Sanju Samson: ಇನ್ನೆಷ್ಟು ಅವಕಾಶ ಬೇಕು ನಿಮಗೆ ಎಂದ ಅಭಿಮಾನಿಗಳು
ಸಂಜು ಸ್ಯಾಮ್ಸನ್ಗೆ ಭಾರತ ತಂಡಕ್ಕಾಗಿ ಆಡುವ ಅವಕಾಶ ಸಿಗುವುದೇ ಕಡಿಮೆ, ಅವರು ತಂಡಕ್ಕೆ ಆಯ್ಕೆಯಾದರೂ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ಸಿಗುವುದು ಬಹಳ ಕಡಿಮೆ, ಆದರೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸಂಜು ಸ್ಯಾಮ್ಸನ್ ವಿಫಲವಾಗುತ್ತಿದ್ದು, ಭಾರತ ತಂಡಕ್ಕೆ ಮತ್ತೆ ಆಯ್ಕೆಯಾಗುವ ಅವಕಾಶವೇ ಇಲ್ಲದಂತಾಗಿದೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಎರಡು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದ ಸಂಜು ಸ್ಯಾಮ್ಸನ್ ಎರಡೂ ಪಂದ್ಯಗಳಿಂದ ಒಂದೇ ಒಂದು ರನ್ ಕೂಡ ಗಳಿಸಲಿಲ್ಲ. ಎರಡನೇ ಟಿ20 ಪಂದ್ಯಗಳಲ್ಲಿ ಮೊದಲ ಎಸೆತದಲ್ಲೇ ಔಟಾದರೆ, ಮೂರನೇ ಟಿ20 ಪಂದ್ಯದಲ್ಲಿ 4 ಎಸೆತಗಳಲ್ಲಿ ಯಾವುದೇ ರನ್ ಗಳಿಸದೆ ವಿಕೆಟ್ ಒಪ್ಪಿಸಿದರು.

ವಿಕೆಟ್ ಬ್ಯಾಟರ್ ಆಗಿ ತಂಡದಲ್ಲಿ ಅವಕಾಶ ಪಡೆಯಲು ಸಾಕಷ್ಟು ಪೈಪೋಟಿ ಶುರುವಾಗಿದೆ. ರಿಷಬ್ ಪಂತ್ಗೆ ವಿಶ್ರಾಂತಿ ನೀಡಿದ ಕಾರಣ, ಸಂಜು ಸ್ಯಾಮ್ಸನ್ಗೆ ತಮ್ಮ ಸಾಮರ್ಥ್ಯ ತೋರಿಸಲು ಅವಕಾಶ ಸಿಕ್ಕಿತ್ತು, ಆದರೆ ಸಿಕ್ಕ ಚಿನ್ನದ ಅವಕಾಶವನ್ನು ಗೋಲ್ಡನ್ ಡಕ್ ಮೂಲಕ ಹಾಳುಮಾಡಿಕೊಂಡಿದ್ದಾರೆ.
2026ರ ಟಿ20 ವಿಶ್ವಕಪ್ಗಾಗಿ ತಂಡವನ್ನು ಕಟ್ಟುವ ಲೆಕ್ಕಾಚಾರದಲ್ಲಿರುವ ಕೋಚ್ ಗೌತಮ್ ಗಂಭೀರ್, ಇನ್ನು ಮುಂದೆ ಸ್ಯಾಮ್ಸನ್ರನ್ನು ಆಯ್ಕೆಗಾಗಿ ಪರಿಗಣಿಸುವ ಸಾಧ್ಯತೆ ಕಡಿಮೆ, ಅನೇಕ ಪ್ರತಿಭಾವಂತ ಯುವ ಆಟಗಾರರು ಈಗಾಗಲೇ ಪೈಪೋಟಿ ನೀಡುತ್ತಿದ್ದು, ಸ್ಯಾಮ್ಸನ್ರನ್ನು ಆಯ್ಕೆಗೆ ಪರಿಗಣಿಸುವುದು ಕೂಡ ಅನುಮಾನ ಎನ್ನುವಂತಾಗಿದೆ.
ಸತತ ಎರಡು ಡಕ್ಗಳು ಪಂತ್ನಂತಹ ಆಟಗಾರನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಆದರೆ ಸಂಜು ಸ್ಯಾಮ್ಸನ್ರಂತಹವರಿಗೆ, ಭಾರತ ತಂಡದಲ್ಲಿ ಅವಕಾಶ ಸಿಗುವುದು ಕಡಿಮೆ. ಸಂಜು ಸ್ಯಾಮ್ಸನ್ಗೆ ರಿಷಬ್ ಪಂತ್ರಿಂದ ಪೈಪೋಟಿಯಲ್ಲ, ಆದರೆ ಅಭಿಷೇಕ್ ಶರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅವರಂತಹ ಉದಯೋನ್ಮುಖ ಆಟಗಾರರು ಈಗಾಗಲೇ ಅವರಿಗಿಂತ ಉತ್ತಮ ಪ್ರದರ್ಶನ ನೀಡಿದ್ದು ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
ಅಭಿಷೇಕ್ ಶರ್ಮಾ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ 46 ಎಸೆತಗಳಲ್ಲಿ ಶತಕವನ್ನು ಗಳಿಸಿದರು, ಮತ್ತು ರುತುರಾಜ್ ಜಿಂಬಾಬ್ವೆ ಪ್ರವಾಸದಲ್ಲಿ ಅತ್ಯುತ್ತಮ ಆಟಗಾರರಾಗಿದ್ದರು, ಆದರೂ ಇಬ್ಬರೂ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.
ಸ್ಯಾಮ್ಸನ್ ಎರಡು ಅವಕಾಶಗಳನ್ನು ವ್ಯರ್ಥ ಮಾಡಿಕೊಂಡಿದ್ದಾರೆ. ಶುಭ್ಮನ್ ಗಿಲ್ನ ಗಾಯಗೊಂಡಿದ್ದರಿಂದ ಸ್ಯಾಮ್ಸನ್ಗೆ ಅವಕಾಶ ಸಿಕ್ಕಿತ್ತು, ಆದರೆ ಅವರು ಮೊದಲ ಎಸೆತದಲ್ಲೇ ಔಟ್ ಆಗಿದ್ದರು. ಆದರೂ ಗೌತಮ್ ಗಂಭೀರ್ ಮತ್ತು ಸೂರ್ಯಕುಮಾರ್ ಯಾದವ್ ಸ್ಯಾಮ್ಸನ್ಗೆ ಮತ್ತೊಂದು ಅವಕಾಶ ನೀಡಿದರೂ ಸ್ಯಾಮ್ಸನ್ ಅದನ್ನು ಬಳಸಿಕೊಳ್ಳುವಲ್ಲಿ ವಿಫಲವಾದರು.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್












Click it and Unblock the Notifications