Shubman Gill: ₹450 ಕೋಟಿ ವಂಚನೆ ಹಗರಣ; ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ ಸಮನ್ಸ್ ನೀಡಿದ ಸಿಐಡಿ
ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್, ಸದ್ಯ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ತಂಡಕ್ಕಾಗಿ ಆಡುತ್ತಿದ್ದಾರೆ. ಮೆಲ್ಬೋರ್ನ್ ಟೆಸ್ಟ್ನಲ್ಲಿ ವಿಶ್ರಾಂತಿ ಪಡೆದಿದ್ದ ಅವರು, ಸಿಡ್ನಿ ಟೆಸ್ಟ್ನಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಐದನೇ ಟೆಸ್ಟ್ನಲ್ಲಿ ಆಡಲು ಸಜ್ಜಾಗುತ್ತಿದ್ದ ಬೆನ್ನಲ್ಲೇ ಗುಜರಾತ್ ಅಪರಾಧ ತನಿಖಾ ಇಲಾಖೆ (ಸಿಐಡಿ) ಶುಭಮನ್ ಗಿಲ್ಗೆ ಶಾಕ್ ಕೊಟ್ಟಿದೆ.
ಬಿಝಡ್ ಫೈನನ್ಷಿಯಲ್ ಸರ್ವಿಸ್ ವಂಚನೆ ಹಗರಣಕ್ಕೆ ಸಂಬಂಧಪಟ್ಟಂತೆ ಗುಜರಾತ್ ಅಪರಾಧ ತನಿಖಾ ಇಲಾಖೆ (ಸಿಐಡಿ) ನಾಲ್ವರು ಗುಜರಾತ್ ಟೈಟಾನ್ಸ್ (ಜಿಟಿ) ಆಟಗಾರರಿಗೆ ಸಮನ್ಸ್ ನೀಡಿದೆ. ಶುಭಮನ್ ಗಿಲ್, ಸಾಯಿ ಸುದರ್ಶನ್, ಮೋಹಿತ್ ಶರ್ಮಾ ಮತ್ತು ರಾಹುಲ್ ತೆವಾಟಿಯಾ ಅವರಿಗೆ ಸಿಐಡಿ ಸಮನ್ಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಕೇಳಿದೆ.

ಏನಿದು ಹಗರಣ?
ಅಹಮದಾಬಾದ್ ಮಿರರ್ ವರದಿ ಮಾಡಿರುವ ಪ್ರಕಾರ, ಈಗ ವಂಚನೆ ಆರೋಪ ಎದುರಿಸುತ್ತಿರುವ ಕಂಪನಿಯಲ್ಲಿ ಶುಭಮನ್ ಗಿಲ್ 1.95 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಉಳಿದ ಮೂವರು ಆಟಗಾರರು ಕೂಡ 10 ಲಕ್ಷ ರೂಪಾಯಿಯಿಂದ 1 ಕೋಟಿ ರೂಪಾಯಿವರೆಗೆ ಹೂಡಿಕೆ ಮಾಡಿದ್ದಾರೆ. ಕಂಪನಿಯಲ್ಲಿ ಹೂಡಿಕೆ ಮಾಡಿದವರನ್ನು ವಿಚಾರಣೆ ನಡೆಸಲು ಸಿಐಡಿ ಮುಂದಾಗಿದ್ದು ಈ ನಾಲ್ವರು ಆಟಗಾರರಿಗೂ ಸಮನ್ಸ್ ನೀಡಿದೆ.
ಶುಭಮನ್ ಗಿಲ್ ಈಗ ಆಸ್ಟ್ರೇಲಿಯಾದಲ್ಲಿದ್ದರೆ ಉಳಿದ ಮೂವರು ಆಟಗಾರರು ಭಾರದಲ್ಲಿದ್ದಾರೆ. ತನಿಖೆಗೆ ಸಹಕರಿಸಲು ಎಲ್ಲರೂ ಗುಜರಾತ್ನ ಸಿಐಡಿ ಕಚೇರಿಗೆ ಹಾಜರಾಗಬೇಕಿದೆ. ನಾಲ್ವರ ಲಭ್ಯತೆ ಆಧಾರದ ಮೇಲೆ ವಿಚಾರಣೆಗೆ ಕರೆಯಲಾಗುವುದು ಎಂದು ಹೇಳಾಗಿದೆ.
ಬಿಝಡ್ ಸಂಸ್ಥೆಯು ಜನರಿಗೆ ಬ್ಯಾಂಕ್ಗಳಿಗಿಂತ ಹೆಚ್ಚಿನ ಬಡ್ಡಿದರ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಕೊಟ್ಟ ಭರವಸೆಯಂತೆ ಬಡ್ಡಿದರ ನೀಡದೆ ವಂಚನೆ ಮಾಡಲಾಗುತ್ತಿದೆ ಎಂದು ಹಣ ಹೂಡಿಕೆ ಮಾಡಿದ್ದವರು ಪೊಲೀಸರಿಗೆ ದೂರು ಕೊಟ್ಟಿದ್ದರು. ಬಿಝಡ್ ಫೈನಾನ್ಶಿಯಲ್ ಸರ್ವಿಸಸ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭೂಪೇಂದ್ರಸಿನ್ಹ್ ಝಾಲಾ 6000 ಕೋಟಿ ರೂಪಾಯಿ ಚಿಟ್-ಫಂಡ್ ವಂಚನೆ ಮಾಡಿದ್ದಾರೆ ಎಂದು ಗುಜರಾತ್ ಸಿಐಡಿ ಹೇಳಿತ್ತು, ಹೆಚ್ಚಿನ ತನಿಖೆ ಬಳಿಕ ಇದೀಗ 450 ಕೋಟಿ ರೂಪಾಯಿ ವಂಚನೆ ನಡೆದಿದೆ ಎಂದು ಹೇಳಿದೆ.
ಶುಭಮನ್ ಗಿಲ್ ಸಿಡ್ನಿ ಟೆಸ್ಟ್ನಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ನಾಯಕ ರೋಹಿತ್ ಶರ್ಮಾ ಕೊನೆಯ ಟೆಸ್ಟ್ನಲ್ಲಿ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅವರ ಸ್ಥಾನದಲ್ಲಿ ಗಿಲ್ ಕಣಕ್ಕಿಳಿಯಲಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications