ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ ಗೆಲುವು: ಪಾಕ್ನಲ್ಲಿ ಸಂಭ್ರಮ ಏಕೆ?
ಕತಾರ್, ನವೆಂಬರ್ 23: ಫಿಫಾ ವಿಶ್ವಕಪ್ನಲ್ಲಿ ಸೌದಿ ಅರೇಬಿಯಾ ತಂಡವು ಬಲಿಷ್ಠ ತಂಡ ಅರ್ಜೆಂಟೀನಾ ಫುಟ್ಬಾಲ್ ತಂಡವನ್ನು ಸೋಲಿಸಿದೆ. ಈ ಅಪರೂಪದ ಗೆಲುವು ಸಾಧಿಸಿರುವ ಕ್ಷಣಕ್ಕೆ ಸೌದಿಯಲ್ಲಿ ಸಂಭ್ರಮವನ್ನು ಆಚರಣೆ ಮಾಡಲಾಗುತ್ತಿದೆ. ಈ ಸಂಭ್ರಮವನ್ನು ಆಚರಿಸಲು ಸೌದಿ ಸರ್ಕಾರವು ಒಂದು ದಿನದ ಅಧಿಕೃತ ರಜೆ ಘೋಷಣೆ ಮಾಡಲಾಗಿದೆ. ಇನ್ನು ಸೌದಿ ಅರೇಬಿಯಾ ಗೆದ್ದಿದಕ್ಕೆ ಪಾಕಿಸ್ತಾನದಲ್ಲೂ ಸಂಭ್ರಮಿಸಲಾಗಿದೆ.
ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರೇ ಟ್ವೀಟ್ ಮಾಡುವ ಮೂಲಕ ಸೌದಿ ಅರೇಬಿಯಾ ತಂಡವನ್ನು ಅಭಿನಂದಿಸಿದ್ದಾರೆ.
ಸೌದಿ ಅರೇಬಿಯಾ ಮುಸ್ಲಿಂಮರ ಬಹುಸಂಖ್ಯಾತ ರಾಷ್ಟ್ರವಾಗಿದೆ ಹಾಗಾಗಿ ಪಾಕ್ನಲ್ಲಿ ಸಂಭ್ರಮ ಆಚರಿಸಲಾಗುತ್ತಿದೆ. ಇನ್ನು ಪಾಕಿಸ್ತಾನಕ್ಕೆ ಗರಿಷ್ಠ ಸಾಲ ಮತ್ತು ಅಗತ್ಯದ ಸಮಯದಲ್ಲಿ ಹಣಕಾಸಿನ ನೆರವು ನೀಡುವ ದೇಶಗಳಲ್ಲಿ ಸೌದಿ ಅರೇಬಿಯಾ ಒಂದಾಗಿದೆ. ಇದರಿಂದಾಗಿ ಪಾಕಿಸ್ತಾನದಲ್ಲಿ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ.

ವಿಶೇಷ ಸಂದೇಶ ರವಾನಿಸಿದ ಪಾಕ್ ಪ್ರಧಾನಿ
ಫಿಫಾ ವಿಶ್ವಕಪ್ 2022ರಲ್ಲಿ ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ ಜಯಗಳಿಸಿರುವ ಈ ಸಂಭ್ರಮಕ್ಕೆ ಪಾಕಿಸ್ತಾನದ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಇಡೀ ತಂಡ ಮತ್ತು ಸೌದಿ ಅರೇಬಿಯಾ ನಾಗರಿಕರಿಗೆ ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಶೆಹಬಾಜ್ ಷರೀಫ್, 'ಎಂತಹ ಅದ್ಭುತ ಫುಟ್ಬಾಲ್ ಆಟವಿದು. ಫಿಫಾ ವಿಶ್ವಕಪ್ನಲ್ಲಿ ಸೌದಿ ಅರೇಬಿಯಾ ತಂಡ ಅರ್ಜೆಂಟೀನಾವನ್ನು ಸೋಲಿಸಿ ಇತಿಹಾಸ ಸೃಷ್ಟಿಸಿದೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಸೌದಿ ಅರೇಬಿಯಾದ ಸಹೋದರ, ಸಹೋದರಿಯರೊಂದಿಗೆ ನಾವು ಕೂಡ ಈ ವಿಜಯದ ಸಂಭ್ರಮವನ್ನು ಆಚರಿಸುತ್ತಿದ್ದೇವೆ' ಎಂದು ತಿಳಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿ ಇಂದು ದಿನಪೂರ್ತಿ ಸಂಭ್ರಮಾಚರಣೆ
ಅರ್ಜೆಂಟೀನಾವನ್ನು ಸೋಲಿಸಿದ ನಂತರ ಪಾಕಿಸ್ತಾನದಲ್ಲಿ ಭಾರೀ ಸಂಭ್ರಮಾಚರಣೆ ನಡೆಯುತ್ತಿದೆ. ಇಡೀ ಸೌದಿ ಅರೇಬಿಯಾದಲ್ಲಿ ಒಂದು ದಿನದ ರಜೆ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳು, ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಚೇರಿಗಳಿಗೂ ಬುಧವಾರ ರಜೆ ನೀಡಲಾಗಿದೆ. ಸೌದಿ ಅರೇಬಿಯಾದಲ್ಲಿ ಅದ್ಧೂರಿಯಾಗಿ ಸಂಭ್ರಮಾಚರಣೆ ನಡೆಯುತ್ತಿದ್ದು, ಈ ಖುಷಿಯನ್ನು ಇಡೀ ದೇಶವೇ ವಿಶ್ವಕಪ್ ಗೆದ್ದಂತೆ ಸಂಭ್ರಮಿಸುತ್ತಿದೆ. ಅರ್ಜೆಂಟೀನಾದಂತಹ ಬಲಿಷ್ಠ ತಂಡವನ್ನು 2-1 ಅಂತರದಿಂದ ಸೌದಿ ಅರೇಬಿಯಾ ಸೋಲಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications