Gautam Gambhir: ಗೌತಮ್ ಗಂಭೀರ್ ಟೀಂ ಇಂಡಿಯಾ ಕೋಚ್ ಆಗಲು ಶಾರೂಖ್ ಖಾನ್ ಅಡ್ಡಿ? ಖಾಲಿ ಚೆಕ್ ಆಫರ್
ರಾಹುಲ್ ದ್ರಾವಿಡ್ ಬಳಿಕ ಭಾರತ ತಂಡದ ಮುಂದಿನ ಕೋಚ್ ನೇಮಕಕ್ಕೆ ಬಿಸಿಸಿಐ ಹುಡುಕಾಟ ಆರಂಭಿಸಿದೆ. ಭಾರತ ಮಾತ್ರವಲ್ಲದೆ ಹಲವು ವಿದೇಶಿ ಮಾಜಿ ಆಟಗಾರರು ಕೂಡ ಹೆಡ್ ಕೋಚ್ ಆಗಲು ಆಸಕ್ತಿ ತೋರಿಸಿದ್ದಾರೆ.
ಹಲವು ಆಟಗಾರರು ಆಸಕ್ತಿ ಹೊಂದಿದ್ದರು, ಬಿಸಿಸಿಐ ಮಾತ್ರ ಗೌತಮ್ ಗಂಭೀರ್ ಅವರನ್ನು ಮುಂದಿನ ಕೋಚ್ ಆಗಿ ನೇಮಿಸಲು ಆಸಕ್ತಿ ಹೊಂದಿದೆ. ಕೆಕೆಆರ್ ತಂಡದ ಮೆಂಟರ್ ಆಗಿ ಮೊದಲ ಆವೃತ್ತಿಯಲ್ಲೇ ಫೈನಲ್ಗೆ ಮುನ್ನಡೆಸಿರುವ ಗಂಭೀರ್, ಭಾರತ ತಂಡದ ಕೋಚ್ ಆಗಲು ಸೂಕ್ತ ಎನ್ನಲಾಗಿದೆ.

ಗೌತಮ್ ಗಂಭೀರ್ ಕೂಡ ಭಾರತ ತಂಡದ ಕೋಚ್ ಆಗಲು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಆದರೆ ಗೌತಮ್ ಗಂಭೀರ್ ಭಾರತ ತಂಡದ ಕೋಚ್ ಆಗಲು ಒಬ್ಬ ವ್ಯಕ್ತಿ ಅಡ್ಡವಾಗಿ ನಿಂತಿದ್ದಾರೆ. ಹೌದು, ಶಾರುಖ್ ಖಾನ್ ಅವರು ಈಗ ಗೌತಮ್ ಗಂಭೀರ್ ಅವರು ಬಿಸಿಸಿಐ ಕೋಚ್ ಆಗಲು ಅಡ್ಡಿಯಾಗಿದ್ದಾರೆ.
ಗೌತಮ್ ಗಂಭೀರ್ ಅವರನ್ನು ಬಿಟ್ಟುಕೊಡಲು ಶಾರುಖ್ ಖಾನ್ ಅವರಿಗೆ ಸುತರಾಂ ಇಷ್ಟವಿಲ್ಲ. ಕೆಕೆಆರ್ ತಂಡದ ಮೆಂಟರ್ ಆಗಿ ಮುಂದುವರೆಯಲು ಗೌತಮ್ ಗಂಭೀರ್ ಅವರಿಗೆ ಭರ್ಜರಿ ಆಫರ್ ಕೊಟ್ಟಿದ್ದಾರೆ.
ಖಾಲಿ ಚೆಕ್ ನೀಡಿರುವ ಶಾರುಖ್ ಖಾನ್
ಐಪಿಎಲ್ 2024 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿರುವ ಗಂಭೀರ್ ಅವರಿಗೆ ಫ್ರಾಂಚೈಸಿಯ ಸಹ-ಮಾಲೀಕ ಶಾರುಖ್ ಖಾನ್ ಅವರು ಮುಂದಿನ 10 ವರ್ಷಗಳವರೆಗೆ ಫ್ರಾಂಚೈಸಿಯಲ್ಲಿ ಉಳಿಯಲು 'ಖಾಲಿ ಚೆಕ್' ನೀಡಿದ್ದರು ಎಂದು ವರದಿಯೊಂದು ಹೇಳಿದೆ.
ದೈನಿಕ್ ಜಾಗರಣ್ ವರದಿಯ ಪ್ರಕಾರ ಗಂಭೀರ್ ಕೂಡ ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ಆಸಕ್ತಿ ತೋರಿದ್ದಾರೆ. ತಮ್ಮನ್ನು ಆಯ್ಕೆ ಮಾಡುವುದನ್ನು ಖಚಿತಪಡಿಸಿದರೆ ಮಾತ್ರ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ. ಇಲ್ಲವಾದಲ್ಲಿ ಅರ್ಜಿ ಸಲ್ಲಿಸಲ್ಲ ಎಂದು ಹೇಳಿದ್ದಾರೆ.
ಭಾರತ ತಂಡದ ಕೋಚ್ ಆಗಿ ಗಂಭೀರ್ ಅವರನ್ನು ನೇಮಿಸಲು ಬಿಸಿಸಿಐ ತೀವ್ರ ಆಸಕ್ತಿ ತೋರಿಸಿದ ಬೆನ್ನಲ್ಲೇ, ಕೆಕೆಆರ್ ಸಹ-ಮಾಲೀಕ ಶಾರುಖ್ ಖಾನ್ ಮಾಜಿ ಭಾರತ ಆರಂಭಿಕ ಆಟಗಾರನನ್ನು ಫ್ರಾಂಚೈಸಿಯಲ್ಲಿ ದೀರ್ಘಕಾಲ ಉಳಿಸಿಕೊಳ್ಳುವ ಉದ್ದೇಶವನ್ನು ವರದಿ ಬಹಿರಂಗಪಡಿಸಿದೆ.
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಬಳಿಕ ಕೋಚ್ ಆಗಲು ಬಿಸಿಸಿಐ ರಿಕಿ ಪಾಂಟಿಂಗ್, ಜಸ್ಟಿನ್ ಲ್ಯಾಂಗರ್ ಮತ್ತು ಸ್ಟೀಫನ್ ಫ್ಲೆಮಿಂಗ್ ಅರವನ್ನು ಸಂಪರ್ಕಿಸಿದ್ದರೂ, ನಿರಾಕರಿಸಿದ್ದಾರೆ ಎನ್ನಲಾಗಿದೆ. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರನ್ನು ಸಂಪರ್ಕಿಸಿಲ್ಲ ಎಂದಿದ್ದಾರೆ.
ಗಂಭೀರ್ ಅವರು ಭಾರತದ ಮುಂದಿನ ಮುಖ್ಯ ಕೋಚ್ ಆಗಲು ಆಸಕ್ತಿ ಹೊಂದಿರಬಹುದು ಆದರೆ ಕೆಕೆಆರ್ ತಂಡವನ್ನು ತೊರೆಯುವ ಬಗ್ಗೆ ಅವರು ಶಾರುಖ್ ಖಾನ್ ಅವರೊಂದಿಗೆ ಏನು ಮಾತುಕತೆ ನಡೆಸಿದ್ದಾರೆ ಎಂಬುದು ದೊಡ್ಡ ನಿರ್ಧಾರಕ ಅಂಶವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications