Rishabh Pant: ಮೈದಾನದಲ್ಲೇ ಪಂತ್ ಜೊತೆ ಸಂಜೀವ್ ಗೊಯೆಂಕಾ ಮಾತುಕತೆ: ಭಾರತದ ಮಾಜಿ ಆಟಗಾರ ಅಸಮಾಧಾನ
2025ರ ಐಪಿಎಲ್ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಬರೋಬ್ಬರಿ 27 ಕೋಟಿ ರೂಪಾಯಿಗೆ ಖರೀದಿ ಮಾಡಿತು. ಐಪಿಎಲ್ ಇತಿಹಾಸದಲ್ಲೇ ದುಬಾರಿ ಆಟಗಾರ ಎನಿಸಿಕೊಂಡರು. ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಬಂದ ಬಳಿಕ ದುಬಾರಿ ಬೆಲೆಗೆ ಎಲ್ಎಸ್ಜಿ ಪಾಲಾದ ಪಂತ್, ಬಳಿಕ ತಂಡದ ನಾಯಕತ್ವ ವಹಿಸಿಕೊಂಡರು.
2025ರ ಐಪಿಎಲ್ನಲ್ಲಿ ಎಲ್ಎಸ್ಜಿ ಫ್ರಾಂಚೈಸಿ ನಾಯಕ ರಿಷಬ್ ಪಂತ್ರಿಂದ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿತ್ತು, ಆದರೆ ಮೊದಲ ಮೂರು ಪಂದ್ಯಗಳಲ್ಲಿ ಪಂತ್ ಬ್ಯಾಟಿಂಗ್ನಲ್ಲಿ ವಿಫಲವಾಗಿದ್ದಾರೆ. ಮೊದಲ ಪಂದ್ಯದಲ್ಲಿ ನಾಯಕತ್ವದಲ್ಲಿ, ಕೀಪಿಂಗ್ನಲ್ಲಿ ಮತ್ತು ಬ್ಯಾಟಿಂಗ್ನಲ್ಲೂ ವಿಫಲವಾಗಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ಒಂದು ವಿಕೆಟ್ನಿಂದ ಭರ್ಜರಿ ಗೆಲುವು ಸಾಧಿಸಿತ್ತು.

ಸಂಜೀವ್ ಗೊಯೆಂಕಾ ಬಗ್ಗೆ ಅಸಮಾಧಾನ
ಫ್ರಾಂಚೈಸಿ ಮಾಲೀಕ ಸಂಜೀವ್ ಗೊಯೆಂಕಾ ಪ್ರತಿ ಪಂದ್ಯದ ನಂತರ ನಾಯಕ ರಿಷಬ್ ಪಂತ್ ಜೊತೆ ಮೈದಾನದಲ್ಲೇ ಚರ್ಚೆ ನಡೆಸುವುದು ಪ್ರತಿ ಬಾರಿ ವೈರಲ್ ಆಗುತ್ತಲೇ ಇದೆ. ಕಳೆದ ಬಾರಿ ಕೆಎಲ್ ರಾಹುಲ್ ಜೊತೆ ಇದೇ ರೀತಿ ಮೈದಾನದಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತೊರೆದು ಡೆಲ್ಲಿ ಕ್ಯಾಪಿಟಲ್ಸ್ ಸೇರಿಕೊಂಡಿದ್ದಾರೆ.
ಇದೀಗ ರಿಷಬ್ ಪಂತ್ ಜೊತೆ ಪ್ರತಿ ಪಂದ್ಯದ ಬಳಿ ಸಂಜೀವ್ ಗೊಯೆಂಕಾ ಮಾತನಾಡುವುದು, ಅದರಲ್ಲೂ ಪಂದ್ಯವನ್ನು ಸೋತರೆ ಅವರು ಮಾತನಾಡುವ ರೀತಿ, ಹಾವಭಾವ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಕಂಡ ಬಳಿಕ ಪಂತ್ ಜೊತೆ ತೀವ್ರ ಚರ್ಚೆ ನಡೆಸಿದರು.
ಭಾರತ ತಂಡದ ಮಾಜಿ ಆಟಗಾರ, 1983ರ ವಿಶ್ವಕಪ್ ವಿಜೇತ ತಂಡದಲ್ಲಿದ್ದ ವೇಗದ ಬೌಲರ್ ಮದನ್ ಲಾಲ್, ವಿಡಿಯೋ ನೋಡಿ ಬೇಸರ ವ್ಯಕ್ತಪಡಿಸಿದ್ದಾರೆ. ಆಟಗಾರರಿಗೆ ಮುಕ್ತವಾಗಿ ಆಡಲು ಅವಕಾಶ ನೀಡುವಂತೆ ಮತ್ತು ಮೈದಾನದಲ್ಲಿ ಚರ್ಚೆ ನಡೆಸದೆ ಡ್ರೆಸ್ಸಿಂಗ್ ರೂಂನಲ್ಲಿಯೋ ಅಥವಾ ಹೋಟೆಲ್ನಲ್ಲೋ ಆಟಗಾರರ ಜೊತೆ ಚರ್ಚೆ ನಡೆಸುವಂತೆ ಸಲಹೆ ಕೊಟ್ಟಿದ್ದಾರೆ.
ರಿಷಬ್ ಪಂತ್ ಮತ್ತು ಸಂಜೀವ್ ಗೊಯೆಂಕಾ ಅವರ ನಡುವಿನ ಚರ್ಚೆ ಬಗ್ಗೆ ನನಗೆ ಗೊತ್ತಿಲ್ಲ. ಚರ್ಚೆಯನ್ನು ಒಳಗಡೆ ಮಾಡಿಕೊಳ್ಳಲಿ, ಆಟಗಾರರು ಕ್ರಿಕೆಟ್ ಅನ್ನು ಆನಂದಿಸಲಿ ಅವರನ್ನು ಮುಕ್ತವಾಗಿ ಆಡಲು ಬಿಡಿ, ಟಿ20 ಮಾದರಿ ಕ್ರಿಕೆಟ್ ತುಂಬಾ ಅನಿರೀಕ್ಷಿತ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ಇದುವರೆಗೂ ಮೂರು ಪಂದ್ಯಗಳನ್ನು ಆಡಿದ್ದು ಒಂದು ಪಂದ್ಯದಲ್ಲಿ ಮಾತ್ರ ಗೆಲುವ ಕಂಡಿದ್ದು, ಎರಡು ಪಂದ್ಯಗಳಲ್ಲಿ ಸೋತಿದೆ. ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications