IPL 2024: ಆರ್ಸಿಬಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಶ್ರೇಯಾಂಕಾ ಪಾಟೀಲ್
ಮಹಿಳಾ ಪ್ರೀಮಿಯರ್ ಲೀಗ್ 2024ರ ಪಂದ್ಯಾವಳಿಯಲ್ಲಿ ಮಿಂಚಿದ ಕನ್ನಡದ ಹುಡುಗಿ ಶ್ರೇಯಾಂಕಾ ಪಾಟೀಲ್, ಸದ್ಯ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿಯಲ್ಲಿ ಆರ್ಸಿಬಿ ತಂಡದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಶನಿವಾರ ನಡೆದ ಎನ್ಡಿಟಿವಿ ಇಂಡಿಯನ್ ಆಫ್ ದಿ ಇಯರ್ 2024 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ 'ವರ್ಷದ ಕ್ರೀಡಾ ಪ್ರದರ್ಶನ' ಪ್ರಶಸ್ನಿ ನೀಡಲಾಯಿತು. ತಂಡವನ್ನು ಪ್ರತಿನಿಧಿಸಿದ ಶ್ರೇಯಾಂಕಾ ಪಾಟೀಲ್, ಶಫಾಲಿ ವರ್ಮಾ, ಸ್ನೇಹ ರಾಣಾ ಮತ್ತು ರಾಧಾ ಯಾದವ್ ಅವರಿಗೆ ಟೆನಿಸ್ ಐಕಾನ್ ಸಾನಿಯಾ ಮಿರ್ಜಾ ಪ್ರಶಸ್ತಿ ಪ್ರದಾನ ಮಾಡಿದರು.

ಕಳೆದ ಕೆಲವು ವರ್ಷಗಳಿಂದ ಮಹಿಳಾ ಕ್ರಿಕೆಟ್ ಭಾರತದಲ್ಲಿ ಕಂಡಿರುವ ಬದಲಾವಣೆಯ ಬಗ್ಗೆ ಮಾತನಾಡಿದ ಶ್ರೇಯಾಂಕಾ ಪಾಟೀಲ್, ಅವಕಾಶಗಳು ಮತ್ತು ಹಣಕಾಸಿನ ವಿಚಾರದಲ್ಲಿ ಬಿಸಿಸಿಐ ನೀಡಿದ ಬೆಂಬಲಕ್ಕೆ ಧನ್ಯವಾದ ತಿಳಿಸಿದರು.
ಮಹಿಳಾ ಕ್ರಿಕೆಟ್ ಬದಲಾಗಿದೆ
ನಮ್ಮನ್ನು ಇಲ್ಲಿಗೆ ಕರೆತಂದಿದ್ದಕ್ಕಾಗಿ ಮತ್ತು ಈ ಅದ್ಭುತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಎನ್ಡಿಟಿವಿಗೆ ಧನ್ಯವಾದ ಎಂದರು. ಮಹಿಳಾ ಕ್ರಿಕೆಟಿಗರಿಗೂ ಆರ್ಥಿಕವಾಗಿ ಆದ್ಯತೆ ನೀಡಲಾಗುತ್ತದೆ ಮತ್ತು ಇದು ನಮಗೆ ಉತ್ತಮ ಅವಕಾಶವಾಗಿದೆ. ನಮಗೆ ಅವಕಾಶ ನೀಡಿದ ಬಿಸಿಸಿಐಗೆ ಧನ್ಯವಾದಗಳು ಮತ್ತು ನಮಗೆ ಆರ್ಥಿಕ ಸಹಾಯವನ್ನೂ ನೀಡುತ್ತಿದೆ, ಎಂದು ಶ್ರೇಯಾಂಕಾ ಹೇಳಿದರು.
ಶ್ರೇಯಾಂಕಾ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭಾಗವಾಗಿದ್ದರು, ಅದು ಇತ್ತೀಚೆಗೆ ಮುಕ್ತಾಯಗೊಂಡ ಮಹಿಳಾ ಪ್ರೀಮಿಯರ್ ಲೀಗ್ (WPL) ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಆರ್ಸಿಬಿ ತಂಡವು (ಪುರುಷರು ಅಥವಾ ಮಹಿಳೆಯರು) ಪ್ರಶಸ್ತಿಯನ್ನು ಗೆದ್ದಿರುವುದು ಇದೇ ಮೊದಲು.
ಶ್ರೇಯಾಂಕಾ ಪಾಟೀಲ್, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ಮತ್ತು ತಂಡಕ್ಕಾಗಿ ವಿಶೇಷ ಸಂದೇಶವನ್ನು ಹೊಂದಿದ್ದರು.
ಈ ಬಾರಿ ಕಪ್ ಗೆಲ್ಲುವ ವಿಶ್ವಾಸ
ನಾವೆಲ್ಲರೂ ಕಳೆದ 16 ವರ್ಷಗಳಿಂದ ಈ ಕಪ್ಗಾಗಿ ಕಾಯುತ್ತಿದ್ದೆವು ಮತ್ತು ಅಂತಿಮವಾಗಿ ನಾವು ಅದನ್ನು ಮಾಡಿದ್ದೇವೆ. ಪುರುಷರ ತಂಡ ಕೂಡ ಕಪ್ ಗೆಲ್ಲಲು ಕಷ್ಟಪಟ್ಟು ಕೆಲಸ ಮಾಡುತ್ತಿದ್ದರೆ ಎಂದು ಹೇಳಿದರು.
ಅವರು ಟ್ರೋಫಿ ಗೆಲ್ಲಲು ನಿಜವಾಗಿಯೂ ಶ್ರಮಿಸುತ್ತಿದ್ದಾರೆ. ಕಷ್ಟಪಟ್ಟು ಕೆಲಸ ಮಾಡುತ್ತಿದ್ದು, ಅವರು ಉತ್ತಮವಾಗಿ ಪ್ರದರ್ಶನ ನೀಡಲಿ ಮತ್ತು ಟ್ರೋಫಿಯನ್ನು ಗೆಲ್ಲಬೇಕು ಎಂದು ಬಯಸುತ್ತೇನೆ. ಅವರು ನಿಜವಾಗಿಯೂ ಶೀಘ್ರದಲ್ಲೇ ಅದನ್ನು ಮಾಡುತ್ತಾರೆ ಮತ್ತು ಅವರಿಗೆ ಶುಭವಾಗಲಿ ಎಂದು ಶ್ರೇಯಾಂಕಾ ಪಾಟೀಲ್ ಹೇಳಿದ್ದಾರೆ.












Click it and Unblock the Notifications