ಕ್ರೀಡಾ ವಸತಿ ಶಾಲೆ, ನಿಲಯಗಳ ಪ್ರವೇಶಕ್ಕೆ ಆಯ್ಕೆ ಶಿಬಿರ: ಎಲ್ಲಿ? ಯಾವಾಗ?
ಬೆಂಗಳೂರು, ಏಪ್ರಿಲ್ 14: ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಕ್ರೀಡಾ ವಸತಿ ಮತ್ತು ನಿಲಯಗಳಲ್ಲಿ ಪ್ರವೇಶಾವಕಾಶ ನೀಡುವ ಸಲುವಾಗಿ ಆಯ್ಕೆ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳ ಇದರ ಸದುಪಯೋಗ ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಪ್ರವೇಶಕ್ಕೆ ಮುನ್ನ ಆಯ್ಕೆ ಶಿಬಿರಗಳಿದ್ದು ಇದರಲ್ಲಿ ಆಯ್ಕೆಯಾದವರಿಗೆ ಪ್ರವೇಶ ನೀಡಲಾಗುತ್ತದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ ಒಟ್ಟು 02 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ, ನಿಲಯಗಳಿಗೆ 5ನೇತರಗತಿ, 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, ಕ್ರೀಡಾ ಸಮವಸ್ತ್ರ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ದಿನಭತ್ಯೆ, ಪ್ರಯಾಣ ಭತ್ಯೆ ಇತ್ಯಾದಿಗಳನ್ನು ನೀಡಲಾಗುತ್ತದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ಶಾಲೆ, ನಿಲಯಗಳಲ್ಲಿ ತರಬೇತಿ ಪಡೆದ ಅನೇಕ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರ-ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ದಾಖಲಿಸಿರುವುದನ್ನು ನಾವು ಕಾಣಬಹುದಾಗಿದೆ. ಪ್ರಖ್ಯಾತ ಕ್ರೀಡಾಪಟುಗಳಾದ ಪ್ರಮೀಳಾ ಅಯ್ಯಪ್ಪ, ಜಿ.ಜಿ. ಶೋಭಾ, ಹೆಚ್.ಎಂ.ಜ್ಯೋತಿ, ಎಸ್.ಡಿ. ಈಶನ್, ಬಾಂಧವ್ಯ ಶಶಿಕಾಂತ್, ಮಲಪ್ರಭಾ ಜಾಧನ್, ಮೋಹಿತ್ ಹೆಚ್.ಎಸ್. ಪ್ರಿಯಾಂಕ ಪಿ. ಹಲವಾರು ನೂರಾರು ಕ್ರೀಡಾಪಟುಗಳು ಕ್ರೀಡಾ ವಸತಿ ಶಾಲೆ, ನಿಲಯದಿಂದ ಹೊರಹೊಮ್ಮಿದ ಕ್ರೀಡಾಪಟುಗಳಾಗಿದ್ದಾರೆ.
ರಾಜ್ಯದಾದ್ಯಂತ ವಿಶೇಷ ಆಯ್ಕೆ ಶಿಬಿರ ಆಯೊಜನೆ
ಈ ವಸತಿ ಶಾಲೆ, ನಿಲಯಗಳಲ್ಲಿ ತರಬೇತಿ ಪಡೆದ ನೂರಾರು ಕ್ರೀಡಾಪಟುಗಳು ತಮ್ಮ ಕ್ರೀಡಾ ಸಾಧನೆಯ ಹಿನ್ನೆಲೆಯಲ್ಲಿ ಪೊಲೀಸ್, ರೈಲ್ವೆ ಅರಣ್ಯ, ಆದಾಯ ತೆರಿಗೆ ಇಲಾಖೆ, ಮಹಾಲೇಖಪಾಲರ ಕಛೇರಿ, ಬ್ಯಾಂಕ್ಗಳು ಹಾಗೂ ಇನ್ನಿತರೆ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗವನ್ನು ಪಡೆದು, ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕ್ರೀಡಾ ವಸತಿ ಶಾಲೆ, ನಿಲಯಗಳಿಗೆ ಪ್ರತೀ ವರ್ಷ ಆಯ್ಕೆ ಶಿಬಿರಗಳ ಮೂಲಕ ಕ್ರೀಡಾಪಟುಗಳ ಆಯ್ಕೆ ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದ ಬಾಲಕ ಮತ್ತು ಬಾಲಕಿಯರಿಗೆ ಮತ್ತೊಂದು ವಿಶೇಷ ಅವಕಾಶವನ್ನು ನೀಡುವ ದೃಷ್ಟಿಯಿಂದ 2025-26 ನೇ ಸಾಲಿನಲ್ಲಿ ವಿಶೇಷ ಆಯ್ಕೆ ಶಿಬಿರ ವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ಏಪ್ರಿಲ್ 15 ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್ಬಾಲ್, ವಾಲಿಬಾಲ್, ಫೆನ್ಸಿಂಗ್, ಆರ್ಚರಿ ಹಾಗೂ ಧಾರವಾಡದ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್ಬಾಲ್ ವಾಲಿಬಾಲ್, ಸೈಕ್ಲಿಂಗ್, ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ ಮತ್ತು ಕಬ್ಬಡಿ, ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಪುಟ್ಬಾಲ್, ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ, ಹಾಕಿ, ತುಮಕೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಮ್ನಾಸ್ಟಿಕ್ಸ್, ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ ಆಯ್ಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.

ಎಲ್ಲಿ ಬೇಕಾದರೂ ಭಾಗವಹಿಸಲು ಅವಕಾಶ
ಏಪ್ರಿಲ್ 17 ರಂದು ಕಲಬುರಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್ಬಾಲ್, ವಾಲಿಬಾಲ್, ಕಬಡ್ಡಿ, ಬೀದರ್ ನ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕ್ಲಿಂಗ್, ಬಳ್ಳಾರಿಯ ಪುಟ್ಬಾಲ್ ಕ್ರೀಡಾಂಗಣದಲ್ಲಿ ಪುಟ್ಬಾಲ್, ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಕಿ, ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜುಡೋ ತರಬೇತಿ ಆಯ್ಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಯಾವುದೇ ಭಾಗದ ಕ್ರೀಡಾಪಟುಗಳು ಯಾವುದೇ ಸ್ಥಳದ ಆಯ್ಕೆ ಶಿಬಿರದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. 2025-26 ನೇ ಸಾಲಿನ ಪ್ರವೇಶಕ್ಕೆ ಈಗಾಗಲೇ ಆಯೋಜಿಸಲಾದ ಆಯ್ಕೆ ಶಿಬಿರಗಳಲ್ಲಿ ಭಾಗವಹಿಸದ ಅಭ್ಯರ್ಥಿಗಳು ಈ ವಿಶೇಷ ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಬಹುದು.
ಈಗಾಗಲೇ ಆಯ್ಕೆ ಶಿಬಿರಗಳಲ್ಲಿ ಭಾಗಿಯಾಗಿರುವ ಆದರೆ, ರಾಜ್ಯ ಮಟ್ಟದ ಆಯ್ಕೆ ಶಿಬಿರಕ್ಕೆ ಆಯ್ಕೆಯಾಗದ ಅಭ್ಯರ್ಥಿಗಳು ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಲು ಉದ್ದೇಶಿಸಿದಲ್ಲಿ ಈ ಬಗ್ಗೆ ಅರ್ಜಿ ನಮೂನೆಯಲ್ಲಿ ಕಡ್ಡಾಯವಾಗಿ ದಾಖಲಿಸಿ, ವಿಶೇಷ ಆಯ್ಕೆ ಶಿಬಿರದಲ್ಲಿ ಭಾಗವಹಿಸಬಹುದು. ರಾಜ್ಯ ಮಟ್ಟದ ಆಯ್ಕೆ ಶಿಬಿರಕ್ಕೆ ಈಗಾಗಲೇ ಆಯ್ಕೆಯಾಗಿರುವವರು ಈ ವಿಶೇಷ ಆಯ್ಕೆ ಶಿಬಿರಗಳಲ್ಲಿ ಭಾಗವಹಿಸುವ ಅವಶ್ಯಕತೆ ಇಲ್ಲ.
8 ನೇ ತರಗತಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 8ನೇ ತರಗತಿ ಪ್ರವೇಶಕ್ಕೆ ಜೂನ್-2025 ಕ್ಕೆ ಅನ್ವಯವಾಗುವಂತೆ 14 ವರ್ಷ ವಯಸ್ಸಿನ ಒಳಗೆ ಇರಬೇಕು. ಪ್ರಥಮ ಪಿ.ಯು.ಸಿ. ಪ್ರವೇಶ ಬಯಸುವ ಅಭ್ಯರ್ಥಿಗಳ ವಯಸ್ಸು ಜೂನ್-2025 ಕ್ಕೆ ಅನ್ವಯವಾಗುವಂತೆ 18 ವರ್ಷ ವಯಸ್ಸಿನ ಒಳಗೆ ಇರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ಆಯಾ ಸ್ಥಳಗಳಲ್ಲಿ ಬೆಳಿಗ್ಗೆ 9 ಗಂಟೆಗೆ ವರದಿ ಮಾಡಿಕೊಳ್ಳಬೇಕಾಗುತ್ತದೆ. ವಾಲಿಬಾಲ್ ಮತ್ತು ಬಾಸ್ಕೆಟ್ಬಾಲ್ ಹೊರತುಪಡಿಸಿ, ಇತರೆ ಕ್ರೀಡೆಗಳಲ್ಲಿ ಅಸಾಧಾರಣ ಸಾಧನೆ ತೋರುವ ಕ್ರೀಡಾಪಟುಗಳಿಗೆ ಎತ್ತರದ (Height) ಅರ್ಹತಾ ಮಾನದಂಡದಲ್ಲಿ ಸಡಿಲಿಕೆ ನೀಡಲಾಗುವುದು.

ಈ ಶಿಬಿರಗಳಲ್ಲಿ ಭಾಗವಹಿಸಿ ಆಯ್ಕೆಯಾದ ಕ್ರೀಡಾಪಟುಗಳು ರಾಜ್ಯ ಮಟ್ಟದ ಆಯ್ಕೆ ತರಬೇತಿ ಶಿಬಿರಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿ, ಅರ್ಹರಾದಲ್ಲಿ ಕ್ರೀಡಾ ವಸತಿ ಶಾಲೆ, ನಿಲಯಗಳಿಗೆ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಯುವ ಸಹಾಯವಾಣಿ ಸಂಖ್ಯೆ: 155265 ಅಥವಾ ನಿಮ್ಮ ಜಿಲ್ಲೆಯ ಉಪ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರನ್ನು ಸಂಪರ್ಕಿಸಿ ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.
-
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications