Team India: ಭಾರತ ತಂಡಕ್ಕೆ ಶುಭಮನ್ ಗಿಲ್ ನಾಯಕ; ಐಪಿಎಲ್ನಲ್ಲಿ ಮಿಂಚಿದ್ದವರಿಗೆ ಸಿಕ್ತು ಅವಕಾಶ
ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ ತಂಡ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದು, ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ವಿಶ್ವಕಪ್ ನಡೆಯುತ್ತಿರುವಾಗಲೇ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಿದ್ದು, ಹೊಸ ನಾಯಕನನ್ನು ಘೋಷಣೆ ಮಾಡಲಾಗಿದೆ.
ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಶುಭಮನ್ ಗಿಲ್ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದು, ಐಪಿಎಲ್ನಲ್ಲಿ ಗಮನ ಸೆಳೆದ ನಾಲ್ವರು ಆಟಗಾರರಿಗೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿದೆ.

ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ನಿತೀಶ್ ರೆಡ್ಡಿ ಮತ್ತು ತುಷಾರ್ ದೇಶಪಾಂಡೆ ಐಪಿಎಲ್ 2024 ರ ಋತುವಿನಲ್ಲಿ ತಮ್ಮ ಅದ್ಭುತ ಪ್ರದರ್ಶನ ನೀಡಿದ್ದು, ಈಗ ಭಾರತ ತಂಡಕ್ಕೆ ಆಡಲು ಸಜ್ಜಾಗಿದ್ದಾರೆ.
ಯುವ ಆಟಗಾರರಿಗೆ ಅವಕಾಶ
ವಿಶ್ವಕಪ್ನಲ್ಲಿ ಆಡುತ್ತಿರುವ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಯುವ ಆಟಗಾರರಿಗೆ ಅವಕಾಶ ಸಿಕ್ಕಿದೆ. ರಿಂಕು ಸಿಂಗ್, ಧ್ರುವ್ ಜುರೆಲ್ ಮತ್ತು ರವಿ ಬಿಷ್ಣೋಯ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಧ್ರುವ್ ಜುರೆಲ್ ಅಥವಾ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿ ನಿಭಾಯಿಸಲಿದ್ದಾರೆ.
ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್ ಮತ್ತು ನಾಯಕ ಶುಭಮನ್ ಗಿಲ್ ಯುವ ಪಡೆಯೇ ಜಿಂಬಾಬ್ವೆಗೆ ಪ್ರಯಾಣಿಸಲಿದೆ.
ಸೂರ್ಯಕುಮಾರ್ ಯಾದವ್ ಅಥವಾ ಹಾರ್ದಿಕ್ ಪಾಂಡ್ಯ ಜಿಂಬಾಬ್ವೆ ವಿರುದ್ಧದ ಸರಣಿಗೆ ನಾಯಕರಾಗಲಿದ್ದಾರೆ ಎನ್ನಲಾಗಿತ್ತು, ಆದರೆ ಐಪಿಎಲ್ ಬಳಿಕ ವಿಶ್ವಕಪ್ನಲ್ಲಿ ಆಡುತ್ತಿರುವ ಇಬ್ಬರು ವಿಶ್ರಾಂತಿ ಕೇಳಿದ ಕಾರಣ ಅವರಿಗೆ ವಿಶ್ರಾಂತಿ ಕೊಟ್ಟಿದ್ದು, ಗಿಲ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.
ವರುಣ್ ಚಕ್ರವರ್ತಿ ಅಸಮಾಧಾನ?
ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕೆಕೆಆರ್ ತಂಡದ ಸ್ಪಿನ್ನರ್ ವರುಣ್ ಚಕ್ರವರ್ತಿ, ಭಾರತ ತಂಡಕ್ಕೆ ಆಯ್ಕೆಯಾಗದೇ ಇರುವುದು ಅಚ್ಚರಿಗೆ ಕಾರಣವಾಗಿದೆ. ವರುಣ್ ಚಕ್ರವರ್ತಿ ಕೂಡ ಅಸಮಾಧಾನಗೊಂಡಿದ್ದು, ನನಗೂ ಒಳ್ಳೆ ಪಿಆರ್ ಇರಬೇಕಿತ್ತು ಎಂದು ಇನ್ಸ್ಟಾಗ್ರಾಂ ಸ್ಟೋರಿ ಹಾಕಿದ್ದಾರೆ.
ಜಿಂಬಾಬ್ವೆ ವಿರುದ್ಧದ ಸರಣಿಗೆ ಭಾರತ ತಂಡ
ಶುಬ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ.
-
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications