ವಿರಾಟ್ ಕೊಹ್ಲಿಯ ದಶಕದ ಹಳೆಯ ದಾಖಲೆ ಅಳಿಸಿದ ಸಂಜು ಸ್ಯಾಮ್ಸನ್
T20 World Cup: 2026ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಅಧಿಪತ್ಯ ಸಾಧಿಸುವುದರ ಜೊತೆಗೆ, ವೈಯಕ್ತಿಕ ದಾಖಲೆಗಳ ಪುಟದಲ್ಲೂ ಹೊಸ ಇತಿಹಾಸ ಸೃಷ್ಟಿಯಾಗಿದೆ. ಸ್ಟಾರ್ ಬ್ಯಾಟರ್ ಸಂಜು ಸ್ಯಾಮ್ಸನ್, ವಿಶ್ವಕಪ್ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಕೊಹ್ಲಿ ದಾಖಲೆ ಮುರಿದಿದ್ದಾರೆ.
ಈವರೆಗೆ ಭಾರತದ ಪರ ಟಿ20 ವಿಶ್ವಕಪ್ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯು ವಿರಾಟ್ ಕೊಹ್ಲಿ (2014ರಲ್ಲಿ 319 ರನ್) ಹೆಸರಿನಲ್ಲಿತ್ತು. ಸುಮಾರು ಒಂದು ದಶಕದಿಂದ ಅಜೇಯವಾಗಿದ್ದ ಈ ದಾಖಲೆಯನ್ನು ಸಂಜು ಸ್ಯಾಮ್ಸನ್ ಇದೀಗ ಅಳಿಸಿ ಹಾಕಿದ್ದಾರೆ.

ಕೊಹ್ಲಿ ದಾಖಲೆ ಮುರಿದ ಸಂಜು
ಸಂಜು ಸ್ಯಾಮ್ಸನ್ 2026ರ ವಿಶ್ವಕಪ್ನಲ್ಲಿ ಕೇವಲ 5 ಇನಿಂಗ್ಸ್ಗಳನ್ನು ಆಡಿ ಭರ್ಜರಿ 321 ರನ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ. ಈ ಟೂರ್ನಿಯಲ್ಲಿ ಅಬ್ಬರಿಸಿದ ಮತ್ತೊಬ್ಬ ಯುವ ಬ್ಯಾಟರ್ ಇಶಾನ್ ಕಿಶನ್ ಕೂಡಾ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇಶಾನ್ ಕಿಶನ್ 2026ರ ಆವೃತ್ತಿಯಲ್ಲಿ ಒಟ್ಟು 317 ರನ್ ಗಳಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ಭಾರತದ ಪರ ಒಂದೇ ಆವೃತ್ತಿಯಲ್ಲಿ ಹೆಚ್ಚು ರನ್ ಗಳಿಸಿದವರು
* ಸಂಜು ಸ್ಯಾಮ್ಸನ್: 321 ರನ್ - (2026)
* ವಿರಾಟ್ ಕೊಹ್ಲಿ: 319 ರನ್ - (2014)
* ಇಶಾನ್ ಕಿಶನ್: 317 ರನ್ - (2026)
ಈ ಬಾರಿಯ ಟಿ20 ವಿಶ್ವಕಪ್ ಟೂರ್ಯನಿಯಲ್ಲಿ ಸಂಜು ಸ್ಯಾಮ್ಸನ್ ಅವರ ಈ ಅದ್ಭುತ ಲಯವು ಭಾರತ ತಂಡ ಟ್ರೋಫಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದೆ. ಕೇವಲ 5 ಇನಿಂಗ್ಸ್ಗಳಲ್ಲಿ ಇಷ್ಟೊಂದು ರನ್ ಗಳಿಸುವ ಮೂಲಕ ಅವರು ತಾವು ಟಿ20 ಕ್ರಿಕೆಟ್ನ ಹೊಸ 'ರನ್ ಮಷೀನ್' ಎಂಬುದನ್ನು ಸಾಬೀತುಪಡಿಸಿದ್ದಾರೆ.
ಈ ಸಾಧನೆಯ ಕುರಿತು ಮಾತನಾಡಿರುವ ಸಂಜು, "ಇದು ವೈಯಕ್ತಿಕ ದಾಖಲೆಗಿಂತ ತಂಡದ ಗೆಲುವಿಗೆ ಹೆಚ್ಚು ಮಹತ್ವ ನೀಡಿದ ಆಟ," ಎಂದು ಪ್ರತಿಕ್ರಿಯಿಸಿದ್ದಾರೆ. ಸಂಜು ಅವರ ಈ ಸ್ಥಿರ ಪ್ರದರ್ಶನ ಮತ್ತು ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯು ಟೂರ್ನಿಯ ಉದ್ದಕ್ಕೂ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿತು. ತಂಡದ ಸಹ ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿ ನೀಡಿದ ನಿರಂತರ ಬೆಂಬಲವೇ ತಮ್ಮ ಈ ಯಶಸ್ಸಿಗೆ ಕಾರಣ ಎಂದು ಅವರು ಸ್ಮರಿಸಿದ್ದಾರೆ.
ವಿಶ್ವಕಪ್ನಂತಹ ಒತ್ತಡದ ಟೂರ್ನಿಯಲ್ಲಿ, ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶ ಮಾಡಿ ದಿಗ್ಗಜ ಆಟಗಾರನ ದಾಖಲೆಯನ್ನು ಅಳಿಸಿ ಹಾಕಿರುವುದು ಅವರ ವೃತ್ತಿಜೀವನದ ಮೈಲಿಗಲ್ಲಾಗಿದೆ. ಅವರ ಈ ಉತ್ತಮ ಲಯವು ಮುಂಬರುವ ದಿನಗಳಲ್ಲಿ ಭಾರತ ತಂಡಕ್ಕೆ ಹೆಚ್ಚಿನ ಬಲ ನೀಡಲಿದೆ ಎಂಬುದರಲ್ಲಿ ಸಂಶಯವಿಲ್ಲ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications