ಐಪಿಎಲ್ಗೂ ಮುನ್ನ ಈಡನ್ ಗಾರ್ಡನ್ಸ್ನಲ್ಲಿ ಮಿಂಚಿದ ಉದಯೋನ್ಮುಖ ಪ್ರತಿಭೆ ಸಾರ್ಥಕ್ ರಂಜನ್ ಯಾರು?
Sarthak Ranjan: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಟಾರ್ ಬ್ಯಾಟರ್ ಸಾರ್ಥಕ್ ರಂಜನ್, ಐಪಿಎಲ್ ಸೀಸನ್ಗೂ ಮುನ್ನ ಶುಕ್ರವಾರ ಈಡನ್ ಗಾರ್ಡನ್ಸ್ನಲ್ಲಿ ನಡೆದ ತಂಡದ ಆಂತರಿಕ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ರಾಜಕಾರಣಿ ಪಪ್ಪು ಯಾದವ್ ಅವರ ಪುತ್ರನಾಗಿರುವ ಸಾರ್ಥಕ್, ಕೇವಲ 16 ಎಸೆತಗಳಲ್ಲಿ 37 ರನ್ ಸಿಡಿಸಿ ಮಿಂಚಿದರು.
ರಿಂಕು ಸಿಂಗ್ ನಾಯಕತ್ವದ 'ಗೋಲ್ಡನ್ ನೈಟ್ಸ್' ಪರವಾಗಿ ಆಡಿದ ಇವರು, ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ನೇತೃತ್ವದ 'ಪರ್ಪಲ್ ನೈಟ್ಸ್' ವಿರುದ್ಧ ಈ ಪ್ರದರ್ಶನ ನೀಡಿದರು. ತಮ್ಮ ಇನಿಂಗ್ಸ್ನಲ್ಲಿ ಸಾರ್ಥಕ್ 5 ಬೌಂಡರಿ ಹಾಗೂ 2 ಸಿಕ್ಸರ್ಗಳನ್ನು ಸಿಡಿಸಿದ್ದು, ಈ ವೇಳೆ ಸುಮಾರು 240ರಷ್ಟು ಸ್ಟ್ರೈಕ್ ರೇಟ್ ಹೊಂದಿದ್ದರು. ಇನ್ನೂ ಅಂತಿಮವಾಗಿ ಬ್ಲೆಸ್ಸಿಂಗ್ ಮುಜರಬಾನಿ ಅವರ ಬೌಲಿಂಗ್ನಲ್ಲಿ ಕ್ಯಾಚ್ ನೀಡುವ ಮೂಲಕ ಸಾರ್ಥಕ್ ಪೆವಿಲಿಯನ್ನತ್ತ ನಡೆದರು.

ದೇಶಿಯ ಟೂನಿಗಳಲ್ಲಿ ಅದ್ಭುತ ಪ್ರದರ್ಶನ
ಕಳೆದ ವರ್ಷ ನವೆಂಬರ್ನಲ್ಲಿ ನಡೆದ ಐಪಿಎಲ್ 2026ರ ಮಿನಿ ಹರಾಜಿನಲ್ಲಿ, 29 ವರ್ಷದ ಈ ಆಟಗಾರನನ್ನು ಕೆಕೆಆರ್ ಫ್ರಾಂಚೈಸಿಯು ಅವರ ಮೂಲ ಬೆಲೆಯಾದ 30 ಲಕ್ಷ ರೂಪಾಯಿಗೆ ಖರೀದಿಸಿತು. ಆದರೆ, ಐಪಿಎಲ್ ಪಾದಾರ್ಪಣೆಗೂ ಮುನ್ನ ದೇಶೀಯ ಕ್ರಿಕೆಟ್ ಹಾಗೂ ದೆಹಲಿ ಪ್ರೀಮಿಯರ್ ಲೀಗ್ನಲ್ಲಿ ನಿರಂತರವಾಗಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಸಾರ್ಥಕ್ ಅವರ ಈ ಅದ್ಭುತ ಪ್ರತಿಭೆಯು ಆಯ್ಕೆದಾರರು ಹಾಗೂ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಅಗ್ರ ಕ್ರಿಕೆಟ್ ಹಂತಕ್ಕೆ ಏರಲು ಶ್ರಮಿಸುತ್ತಿರುವ ಪ್ರತಿಭಾವಂತ ದೇಶೀಯ ಆಟಗಾರರಿಗೆ ಸಾರ್ಥಕ್ ಅವರ ಆಯ್ಕೆಯು ಒಂದು ಉತ್ತಮ ಉದಾಹರಣೆಯಾಗಿದೆ.
ಸಾರ್ಥಕ್ಗೆ ಶುಭಹಾರೈಸಿದ ತಂದೆ ಪಪ್ಪು ಯಾದವ್
ತಂದೆ ಪಪ್ಪು ಯಾದವ್ ಅವರು ಟ್ವೀಟ್ ಮಾಡಿ, "ಅಭಿನಂದನೆಗಳು ಮಗನೇ, ಶ್ರದ್ಧಯಿಂದ ಆಡು, ನಿನ್ನ ಪ್ರತಿಭೆಯ ಬಲದಿಂದ ನಿನ್ನದೇ ಆದ ಗುರುತನ್ನು ರೂಪಿಸಿಕೊ. ಇನ್ಮುಂದೆ ಸಾರ್ಥಕ್ ಹೆಸರಿನಿಂದಲೇ ನಮ್ಮನ್ನು ಗುರುತಿಸುವಂತೆ ಆಗಲಿ," ಎಂದು ಶುಭಹಾರೈಸಿದ್ದಾರೆ. ಹೀಗೆ ದೊಡ್ಡ ವೇದಿಕೆಯಲ್ಲಿ ಸಾರ್ಥಕ್ ಅದ್ಭುತ ಪ್ರದರ್ಶನದ ಮೂಲಕ ತನ್ನದೇ ಆಟ ಛಾಪು ಮೂಡಿಸಲಿ ಎಂದು ಅವರು ತುಂಬು ಹೃದಯದಿಂದ ಹಾರೈಸಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ಸಂಪೂರ್ಣ ತಂಡ: ಅಜಿಂಕ್ಯ ರಹಾನೆ (ನಾಯಕ), ಅಂಗ್ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಹರ್ಷಿತ್ ರಾಣಾ, ಮನೀಶ್ ಪಾಂಡೆ, ರಮಣ್ದೀಪ್ ಸಿಂಗ್, ರಿಂಕು ಸಿಂಗ್, ರೋವ್ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮರೂನ್ ಗ್ರೀನ್, ಫಿನ್ ಅಲೆನ್, ಮತೀಶ ಪತಿರಾನ, ತೇಜಸ್ವಿ ಸಿಂಗ್, ಕಾರ್ತಿಕ್ ತ್ಯಾಗಿ, ಪ್ರಶಾಂತ್ ಸೋಲಂಕಿ, ರಾಹುಲ್ ತ್ರಿಪಾಠಿ, ಟಿಮ್ ಸೀಫರ್ಟ್, ಸಾರ್ಥಕ್ ರಂಜನ್, ದಕ್ಷ್ ಕಮ್ರಾ, ರಚಿನ್ ರವೀಂದ್ರ, ಆಕಾಶ್ ದೀಪ್.
-
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
ಕ್ರಿಕೆಟ್ ಆಟ, ಬೆಟ್ಟಿಂಗ್ ದಂಧೆ, ಜೂಜಿನ ಮಜಾ ಇದೇ ಮಾರ್ಚ್ 28ರಿಂದ ಪ್ರಾರಂಭ: ವಿವೇಕಾನಂದ ಎಚ್.ಕೆ. ಮಹತ್ವದ ಸಂದೇಶ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ












Click it and Unblock the Notifications