South Africa vs Afghanistan: 106 ರನ್ಗಳಿಗೆ ಆಲೌಟ್ ಆಗಿ ಕೆಟ್ಟ ದಾಖಲೆ ಬರೆದ ದಕ್ಷಿಣ ಆಫ್ರಿಕಾ
ಟಿ20 ವಿಶ್ವಕಪ್ ರನ್ನರ್ ಅಪ್ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನದ ವಿರುದ್ದದ ಏಕದಿನ ಪಂದ್ಯದಲ್ಲಿ ಕೆಟ್ಟ ದಾಖಲೆ ಬರೆದಿದೆ. ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ಪಡೆ ಅಫ್ಘಾನಿಸ್ತಾನ ಬೌಲಿಂಗ್ ದಾಳಿ ಎದುರು ತತ್ತರಿಸಿದೆ. 33.3 ಓವರ್ ಗಳಲ್ಲಿ ಕೇವಲ 106 ರನ್ಗಳಿಗೆ ಆಲೌಟ್ ಆಗಿದ್ದು, ಇದೇ ಮೊದಲ ಬಾರಿಗೆ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಅಫ್ಘಾನಿಸ್ತಾನದ ವಿರುದ್ಧ ಆಲೌಟ್ ಆದ ದಾಖಲೆ ಮಾಡಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ತಂಡದ ಮೊತ್ತ 17 ಆಗಿದ್ದಾಗ ರೀಝಾ ಹೆಂಡ್ರಿಕ್ ವಿಕೆಟ್ ಪಡೆಯುವ ಮೂಲಕ ಫಜಲ್ಹಕ್ ಫಾರೂಕಿ ಹರಿಣಗಳಿಗೆ ಮೊದಲ ಆಘಾತ ನೀಡಿದರು. ಬಳಿಕ ದಕ್ಷಿಣ ಆಫ್ರಿಕಾ ಚೇತರಿಸಿಕೊಳ್ಳಲು ಅಫ್ಘನ್ ಬೌಲರ್ ಗಳು ಅವಕಾಶ ನೀಡಲಿಲ್ಲ.

10 ಓವರ್ ಗಳಲ್ಲಿ 36 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡ ದಕ್ಷಿಣ ಆಫ್ರಿಕಾ 50 ರನ್ ಗಡಿ ದಾಟುವುದು ಕಷ್ಟ ಎನ್ನುವಂತಾಗಿತ್ತು. ವಿಯಾನ್ ಮುಲ್ಡರ್ ಈ ಸಂಕಷ್ಟದಲ್ಲಿ ತಂಡಕ್ಕೆ ಆಸರೆಯಾದರು 84 ಎಸೆತಗಳಲ್ಲಿ 52 ರನ್ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ 100 ರನ್ ಗಡಿ ದಾಟಲು ಪ್ರಮುಖ ಕಾರಣವಾದರು. ಜೋರ್ನ್ ಫಾರ್ಚುನ್ 16 ರನ್ ಗಳಿಸಿದರೆ, ಕೈಲ್ ವೆರೆನ್ನಾಯೆ 10 ರನ್ ಗಳಿಸಿದರು, ಟೋನಿ ಡಿ ಝೋರ್ಜಿ 11 ರನ್ ಗಳಿಸಿದರು.
ಅಫ್ಘಾನಿಸ್ತಾನದ ಮಾರಕ ಬೌಲಿಂಗ್
ಫಜಲ್ಹಕ್ ಫರೂಕಿ 7 ಓವರ್ ಗಳಲ್ಲಿ 35 ರನ್ ಬಿಟ್ಟುಕೊಟ್ಟು 4 ವಿಕೆಟ್ ಪಡೆದು ಮಿಂಚಿದರು. ಅಲ್ಲಾ ಘಜನ್ಫರ್ 10 ಓವರ್ ಗಳಲ್ಲಿ 20 ರನ್ ನೀಡಿ 3 ವಿಕೆಟ್ ಪಡೆದರು. ರಶೀದ್ ಖಾನ್ 8.3 ಓವರ್ ಗಳಲ್ಲಿ 30 ರನ್ ನೀಡಿ 2 ವಿಕೆಟ್ ಪಡೆದುಕೊಂಡರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications