ಸ್ಪೋರ್ಟ್ಸ್ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ, ತಮ್ಮ ಕರಾಳ ಅನುಭವ ಬಿಚ್ಚಿಟ್ಟ ದ್ಯುತಿ
ಭುವನೇಶ್ವರ, ಜುಲೈ 5 : ಭಾರತದ ತಂಡದ ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಇತ್ತೀಚೆಗೆ ಸ್ಪೋರ್ಟ್ಸ್ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳು ಸೀನಿಯರ್ಸ್ಗಳ ರ್ಯಾಗಿಂಗ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾತನಾಡಿದ್ದು, ತಮಗೂ ಆರಂಭದಲ್ಲಿ ಸೀನಿಯರ್ಗಳು ಕಿರುಕುಳ ನೀಡಿದ್ದರೆಂದು ಬಹಿರಂಗಪಡಿಸಿದ್ದಾರೆ.
ಭುವನೇಶ್ವರದ ಮಹಿಳಾ ಕ್ರೀಡಾ ವಸತಿನಿಲಯದಲ್ಲಿ(ಬಿಜೆಬಿ) 18 ವರ್ಷದ ಯುವತಿಯೊಬ್ಬಳು ರ್ಯಾಗಿಂಗ್ಗೆ ಬೇಸತ್ತು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಳು. ಸ್ಥಳದಲ್ಲಿ ಪೊಲೀಸರಿಗೆ ಆತ್ಮಹತ್ಯೆ ಪತ್ರ ದೊರೆತಿದ್ದು, ಅದರಲ್ಲಿ ಮೂವರು ಸೀನಿಯರ್ಸ್ ತನಗೆ ರ್ಯಾಗಿಂಗ್ ಮಾಡಿ ಮಾನಸಿಕವಾಗಿ ಹಿಂಸಿಸುತ್ತಿದ್ದರು ಎಂದು ಬರೆದುಕೊಂಡಿದ್ದಳು. ಈ ಘಟನೆ ಕುರಿತು ತಮ್ಮ ಫೇಸ್ಬುಕ್ ಪೋಸ್ಟ್ ಮಾಡಿದ್ದು, ತಮ್ಮ ಆರಂಭದ ದಿನಗಳಲ್ಲಿ ಹಿರಿಯ ವಿದ್ಯಾರ್ಥಿನಿಯರಿಂದ ತಾವೂ ಇಂತಹ ಹಲವು ಅಪಮಾನ ಎದುರಿಸಿರುವುದಾಗಿ ತಿಳಿಸಿದ್ದಾರೆ.
"ಸ್ಪೋರ್ಟ್ಸ್ ಹಾಸ್ಟೆಲ್ನಲ್ಲಿ ಸೀನಿಯರ್ಸ್ ನನ್ನನ್ನು ಅವರ ಬಾಡಿ ಮಸಾಜ್ ಮಾಡಲು ಮತ್ತು ಬಟ್ಟೆಗಳನ್ನು ತೊಳೆಯಲು ಒತ್ತಾಯಿಸುತ್ತಿದ್ದರು, ಮಾಡದಿದ್ದರೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು " ಎಂದು ಚಾಂದ್ ಬರೆದುಕೊಂಡಿದ್ದಾರೆ.

ಇಷ್ಟೇ ಅಲ್ಲದೆ ಅವರು ನನ್ನ ಬಡತನದ ಬಗ್ಗೆ ಹೀಯಾಳಿಸುತ್ತಿದ್ದರು, ಅವರ ವಿರುದ್ಧ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿರಲಿಲ್ಲ. ಅದಕ್ಕೂ ನನ್ನನ್ನೇ, ನಿಂದಿಸಲಾಗುತ್ತಿತ್ತು. ಇದು ನನ್ನನ್ನು ಮಾನಸಿಕವಾಗಿ ತುಂಬಾ ಖಿನ್ನತೆಯನ್ನುಂಟು ಮಾಡಿತ್ತು ಎಂದು ಒಲಿಂಪಿಯನ್ ಸ್ಪ್ರಿಂಟರ್ ತಿಳಿಸಿದ್ದಾರೆ.
ಇಂತಹ ಘಟನೆಗಳು ಮನಸಿನ ಮೇಲೆ ಪರಿಣಾಮ ಬೀರುತ್ತಿತ್ತು, ಇದರಿಂದ ಇವರ ಕಾಟ ತಡೆದುಕೊಂಡು ಹಾಸ್ಟಲ್ನಲ್ಲೇ ಉಳಿದುಕೊಂಡರೂ ಕ್ರೀಡೆ ಮೇಲೆ ಗಮನ ಕೇಂದ್ರೀಕರಿಸಲು ಕಷ್ಟವಾಗುತ್ತಿತ್ತು. ಇನ್ನೂ ಕೆಲವರು ಇದನ್ನೆಲ್ಲಾ ಸಹಿಸಲಾಗದೇ ತಮ್ಮ ಗುರಿಯನ್ನು ಕೈಬಿಟ್ಟು ಮನೆಗೆ ಹಿಂತಿರುಗುತ್ತಿದ್ದರು ಎಂದು ವಿವರಿಸಿದ್ದಾರೆ.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications