ಆಡದಿದ್ದರೂ ಕೈಬಿಡದ ಆರ್ಸಿಬಿ, ಬೆನ್ನೆಲುಬಾಗಿ ನಿಂತ ಬುಮ್ರಾ; ನೋವಿನ ಸಂಗತಿ ಬಿಚ್ಚಿಟ್ಟ ಕನ್ನಡತಿ ಶ್ರೇಯಾಂಕಾ ಪಾಟೀಲ್
Shreyanka Patil: ಭಾರತೀಯ ಮಹಿಳಾ ಕ್ರಿಕೆಟ್ ತಾರೆ, ಆರ್ಸಿಬಿಯ 'ಟಗರು ಪುಟ್ಟಿ' ಶ್ರೇಯಾಂಕ ಪಾಟೀಲ್ ಅವರು ತಮ್ಮ ವೃತ್ತಿಜೀವನದ ಅತ್ಯಂತ ಕಠಿಣ ಹಂತಗಳು ಹಾಗೂ ಕಮ್ಬ್ಯಾಕ್ ಮಾಡಿರುವ ಕುರಿತು ಇಂಡಿಯಾ ಟುಡೇ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
2024ರಲ್ಲಿ ಶ್ರೇಯಾಂಕ ಪಾಟೀಲ್ ಸತತವಾಗಿ ಗಾಯಗಳಿಗೆ ಒಳಗಾಗಿದ್ದರು. ಇದರಿಂದ ಅವರು ಸುಮಾರು 16 ತಿಂಗಳುಗಳ ಕಾಲ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ದೂರ ಉಳಿಯಬೇಕಾಯಿತು. ಈ ಸಮಯದಲ್ಲಿ ಅವರು 2025ರ ಡಬ್ಲ್ಯೂಪಿಎಲ್ ಮತ್ತು ಏಕದಿನ ವಿಶ್ವಕಪ್ ಅನ್ನು ಮಿಸ್ ಮಾಡಿಕೊಂಡಿದ್ದರು.

ಶ್ರೇಯಾಂಕಾ ಪಾಟೀಲ್ ಹೇಳಿದ್ದೇನು?
"ಆ ಒಂದು ವರ್ಷದ ಅವಧಿಯಲ್ಲಿ ನಾನು ತುಂಬಾ ಕಲಿತಿದ್ದೇನೆ. ದೈಹಿಕವಾಗಿ ಅಷ್ಟೇ ಅಲ್ಲದೆ ಮಾನಸಿಕವಾಗಿಯೂ ನಾನು ಕುಗ್ಗಿದ್ದೆ. 'ನಾನು ಮತ್ತೆ ಆಡಲು ಸಾಧ್ಯವೇ?' ಎಂಬ ಅನುಮಾನಗಳು ಕಾಡುತ್ತಿದ್ದವು," ಎಂದು ಶ್ರೇಯಾಂಕ ಹೇಳಿದ್ದಾರೆ. ಇನ್ನೂ ಗಾಯದಿಂದ ಚೇತರಿಸಿಕೊಳ್ಳಲು ಅವರು ಧ್ಯಾನ ಮತ್ತು ದೃಶ್ಯೀಕರಣ ವಿಧಾನಗಳನ್ನು ಬಳಸಿಕೊಂಡರು. ಈ ಪ್ರಕ್ರಿಯೆಯು ಅವರನ್ನು ಮಾನಸಿಕವಾಗಿ ಸದೃಢಗೊಳಿಸಿತು.
ಶ್ರೇಯಾಂಕಾಗೆ ಧೈರ್ಯ ತುಂಬಿದ ಬುಮ್ರಾ
ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಅವರು ನನಗೆ ಧೈರ್ಯ ತುಂಬಿದ್ದರು ಎಂದು ಶ್ರೇಯಾಂಕ ಪಾಟೀಲ್ ಹೇಳಿಕೊಂಡಿದ್ದಾರೆ. "ಪ್ರತಿಯೊಬ್ಬ ಆಟಗಾರನೂ ಇಂತಹ ಹಂತವನ್ನು ಎದುರಿಸಲೇಬೇಕು, ಅದನ್ನು ಎದುರಿಸಿ ಮುಂದೆ ಸಾಗು" ಎಂಬ ಬುಮ್ರಾ ಅವರ ಮಾತು ತಮಗೆ ನೆರವಾಯಿತು ಎಂದು ಅವರು ಸ್ಮರಿಸಿದ್ದಾರೆ. ಹಾಗೆಯೇ ಕೋಚ್ ಅರ್ಜುನ್ ದೇವ್ ಕೂಡ ಬೆನ್ನೆಲುಬಾಗಿ ನಿಂತಿದ್ದರು ಅಂತಲೂ ತಿಳಿಸಿದ್ದಾರೆ.
ಇತ್ತೀಚೆಗೆ ಆಸ್ಟ್ರೇಲಿಯಾ ಪ್ರವಾಸದ ಮೂಲಕ ಭಾರತ ತಂಡಕ್ಕೆ ಮರಳಿರುವ ಶ್ರೇಯಾಂಕ, ಮುಂಬರುವ ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ಚೊಚ್ಚಲ ಪ್ರಶಸ್ತಿ ಗೆಲ್ಲಲು ನೆರವಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನೂ ಐಪಿಎಲ್ನಲ್ಲಿ ಆಡದಿದ್ದರೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನನ್ನು ಉಳಿಸಿಕೊಂಡಿದ್ದು, ತಮಗೆ ಹೆಚ್ಚಿನ ಆತ್ಮವಿಶ್ವಾಸ ನೀಡಿತು ಎಂದು ಅವರು ಭಾವನಾತ್ಮಕವಾಗಿ ಹೇಳಿಕೊಂಡಿದ್ದಾರೆ. ಒಟ್ಟಾರೆಯಾಗಿ ಈ ಸಂದರ್ಶನವು ಒಬ್ಬ ಕ್ರೀಡಾಪಟು ಗಾಯ ಮತ್ತು ವೈಫಲ್ಯಗಳನ್ನು ಮೆಟ್ಟಿ ನಿಂತು ಹೇಗೆ ಮತ್ತೆ ಮೈದಾನಕ್ಕೆ ಮರಳಬಹುದು ಎಂಬುದಕ್ಕೆ ಸ್ಫೂರ್ತಿಯಂತಿದೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಐಪಿಎಲ್ 2026 ಉದ್ಘಾಟನಾ ಪಂದ್ಯಕ್ಕೂ ಮುನ್ನ ಆರ್ಸಿಬಿಯಿಂದ ಸ್ಟಾರ್ ಆಟಗಾರ ಔಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
IPL 2026 Kannadigas: ಐಪಿಎಲ್ 19ನೇ ಆವೃತ್ತಿಯಲ್ಲಿ ಅಬ್ಬರಿಸಲು ಸಜ್ಜಾದ ಕನ್ನಡದ ಕಲಿಗಳು -
RCB: ಒಂದೊಂದು ನಿಮಿಷವೂ ಮುಖ್ಯ; ಐಪಿಎಲ್ ಆರಂಭಕ್ಕೂ ಮುನ್ನ ಆರ್ಸಿಬಿ ಸಹ ಆಟಗಾರರಿಗೆ ಕೊಹ್ಲಿ ಖಡಕ್ ವಾರ್ನ್ -
ತಂದೆಯಂತೆಯೇ ಭಾರೀ ತೂಕದ ಬ್ಯಾಟ್ ಹಿಡಿದ ಅರ್ಜುನ್ ತೆಂಡೂಲ್ಕರ್, ಇದರ ರಹಸ್ಯ ಕೇಳಿ ಅಚ್ಚರಿಪಟ್ಟ ರಿಷಭ್ ಪಂತ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್












Click it and Unblock the Notifications