VIDEO: ಮುಂದಿನ ವರ್ಷ ಖೇಲೋ ಇಂಡಿಯಾ ಎರಡನೇ ಆವೃತ್ತಿಗೆ ಚಾಲನೆ
ಬೆಂಗಳೂರು, ಜು. 15: "ಖೇಲೋ ಇಂಡಿಯಾ ಯುನಿವರ್ಸಿಟಿ ಕ್ರೀಡಾಕೂಟದ ಎರಡನೇ ಆವೃತ್ತಿಯನ್ನು 2022ರ ಮಾರ್ಚ್ 5 ರಿಂದ ಆರಂಭಿಸಲು ನಿರ್ಧಾರ ಮಾಡಲಾಗಿದೆ" ಎಂದು ಕ್ರೀಡಾ ಸಚಿವ ಡಾ. ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ನಡೆದ ಸಬೆಯ ಬಳಿಕ ಮಾಹಿತಿ ನೀಡಿದ್ದಾರೆ. ವಿಕಾಸಸೌಧದಲ್ಲಿ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಹಾಗೂ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ನಡದ ಸಭೆಯಲ್ಲಿ ಈ ವಿಷಯವನ್ನು ತೀರ್ಮಾನ ಮಾಡಲಾಗಿದೆ. ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ 158 ಯುನಿವರ್ಸಿಟಿಯಿಂದ 3182 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು, ತಾಂತ್ರಿಕ ಅಧಿಕಾರಿಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಒಟ್ಟು 6 ಸಾವಿರ ಜನರು ಭಾಗವಹಿಸಲಿದ್ದಾರೆ.
"ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಉದ್ಘಾಟನೆಗೆ ಆಹ್ವಾನಿಸಲು ನಿರ್ಧಾರ ಮಾಡಲಾಗಿದೆ" ಎಂದು ಇದೇ ಸಂದರ್ಭದಲ್ಲಿ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
12 ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಒಟ್ಟು 18 ಕ್ರೀಡೆಗಳು ನಡೆಯಲಿವೆ. ಅವುಗಳ ಜೊತೆಗೆ ಆತಿಥೇಯ ರಾಜ್ಯವಾಗಿ ಕರ್ನಾಟಕವು ಕರಾಟೆಯನ್ನು ಕ್ರೀಡಾಕೂಟದಲ್ಲಿ ಸೇರಿಸಿದೆ. ಕ್ರೀಡಾಪಟುಗಳು ಸೇರಿದಂತೆ ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ವಸತಿ, ಸಾರಿಗೆ, ಕ್ರೀಡಾ ಮೂಲಭೂತ ಸೌಕರ್ಯ, ಕ್ರೀಡಾ ಸಾಮಗ್ರಿ ಸೇರಿದಂತೆ ಊಟೋಪಚಾರವನ್ನು ರಾಜ್ಯ ಸರ್ಕಾರ ನೋಡಿಕೊಳ್ಳಲಿದೆ.

ಖೇಲೊ ಇಂಡಿಯಾ ಯುನಿವರ್ಸಿಟಿ ಕ್ರೀಡಾಕೂಟದ ಎರಡನೇ ಆವೃತ್ತಿ ನಡೆಸಲು ಸುಮಾರು ರೂ. 40 ಕೋಟಿ ರೂ.ಗಳ ಅಂದಾಜು ವೆಚ್ಚ ನಿರ್ಧಾರ ಮಾಡಲಾಗಿದೆ. ಅದಕ್ಕೆ ರಾಜ್ಯ ಸರ್ಕಾರ ರೂ. 20 ಕೋಟಿ ರೂ. ಅನುದಾನ ನೀಡಲಿದೆ.
ಕ್ರೀಡಾಕೂಟದ ಸಂಘಟನೆಗಾಗಿ ಉನ್ನತಾಧಿಕಾರ ಸಮಿತಿ ರಚನೆ, ಆಯವ್ಯಯಕ್ಕೆ ಅನುಮೋದನೆ ಸೇರಿದಂತೆ ಪ್ರಮುಖ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲು ತೀರ್ಮಾನ ಮಾಡಲಾಗಿದೆ. ಕ್ರೀಡಾ ಸಚಿವ ಡಾ. ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿ ರಚನೆಯಾಗಲಿದೆ. ಅದರ ಜೊತೆಗೆ ಇನ್ನೂ ಕೆಲವು ಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications