Shubman Gill: ₹450 ಕೋಟಿ ವಂಚನೆ ಹಗರಣ; ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ ಸಮನ್ಸ್ ನೀಡಿದ ಸಿಐಡಿ
ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್, ಸದ್ಯ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ತಂಡಕ್ಕಾಗಿ ಆಡುತ್ತಿದ್ದಾರೆ. ಮೆಲ್ಬೋರ್ನ್ ಟೆಸ್ಟ್ನಲ್ಲಿ ವಿಶ್ರಾಂತಿ ಪಡೆದಿದ್ದ ಅವರು, ಸಿಡ್ನಿ ಟೆಸ್ಟ್ನಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಐದನೇ ಟೆಸ್ಟ್ನಲ್ಲಿ ಆಡಲು ಸಜ್ಜಾಗುತ್ತಿದ್ದ ಬೆನ್ನಲ್ಲೇ ಗುಜರಾತ್ ಅಪರಾಧ ತನಿಖಾ ಇಲಾಖೆ (ಸಿಐಡಿ) ಶುಭಮನ್ ಗಿಲ್ಗೆ ಶಾಕ್ ಕೊಟ್ಟಿದೆ.
ಬಿಝಡ್ ಫೈನನ್ಷಿಯಲ್ ಸರ್ವಿಸ್ ವಂಚನೆ ಹಗರಣಕ್ಕೆ ಸಂಬಂಧಪಟ್ಟಂತೆ ಗುಜರಾತ್ ಅಪರಾಧ ತನಿಖಾ ಇಲಾಖೆ (ಸಿಐಡಿ) ನಾಲ್ವರು ಗುಜರಾತ್ ಟೈಟಾನ್ಸ್ (ಜಿಟಿ) ಆಟಗಾರರಿಗೆ ಸಮನ್ಸ್ ನೀಡಿದೆ. ಶುಭಮನ್ ಗಿಲ್, ಸಾಯಿ ಸುದರ್ಶನ್, ಮೋಹಿತ್ ಶರ್ಮಾ ಮತ್ತು ರಾಹುಲ್ ತೆವಾಟಿಯಾ ಅವರಿಗೆ ಸಿಐಡಿ ಸಮನ್ಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಕೇಳಿದೆ.

ಏನಿದು ಹಗರಣ?
ಅಹಮದಾಬಾದ್ ಮಿರರ್ ವರದಿ ಮಾಡಿರುವ ಪ್ರಕಾರ, ಈಗ ವಂಚನೆ ಆರೋಪ ಎದುರಿಸುತ್ತಿರುವ ಕಂಪನಿಯಲ್ಲಿ ಶುಭಮನ್ ಗಿಲ್ 1.95 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಉಳಿದ ಮೂವರು ಆಟಗಾರರು ಕೂಡ 10 ಲಕ್ಷ ರೂಪಾಯಿಯಿಂದ 1 ಕೋಟಿ ರೂಪಾಯಿವರೆಗೆ ಹೂಡಿಕೆ ಮಾಡಿದ್ದಾರೆ. ಕಂಪನಿಯಲ್ಲಿ ಹೂಡಿಕೆ ಮಾಡಿದವರನ್ನು ವಿಚಾರಣೆ ನಡೆಸಲು ಸಿಐಡಿ ಮುಂದಾಗಿದ್ದು ಈ ನಾಲ್ವರು ಆಟಗಾರರಿಗೂ ಸಮನ್ಸ್ ನೀಡಿದೆ.
ಶುಭಮನ್ ಗಿಲ್ ಈಗ ಆಸ್ಟ್ರೇಲಿಯಾದಲ್ಲಿದ್ದರೆ ಉಳಿದ ಮೂವರು ಆಟಗಾರರು ಭಾರದಲ್ಲಿದ್ದಾರೆ. ತನಿಖೆಗೆ ಸಹಕರಿಸಲು ಎಲ್ಲರೂ ಗುಜರಾತ್ನ ಸಿಐಡಿ ಕಚೇರಿಗೆ ಹಾಜರಾಗಬೇಕಿದೆ. ನಾಲ್ವರ ಲಭ್ಯತೆ ಆಧಾರದ ಮೇಲೆ ವಿಚಾರಣೆಗೆ ಕರೆಯಲಾಗುವುದು ಎಂದು ಹೇಳಾಗಿದೆ.
ಬಿಝಡ್ ಸಂಸ್ಥೆಯು ಜನರಿಗೆ ಬ್ಯಾಂಕ್ಗಳಿಗಿಂತ ಹೆಚ್ಚಿನ ಬಡ್ಡಿದರ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಕೊಟ್ಟ ಭರವಸೆಯಂತೆ ಬಡ್ಡಿದರ ನೀಡದೆ ವಂಚನೆ ಮಾಡಲಾಗುತ್ತಿದೆ ಎಂದು ಹಣ ಹೂಡಿಕೆ ಮಾಡಿದ್ದವರು ಪೊಲೀಸರಿಗೆ ದೂರು ಕೊಟ್ಟಿದ್ದರು. ಬಿಝಡ್ ಫೈನಾನ್ಶಿಯಲ್ ಸರ್ವಿಸಸ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭೂಪೇಂದ್ರಸಿನ್ಹ್ ಝಾಲಾ 6000 ಕೋಟಿ ರೂಪಾಯಿ ಚಿಟ್-ಫಂಡ್ ವಂಚನೆ ಮಾಡಿದ್ದಾರೆ ಎಂದು ಗುಜರಾತ್ ಸಿಐಡಿ ಹೇಳಿತ್ತು, ಹೆಚ್ಚಿನ ತನಿಖೆ ಬಳಿಕ ಇದೀಗ 450 ಕೋಟಿ ರೂಪಾಯಿ ವಂಚನೆ ನಡೆದಿದೆ ಎಂದು ಹೇಳಿದೆ.
ಶುಭಮನ್ ಗಿಲ್ ಸಿಡ್ನಿ ಟೆಸ್ಟ್ನಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ನಾಯಕ ರೋಹಿತ್ ಶರ್ಮಾ ಕೊನೆಯ ಟೆಸ್ಟ್ನಲ್ಲಿ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅವರ ಸ್ಥಾನದಲ್ಲಿ ಗಿಲ್ ಕಣಕ್ಕಿಳಿಯಲಿದ್ದಾರೆ.
-
PBKS Vs GT: ಪಂಜಾಬ್ ಕಿಂಗ್ಸ್ ಪರ ಕೂಪರ್ ಕಾನೊಲಿ ಹರಿಸಿದ ರನ್ ಮಳೆಗೆ ಕೊಚ್ಚಿಹೋದ ಗುಜರಾತ್ ಟೈಟನ್ಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications