ, ಅಭಿಗ್ಯಾನ್ ಕುಂದು (ವಿಕೆಟ್ ಕೀಪರ್), ಹರ್ವಂಶ್ ಸಿಂಗ್ ಪಂಗಾಲಿಯಾ, ಸಮಿತ್ ದ್ರಾವಿಡ್, ಯುಧಾಜಿತ್ ಗುಹಾ, ಸಮರ್ಥ್ ಎನ್, ನಿಖಿಲ್ ಕುಮಾರ್, ಚೇತನ್ ಶರ್ಮಾ, ಹಾರ್ದಿಕ್ ರಾಜ್, ರೋಹಿತ್ ರಾಜಾವತ್, ಮೊಹಮ್ಮದ್ ಇನಾನ್.
ನಾಲ್ಕು ದಿನಗಳ ಸರಣಿಗೆ ಭಾರತ ತಂಡ
ವೈಭವ್ ಸೂರ್ಯವಂಶಿ, ನಿತ್ಯ ಪಾಂಡ್ಯ, ವಿಹಾನ್ ಮಲ್ಹೋತ್ರಾ (ಉಪನಾಯಕ), ಸೋಹಂ ಪಟವರ್ಧನ್ (ನಾಯಕ), ಕಾರ್ತಿಕೇಯ ಕೆ.ಪಿ, ಸಮಿತ್ ದ್ರಾವಿಡ್, ಅಭಿಗ್ಯಾನ್ ಕುಂದು (ವಿಕೆಟ್ ಕೀಪರ್), ಹರ್ವಂಶ್ ಸಿಂಗ್ ಪಂಗಾಲಿಯಾ (ವಿಕೆಟ್ ಕೀಪರ್) ಚೇತನ್ ಶರ್ಮಾ, ಸಮರ್ಥ್ ಎನ್, ಆದಿತ್ಯ ರಾವತ್, ನಿಖಿಲ್ ಕುಮಾರ್, ಅನ್ಮೋಲ್ಜೀತ್ ಸಿಂಗ್, ಆದಿತ್ಯ ಸಿಂಗ್, ಮೊಹಮ್ಮದ್ ಇನಾನ್.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications