SRH Vs RR: ಭುವಿ ಮ್ಯಾಜಿಕ್; ಸನ್ರೈಸರ್ಸ್ ಹೈದರಾಬಾದ್ಗೆ ಒಂದು ರನ್ ರೋಚಕ ಗೆಲುವು
ಹೈದರಾಬಾದ್ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ರಾಜಸ್ಥಾನ ರಾಯಲ್ಸ್ ವಿರುದ್ಧ 1 ರನ್ನಿಂದ ರೋಚಕ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಸನ್ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲಿ ಎರಡು ವಿಕೆಟ್ ಕಳೆದುಕೊಂಡರು, ಬಳಿಕ ಸುಧಾರಿಸಿಕೊಂಡ ಸನ್ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 201 ರನ್ ಗಳಿಸಿತು.

ಅಭಿಷೇಕ್ ಶರ್ಮಾ 10 ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು. ಅನ್ಮೋಲ್ಪ್ರೀತ್ ಸಿಂಗ್ 5 ಎಸೆತಗಳಲ್ಲಿ 5 ರನ್ ಗಳಿಸಿ ಔಟಾದರು. ಬಳಿಕ ಬಂದ ನಿತೀಶ್ ರೆಡ್ಡಿ ಟ್ರಾವಿಸ್ ಹೆಡ್ ಜೊತೆಗೂಡಿ ಉತ್ತಮ ರನ್ ಕಲೆಹಾಕಿದರು.
ಈ ಜೋಡಿ ಮೂರನೇ ವಿಕೆಟ್ಗೆ 96 ರನ್ ಕಲೆಹಾಕಿದರು. ನಿತೀಶ್ ರೆಡ್ಡಿ 42 ಎಸೆತಗಳಲ್ಲಿ ಅಜೇಯ 76 ರನ್ ಗಳಿಸಿದರು. ಟ್ರಾವಿಸ್ ಹೆಡ್ 44 ಎಸೆತಗಳಲ್ಲಿ 58 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್ 19 ಎಸೆತಗಳಲ್ಲಿ ಅಜೇಯ 42 ರನ್ ಗಳಿಸಿ ತಂಡದ ಮೊತ್ತ 200 ದಾಟಲು ಕಾರಣವಾದರು. ಚಹಾಲ್ 4 ಓವರ್ ಗಳಲ್ಲಿ 62 ರನ್ ಬಿಟ್ಟುಕೊಟ್ಟು ದುಬಾರಿ ಬೌಲರ್ ಎನಿಸಿಕೊಂಡರು.
ಜೈಸ್ವಾಲ್, ರಿಯಾನ್ ಪರಾಗ್ ಭರ್ಜರಿ ಆಟ
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ಮೊದಲ ಓವರ್ ನಲ್ಲೇ 2 ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಜೋಸ್ ಬಟ್ಲರ್ ಮತ್ತು ಸಂಜು ಸ್ಯಾಮ್ಸನ್ ಮೊದಲ ಓವರ್ ನಲ್ಲೇ ಔಟಾದರು.
ಬಳಿಕ ಜೊತೆಯಾದ ಯಶಸ್ವಿ ಜೈಸ್ವಾಲ್ ಮತ್ತು ರಿಯಾನ್ ಪರಾಗ್ ಮೂರನೇ ವಿಕೆಟ್ಗೆ 133 ರನ್ಗಳನ್ನು ಕಲೆಹಾಕಿದರು. ರಿಯಾನ್ ಪರಾಗ್ 49 ಎಸೆತಗಳಲ್ಲಿ 77 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 40 ಎಸೆತಗಳಲ್ಲಿ 67 ರನ್ ಗಳಿಸಿದರು.
ಒಂದು ಹಂತದಲ್ಲಿ ರಾಜಸ್ಥಾನ ರಾಯಲ್ಸ್ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ಇವರಿಬ್ಬರೂ ಔಟಾದ ಬಳಿಕ ಪಂದ್ಯದ ಗತಿ ಬದಲಾಯಿತು. ಶಿಮ್ರಾನ್ ಹೆಟ್ಮೆಯರ್ 13 ರನ್ ಗಳಿಸಿ ಔಟಾದರು. ರೋವ್ಮನ್ ಪೋವೆಲ್ ತಂಡದ ಗೆಲುವಿಗಾಗೊ ಕೊನೆಯವರೆಗೂ ಹೋರಾಡಿದರು ಕೊನೆಯ ಎಸೆತದಲ್ಲಿ 2 ರನ್ ಬೇಕಿದ್ದಾಗ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು.
ಕೊನೆಯ ಓವರ್ ನಲ್ಲಿ 13 ರನ್ ಬೇಕಿದ್ದಾಗ ಭುವನೇಶ್ವರ್ ಕುಮಾರ್ ಅತ್ಯುತ್ತಮ ಬೌಲಿಂಗ್ ಮಾಡುವ ಮೂಲಕ ತಂಡಕ್ಕೆ 1 ರನ್ ರೋಚಕ ಗೆಲುವು ತಂದುಕೊಟ್ಟರು.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications