Aus vs WI: ಗಬ್ಬಾದಲ್ಲಿ ಆಸ್ಟ್ರೇಲಿಯಾ ಗರ್ವಭಂಗ: ವೆಸ್ಟ್ ಇಂಡೀಸ್ಗೆ 8 ರನ್ಗಳ ರೋಚಕ ಗೆಲುವು
ಆಸ್ಟ್ರೇಲಿಯಾದ ಬ್ರಿಸ್ಬೇನ್ ಗಬ್ಬಾ ಕ್ರೀಡಾಂಗಣದಲ್ಲಿ ನಡೆದ ರಣ ರೋಚಕ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ 8 ರನ್ಗಳ ಗೆಲುವು ಸಾಧಿಸಿದೆ. 21 ವರ್ಷಗಳ ಬಳಿಕ ವೆಸ್ಟ್ ಇಂಡೀಸ್ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವನ್ನು ಗೆದ್ದಿದೆ.
30 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಗೆದ್ದಿದೆ. ಗಬ್ಬಾದಲ್ಲಿ ವೆಸ್ಟ್ ಇಂಡೀಸ್ ಕೊನೆಯ ಬಾರಿಗೆ 1988ರಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿತ್ತು. 36 ವರ್ಷಗಳ ಬಳಿಕ ಗಬ್ಬಾದಲ್ಲಿ ಮತ್ತೆ ಟೆಸ್ಟ್ ಗೆದ್ದ ಸಾಧನೆ ಮಾಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ತಂಡವನ್ನು ಮಣಿಸುವುದು ವೆಸ್ಟ್ ಇಂಡೀಸ್ಗೆ ಸುಲಭವಾಗಿರಲಿಲ್ಲ. ಆದರೆ ಶಮರ್ ಜೋಸೆಫ್ ಅವರ ಮಾರಕ ಬೌಲಿಂಗ್ ಕೆರಿಬಿಯನ್ ಪಡೆಗೆ ರೋಚಕ ಗೆಲುವು ತಂದುಕೊಟ್ಟಿತು. ಎರಡನೇ ಇನ್ನಿಂಗ್ಸ್ನಲ್ಲಿ ಶಮರ್ ಜೋಸೆಫ್ 7 ವಿಕೆಟ್ ಪಡೆದು, ಆಸ್ಟ್ರೇಲಿಯಾ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಕಟ್ಟಿಹಾಕಿದರು.
ನಾಲ್ಕನೇ ದಿನ ಮುಗಿದ ಪಂದ್ಯ
ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದಿದ್ದ ಆಸ್ಟ್ರೇಲಿಯಾ ಸರಣಿ ಗೆಲುವಿನ ವಿಶ್ವಾಸದಲ್ಲೇ ಎರಡನೇ ಪಂದ್ಯಕ್ಕೆ ಸಜ್ಜಾಗಿತ್ತು. ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.
ಮೊದಲ ಇನ್ನಿಂಗ್ಸ್ನಲ್ಲಿ ವೆಸ್ಟ್ ಇಂಡೀಸ್ 311 ರನ್ಗಳಿಗೆ ಆಲೌಟ್ ಆಗಿತ್ತು. ಕವೆಮ್ ಹಾಡ್ಜ್ 71, ಜೋಶುವಾ ಡಿಸಿಲ್ವ 79, ಕೆವಿನ್ ಸಿಂಚ್ಲೆರ್ 50 ರನ್ ಗಳಿಸಿ ವೆಸ್ಟ್ ಇಂಡೀಸ್ ತಂಡಕ್ಕೆ ಆಸರೆಯಾಗಿದ್ದರು. ಮಿಚೆಲ್ ಸ್ಟಾರ್ಕ್ 4 ವಿಕೆಟ್ ಪಡೆದುಕೊಂಡಿದ್ದರು.
ಬಳಿಕ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 9 ವಿಕೆಟ್ ನಷ್ಟಕ್ಕೆ 289 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿತ್ತು. ಖವಾಜ 73, ಅಲೆಕ್ಸ್ ಕ್ಯಾರಿ 65 ಮತ್ತು ನಾಯಕ ಪಾಟ್ ಕಮ್ಮಿನ್ಸ್ 64 ರನ್ ಗಳಿಸಿದ್ದರು. ಅಲ್ಜಾರಿ ಜೋಸೆಫ್ 4 ವಿಕೆಟ್ ಗಳಿಸಿದ್ದರು.
22 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ 193 ರನ್ಗಳಿಗೆ ಆಲೌಟ್ ಆಗಿತ್ತು. ಹೇಜಲ್ವುಡ್ ಮತ್ತು ನಥನ್ ಲಿಯೋನ್ ತಲಾ 3 ವಿಕೆಟ್ ಗಳಿಸಿದ್ದರು. 216 ರನ್ಗಳ ಗೆಲುವಿನ ಗುರಿಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 207 ರನ್ಗಳಿಗೆ ಆಲೌಟ್ ಆಗುವ ಮೂಲಕ 8 ರನ್ಗಳಿಂದ ಸೋಲನುಭವಿಸಿತು.
ಸ್ಟೀವ್ ಸ್ಮಿತ್ ಅಜೇಯ 91 ರನ್ ಗಳಿಸುವ ಮೂಲಕ ಏಕಾಂಗಿ ಹೋರಾಟ ನೀಡಿದರು ತಂಡವನ್ನು ಗೆಲುವಿನ ದಡ ಸೇರಿಸಲು ಮತ್ತೊಂದು ಕಡೆಯಿಂದ ಅವರಿಗೆ ಬೆಂಬಲ ಸಿಗಲಿಲ್ಲ. ಶಮರ್ ಜೋಸೆಫ್ 7 ವಿಕೆಟ್ ಪಡೆದರೆ, ಅಲ್ಜಾರಿ ಜೋಸೆಫ್ 2 ವಿಕೆಟ್ ಪಡೆದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications